ಅಮಾನತುಗೊಂಡಿದ್ದ ಮುಖ್ಯ ಶಿಕ್ಷಕಿ ಮರು ನಿಯೋಜನೆ

KannadaprabhaNewsNetwork |  
Published : Jun 05, 2026, 02:15 AM IST
ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ಮುಖ್ಯ ಶಿಕ್ಷಕಿ ಶಾಂತಾ ಹೂಗಾರ ಅವರ ಅಮಾನತ್ತು ರದ್ದುಮಾಡಿ ಮರುನೇಮಕ ಮಾಡಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಮುಖ್ಯ ಶಿಕ್ಷಕಿಗೆ ಸನ್ಮಾನಿಸಿದರು. | Kannada Prabha

ಸಾರಾಂಶ

ಮುಖ್ಯ ಶಿಕ್ಷಕಿಯ ಅಮಾನತು ಖಂಡಿಸಿ ಗ್ರಾಮಸ್ಥರು, ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದ್ದರು. ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಮುಖ್ಯ ಶಿಕ್ಷಕಿಯನ್ನು ಮರು ನೇಮಕ ಮಾಡಲಾಗಿದೆ.

ಕುಂದಗೋಳ:

ತಾಲೂಕಿನ ಹಿರೇಕುರಣಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶಾಂತಾ ಹೂಗಾರ ಅಮಾನತು ಆದೇಶ ಹಿಂಪಡೆದು ಅದೇ ಶಾಲೆಗೆ ಮರುನೇಮಕ ಮಾಡಲಾಗಿದೆ ಎಂದು ಬಿಇಒ ಮಹಾದೇವಿ ಮಾಡಲಗೇರಿ ಹೇಳಿದರು.

ಅವರು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯ ಶಿಕ್ಷಕಿಯ ಅಮಾನತು ಖಂಡಿಸಿ ಗ್ರಾಮಸ್ಥರು, ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದ್ದರು. ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಮುಖ್ಯ ಶಿಕ್ಷಕಿಯನ್ನು ಮರು ನೇಮಕ ಮಾಡಲಾಗಿದೆ. ಜತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಇದಕ್ಕೆ ಸಂಬಂಧಿಸಿದಂತೆ ಆದೇಶ ಹೊರಡಿಸಲಾಗಿದ್ದು, ಶಾಂತಾ ಹೂಗಾರ ಅವರನ್ನು ಹಿರೇಹರಕುಣಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮರು ನಿಯೋಜಿಸಲಾಗಿದೆ. ಎಲ್ಲ ವಿದ್ಯಾರ್ಥಿಗಳು ಶುಕ್ರವಾರದಿಂದ ನಿಯಮಿತವಾಗಿ ಶಾಲೆಗೆ ಹಾಜರಾಗಿ ತಮ್ಮ ಶಿಕ್ಷಣ ಚಟುವಟಿಕೆಗಳನ್ನು ಮುಂದುವರಿಸಲಿದ್ದಾರೆ ಎಂದರು.

ಮುಖ್ಯ ಶಿಕ್ಷಕಿಯ ಮರುನೇಮಕ ಆದೇಶ ಮಾಡಿದ ಹಿನ್ನೆಲೆ ಗುರುವಾರ ಗ್ರಾಮಸ್ಥರು, ವಿದ್ಯಾರ್ಥಿಗಳು, ಗ್ರಾಮ ಶಿಕ್ಷಣ ಸಮಿತಿ ಸದಸ್ಯರು. ಮುಖ್ಯ ಶಿಕ್ಷಕಿ ಶಾಂತಾ ಹೂಗಾರ ಅವರನ್ನು ಹೂಗುಚ್ಚ ನೀಡಿ ಶಾಲೆಗೆ ಬರಮಾಡಿಕೊಂಡರು.

ಈ ವೇಳೆ ಎಸ್‌ಡಿಎಂಸಿ ಅಧ್ಯಕ್ಷರು ಉಪಾಧ್ಯಕ್ಷರು, ಸದಸ್ಯರು, ಗ್ರಾಮಸ್ಥರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್ಐಟಿ ರಚನೆ ಆದಾಗ ಡಾ। ಹೆಗ್ಗಡೆ ಜೈಲಿಗೆ ಹೋಗ್ತಾರೆ ಅಂತ ಸಂಭ್ರಮಿಸಿತ್ತು ಬುರುಡೆ ಗ್ಯಾಂಗ್‌: ಚಿನ್ನಯ್ಯ
ಗೃಹಲಕ್ಷ್ಮಿ ಸ್ಕೀಂನಿಂದ 3.89 ಲಕ್ಷ ಮಂದಿ ಫಲಾನುಭವಿಗಳು ಔಟ್‌