ಅಮಾನತು; ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

KannadaprabhaNewsNetwork |  
Published : Jun 06, 2025, 11:49 PM IST
ಸಸಸಸ | Kannada Prabha

ಸಾರಾಂಶ

ಹನ್ನೊಂದು ಜನ ಅಮಾಯಕ ಯುವಕರನ್ನು ಬಲಿ ತೆಗೆದುಕೊಂಡಿರುವುದನ್ನು ಯಾರದ್ದೋ ತಲೆಗೆ ಕಟ್ಚಿ, ನಾವೇನೂ ಮಾಡಿಲ್ಲ ಅಂತ ಕೈತೊಳೆದುಕೊಳ್ಳುವ ಕೆಲಸ ಸಿಎಂ ಹಾಗೂ ಡಿಸಿಎಂ ಮಾಡುತ್ತಿದ್ದಾರೆ

ಹುಬ್ಬಳ್ಳಿ: ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರ ತನ್ನ ಬೇಜವಾಬ್ದಾರಿ ಮುಚ್ಚಿಕೊಳ್ಳಲು ಪೊಲೀಸ್ ಅಧಿಕಾರಿಗಳ ಅಮಾನತು ಮಾಡುವ ಮೂಲಕ ಗುಬ್ಬಿ ಮೇಲೆ ಬ್ರಹ್ಮಾಸ್ತ ಪ್ರಯೋಗ ಮಾಡಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನ್ನೊಂದು ಜನ ಅಮಾಯಕ ಯುವಕರನ್ನು ಬಲಿ ತೆಗೆದುಕೊಂಡಿರುವುದನ್ನು ಯಾರದ್ದೋ ತಲೆಗೆ ಕಟ್ಚಿ, ನಾವೇನೂ ಮಾಡಿಲ್ಲ ಅಂತ ಕೈತೊಳೆದುಕೊಳ್ಳುವ ಕೆಲಸ ಸಿಎಂ ಹಾಗೂ ಡಿಸಿಎಂ ಮಾಡುತ್ತಿದ್ದಾರೆ. ಆ ಮೂಲಕ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಂದಿಸುವ ಕೆಲಸ ಮಾಡಿದ್ದಾರೆ ಎಂದರು.

ಕಂಠೀರವ ಸ್ಟೇಡಿಯಂ ಬಳಿ ಸೇರಿದ ಜನಸ್ತೋಮವನ್ನು ನಿಭಾಯಿಸುವಲ್ಲಿ ವಿಫಲವಾಗಿರುವುದೇ ಕಾಲ್ತುಳಿತಕ್ಕೆ ಕಾರಣ. ಇದು ಸರ್ಕಾರದ ವೈಫಲ್ಯವಲ್ಲದೇ ಮತ್ತೇನು ಅಲ್ಲ. ಕೂಡಲೇ ಸಿಎಂ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಕಾರ್ಯಕ್ರಮ ಆಯೋಜಿಸಲು ಹೇಳಿದವರು ಯಾರು ಎಂಬುದು ಈವರೆಗೆ ಹೊರಗೆ ಬಂದಿಲ್ಲ ಏಕೆ ಎಂದು ಪ್ರಶ್ನಿಸಿದರು.

ಬಿಜೆಪಿ ಈ ವಿಚಾರದಲ್ಲಿ ರಾಜಕಾರಣ ಮಾಡುತ್ತಿಲ್ಲ. ನಿಮ್ಮ ತಪ್ಪು ಮುಚ್ಚಿಕೊಳ್ಳಲು ಅನೇಕರ ಮೇಲೆ ಕ್ರಮ ಕೈಕೊಳ್ಳಲು ಸರ್ಕಾರ ಮುಂದಾಗಿದೆ. ಆದರೆ,ಕಾರ್ಯಕ್ರಮ ಆಯೋಜನೆ ಮಾಡಿದ ನಿಮ್ಮ ಮೇಲೆ ಯಾರು ಎಫ್‌ಐಆರ್ ಮಾಡಬೇಕು..? ಎಂದು ಶಾಸಕ ಟೆಂಗಿನಕಾಯಿ ಪ್ರಶ್ನಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಜ್ರ, ಚಿನ್ನ ಪತ್ತೆಗೆ 6.71 ಲಕ್ಷ ಹೆಕ್ಟೇರ್‌ ಭೂ ಗುರುತು
ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