ಕನ್ನಡಪ್ರಭ ವಾರ್ತೆ ಕೆ.ಆರ್. ನಗರ
ತಾಲೂಕಿನ ಚೌಕಹಳ್ಳಿ ಶನೈಶ್ಚರ ಸ್ವಾಮಿ ದೇವಸ್ಥಾನ, ಶ್ರೀ ಸೂರ್ಯಪುತ್ರ ಸೇವಾ ಆಡಳಿತ ಟ್ರಸ್ಟ್ ಮತ್ತು ಶ್ರೀ ಶಕ್ತಿ ಛಾಯಾದೇವಿ ಸೂರ್ಯಪುತ್ರ ಸೇವಾ ಟ್ರಸ್ಟ್ ವತಿಯಿಂದ ಡಿ.4ರಿಂದ 6ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಡಿ. 4ರ ಬುಧವಾರ ಬೆಳಗ್ಗೆ 9.30ಕ್ಕೆ ಗಣಪತಿಪೂಜೆ, ಪುಣ್ಯಾಹ, ಪಂಚಗವ್ಯ ಹೋಮ, ವಾಸ್ತು ಹೋಮ, ರಾಕ್ಷೋಘ್ನ ಹೋಮ, ಕ್ಷೇತ್ರಬಲಿ ಮತ್ತು ದಿಗ್ಬಲಿಪೂಜೆ ನಡೆಯಲಿದ್ದು, ಸಂಜೆ 7ಕ್ಕೆ ಪ್ರಸಾದ ವಿನಿಯೋಗ ಮಾಡಲಾಗುತ್ತದೆ.
ಕಾರ್ಯಕ್ರಮದ ಸಾನಿಧ್ಯವನ್ನು ಕಾಗಿನೆಲೆ ಕನಕಗುರು ಪೀಠ ಮೈಸೂರು ವಿಭಾಗ ಮಠದ ಶಿವಾನಂದಪುರಿ ಸ್ವಾಮೀಜಿ ಮತ್ತು ಗಾವಡಗೆರೆ ಗುರುಲಿಂಗ ಜಂಗಮ ಮಠದ ನಟರಾಜ ಸ್ವಾಮೀಜಿ ವಹಿಸಲಿದ್ದು, ಶಾಸಕ ಡಿ. ರವಿಶಂಕರ್ ಅಧ್ಯಕ್ಷತೆ ವಹಿಸುವರು.ಡಿ. 5ರ ಗುರುವಾರ ಬೆಳಗ್ಗೆ 7 ರಿಂದ 10ರವರೆಗೆ ಮಹಾಸಂಕಲ್ಪ, ಕಳಸ ಸ್ಥಾಪನೆ ಮತ್ತು ಪೂಜಾ ಜಪ ಹೋಮಾಧಿಗಳು ನಡೆಯಲಿದ್ದು 10.30 ರಿಂದ 1.30ರವರೆಗೆ ಉಚಿತ ಆರೋಗ್ಯ ತಪಾಸಣೆ ಮಾಡಲಿದ್ದು, ಆನಂತರ ಸಂಜೆ 4ಕ್ಕೆ ಸುತ್ತೂರು ಮಠದ ಶಿವರಾತ್ರಿದೇಶಿಕೇಂದ್ರ ಶ್ರೀಗಳು ದೇವಾಲಯದ ಸ್ವಾಗತ ಕಾಮಾನ್ ಅನ್ನು ಉದ್ಘಾಟಿಸಿ, ಶ್ರೀ ಸೂರ್ಯಪುತ್ರ ಸಭಾ ಭವನದ ಪ್ರಸಾದ ಭವನಕ್ಕೆ ಗುದ್ದಲಿ ಪೂಜೆ ನಡೆಸಿ ಆನಂತರ ಆಶೀರ್ವಚನ ನೀಡುವರು.
