ಪಡಿತರ ಧಾನ್ಯಗಳ ಅಕ್ರಮ ಸಾಗಾಟ ಶಂಕೆ: ಲಾರಿ, ಚಾಲಕ ವಶ

KannadaprabhaNewsNetwork |  
Published : May 21, 2026, 02:00 AM IST
ಕ್ಯಾಪ್ಷನ20ಕೆಡಿವಿಜಿ36 ದಾವಣಗೆರೆಯಲ್ಲಿ ಪಡಿತರ ಧಾನ್ಯಗಳ ಅಕ್ರಮ ಸಾಗಾಟ ನಡೆದಿದೆ ಎಂಬ ಶಂಕೆಯ ಮೇರೆಗೆ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದರು. | Kannada Prabha

ಸಾರಾಂಶ

ದಾವಣಗೆರೆ ನಗರದ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಡಿತರ ಧಾನ್ಯಗಳ ಅಕ್ರಮ ಸಾಗಾಟ ನಡೆದಿದೆ ಎಂಬ ಶಂಕೆ ಮೇರೆಗೆ ಪೊಲೀಸರು ಲಾರಿ ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.

- 26.20 ಕ್ವಿಂ ರಾಗಿ, 91 ಕ್ವಿಂ. ಅಕ್ಕಿ, ಸಾರವರ್ಧಿತ ಅಕ್ಕಿ ಪತ್ತೆ

- - -

ದಾವಣಗೆರೆ: ನಗರದ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಡಿತರ ಧಾನ್ಯಗಳ ಅಕ್ರಮ ಸಾಗಾಟ ನಡೆದಿದೆ ಎಂಬ ಶಂಕೆ ಮೇರೆಗೆ ಪೊಲೀಸರು ಲಾರಿ ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.

ಪೊಲೀಸರಿಗೆ ಬಂದ ಖಚಿತ ಮಾಹಿತಿ ಆಧಾರದ ಮೇಲೆ, ನಗರದ ಹಳೆಯ ಪಿ.ಬಿ. ರಸ್ತೆಯ ಟಿವಿಎಸ್ ಶೋ ರೂಂ ಹಿಂಭಾಗದ ಪ್ರದೇಶದಲ್ಲಿ ಸಂಶಯಾಸ್ಪದವಾಗಿ ನಿಂತಿದ್ದ ಲಾರಿಯೊಂದನ್ನು ಪೊಲೀಸ್ ಅಧಿಕಾರಿಗಳು ತಡೆದಿದ್ದಾರೆ. ಬಳಿಕ ಲಾರಿಯನ್ನು ವಿದ್ಯಾನಗರ ಠಾಣೆಗೆ ತಂದು ಪರಿಶೀಲಿಸಲಾಯಿತು. ಈ ವೇಳೆ ಲಾರಿಯಲ್ಲಿದ್ದ ಪ್ಲಾಸ್ಟಿಕ್ ಚೀಲಗಳಲ್ಲಿ 26.20 ಕ್ವಿಂಟಲ್ ರಾಗಿ ಸಂಗ್ರಹ ಕಂಡುಬಂದಿದೆ. ಈ ರಾಗಿ ಪಡಿತರ ವ್ಯವಸ್ಥೆಯಲ್ಲಿ ಸಾರ್ವಜನಿಕರಿಗೆ ವಿತರಿಸುವ ಧಾನ್ಯವಾಗಿರಬಹುದೆಂಬ ಅನುಮಾನ ವ್ಯಕ್ತವಾಗಿದೆ.

ಇದೇ ವೇಳೆ ಲಾರಿಯ ತಳಭಾಗದಲ್ಲಿದ್ದ ಕೆಲವು ಪ್ಲಾಸ್ಟಿಕ್ ಚೀಲಗಳಲ್ಲಿ 91 ಕ್ವಿಂಟಲ್ ಅಕ್ಕಿ ಹಾಗೂ ಸಾರವರ್ಧಿತ ಅಕ್ಕಿ ಪತ್ತೆಯಾಗಿದೆ. ಸರ್ಕಾರಿ ಯೋಜನೆಗಳಡಿ ವಿತರಿಸಲಾಗುವ ಅಕ್ಕಿ ಮತ್ತು ರಾಗಿಯನ್ನು ಗೋಣಿ ಚೀಲಗಳಿಂದ ತೆಗೆದು ಪ್ಲಾಸ್ಟಿಕ್ ಚೀಲಗಳಿಗೆ ಬದಲಾಯಿಸಿ. ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು ಎಂಬ ಶಂಕೆ ವ್ಯಕ್ತವಾಗಿದೆ.

ಈ ಸಂಬಂಧ ಲಾರಿ ಚಾಲಕ ಮತ್ತು ಮಾಲೀಕರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ, 1955ರ ಅಡಿ ಪ್ರಕರಣ ದಾಖಲಿಸಿರುವ ವಿದ್ಯಾನಗರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

- - -

-20ಕೆಡಿವಿಜಿ36: ದಾವಣಗೆರೆಯಲ್ಲಿ ಪಡಿತರ ಧಾನ್ಯಗಳ ಅಕ್ರಮ ಸಾಗಾಟ ಶಂಕೆ ಮೇರೆಗೆ ಪೊಲೀಸರು ಲಾರಿ, ಚಾಲಕನನ್ನು ವಶಕ್ಕೆ ಪಡೆದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಲೇಬೆನ್ನೂರು ಆರೋಗ್ಯ ಕೇಂದ್ರದಲ್ಲಿ ಸಮಸ್ಯೆಗಳ ಪರಿಹರಿಸಿ
ಕಸ ಸಂಗ್ರಹ ಗಾಡಿಗಳು ನಾಪತ್ತೆ: ಕೆಎಚ್‌ಬಿ ಕಾಲೋನಿಯಲ್ಲಿ ದುರ್ನಾತ!