ಕಾಗಿನೆಲೆ ಕನಕಗುರು ಪೀಠದ ಶಿವಾನಂದಪುರಿ ಸ್ವಾಮೀಜಿ, ಗಾವಡಗೆರೆ ಗುರುಲಿಂಗ ಜಂಗಮ ಮಠದ ನಟರಾಜ ಸ್ವಾಮೀಜಿ, ಅರಕೆರೆ ವಿರಕ್ತ ಮಠದ ಸಿದ್ದೇಶ್ವರ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಾಸಕ ಡಿ. ರವಿಶಂಕರ್ ಅಧ್ಯಕ್ಷತೆ ವಹಿಸುವರು.ಮುಖ್ಯಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್, ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ.ಪಿ. ರಮೇಶ್ ಕುಮಾರ್, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಣ್ಣಲಿಂಗಪ್ಪ, ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯ ಎಲ್.ಪಿ. ರವಿಕುಮಾರ್, ಉದ್ಯಮಿ ಎಸ್.ವಿ.ಎಸ್. ಸುರೇಶ್ ಭಾಗವಹಿಸುವರು.
ಡಿ. 6ರಂದು ಶುಕ್ರವಾರ ಬೆಳಗ್ಗೆ ದೇವರ ಪ್ರತಿಷ್ಠಾಪನೆ, ರಾಜ ಗೋಪುರ ಕಳಸ ಪ್ರತಿಷ್ಠಾಪನೆ, ನಂತರ ಪೂರ್ಣಾಹುತಿ ಹಾಗೂ ಮಹಾಮಂಗಳಾರತಿ, 10ಕ್ಕೆ ನಡೆಯುವ ಸಭಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು.ಕಾಗಿನೆಲೆ ಕನಕಗುರು ಪೀಠದ ಡಾ. ನಿರಂಜನಾನಂದ ಸ್ವಾಮೀಜಿ, ಆದಿ ಚುಂಚನಗಿರಿ ಮಠಾಧಿಪತಿ ಡಾ. ನಿರ್ಮಲಾನಂದ ಸ್ವಾಮೀಜಿ ಮತ್ತು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೆಂದ್ರಹೆಗ್ಗಡೆ ಸಾನ್ನಿಧ್ಯ ವಹಿಸುವರು.
ಕಾಗಿನೆಲೆ ಕನಕಗುರು ಪೀಠದ ಶಿವಾನಂದಪುರಿ ಸ್ವಾಮೀಜಿ, ಗಾವಡಗೆರೆ ಗುರುಲಿಂಗ ಜಂಗಮ ಮಠದ ನಟರಾಜಸ್ವಾಮೀಜಿ, ಆದಿ ಚುಂಚನಗಿರಿ ಮೈಸೂರು ಶಾಖಾ ಮಠದ ಸೋಮೇಶ್ವರ ನಾಥ ಸ್ವಾಮೀಜಿ ಮತ್ತು ಅರಕೆರೆ ವಿರಕ್ತ ಮಠದ ಸಿದ್ದೇಶ್ವರಸ್ವಾಮೀಜಿ ಪಾಲ್ಗೊಳ್ಳುವರು.ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ಉದ್ಘಾಟಿಸಲಿದ್ದು, ಶಾಸಕ ಡಿ. ರವಿಶಂಕರ್ ಅಧ್ಯಕ್ಷತೆ ವಹಿಸುವರು. ಮುಖ್ಯಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಎಚ್. ವಿಶ್ವನಾಥ್, ಡಾ. ಯತೀಂದ್ರ ಸಿದ್ದರಾಮಯ್ಯ, ಡಾ.ಡಿ. ತಿಮ್ಮಯ್ಯ, ಗುಂಡ್ಲುಪೇಟೆ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್, ಮಾಜಿ ಸಚಿವ ಸಾ.ರಾ. ಮಹೇಶ್, ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ, ನವನಗರ ಬ್ಯಾಂಕ್ ಅಧ್ಯಕ್ಷ ಕೆ.ಎನ್. ಬಸಂತ್, ಪುರಸಭೆ ಸದಸ್ಯರಾದ ಕೆ.ಪಿ. ಪ್ರಭುಶಂಕರ್, ನಟರಾಜು, ರಾಜ್ಯ ಆರ್ಟಿಒ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್, ಮೂಳೆ ತಜ್ಞ ಡಾ. ಮೆಹಬೂಬ್ ಖಾನ್ ಮತ್ತು ಮುಖಂಡ ಚೌಡೇಗೌಡ ಭಾಗವಹಿಸುವರು.
------------