ಡಿಡಿಪಿಐ ಸೇರಿ ಇಬ್ಬರ ಅಧಿಕಾರಿಗಳ ಅಮಾನತ್ತು

KannadaprabhaNewsNetwork |  
Published : Jan 31, 2024, 02:18 AM IST
ಡಿಡಿಪಿಐ ಎನ್.ಎಚ್ ನಾಗೂರ, | Kannada Prabha

ಸಾರಾಂಶ

ಕರ್ತವ್ಯಲೋಪ ತೋರಿದ ಹಿನ್ನೆಲೆ ವಿಜಯಪುರ ಸಾರ್ವಜನಿಕ ಶಿಕ್ಷಣ ಇಲಾಖೆಯ ಮೂವರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ವಿಜಯಪುರ ಡಿಡಿಪಿಐ ಎನ್.ಎಚ್.ನಾಗೂರ, ವಿಜಯಪುರ ಡಯಟ್ ಹಿರಿಯ ಉಪನ್ಯಾಸಕ ಎಸ್.ಎ.ಮುಜಾವರ ಹಾಗೂ ಎ.ಎಸ್.ಹತ್ತಳ್ಳಿ ಅಮಾನತುಗೊಂಡಿದ್ದಾರೆ.

ವಿಜಯಪುರ: ಕರ್ತವ್ಯಲೋಪ ತೋರಿದ ಹಿನ್ನೆಲೆ ವಿಜಯಪುರ ಸಾರ್ವಜನಿಕ ಶಿಕ್ಷಣ ಇಲಾಖೆಯ ಮೂವರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ವಿಜಯಪುರ ಡಿಡಿಪಿಐ ಎನ್.ಎಚ್.ನಾಗೂರ, ವಿಜಯಪುರ ಡಯಟ್ ಹಿರಿಯ ಉಪನ್ಯಾಸಕ ಎಸ್.ಎ.ಮುಜಾವರ ಹಾಗೂ ಎ.ಎಸ್.ಹತ್ತಳ್ಳಿ ಅಮಾನತುಗೊಂಡಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅವರು ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ. 2009-10 ಹಾಗೂ 2011-12 ಸಾಲಿ‌ನಲ್ಲಿ ಐಇಡಿಎಸ್ ಎಸ್ ಯೋಜನೆ ಅನುದಾನ ದುರುಪಯೋಗ ಮಾಡಿರೋ ಆರೋಪವಿರುವದರಿಂದ ಸಾರ್ವಜನಿಕ ಶಿಕ್ಷಣ ಇಲಾಖಾ ವಿಚಾರಣೆ ಕಾಯ್ದಿರಿಸಿ ಮಂಗಳವಾರ ಅಮಾನತು ಆದೇಶ ಹೊರಡಿಸಿದ್ದಾರೆ. ಅಸ್ತಿತ್ವದಲ್ಲಿ ಇರದ ಎನ್‌ಜಿಒಗಳಿಗೆ ನಿಯಮ ಬಾಹಿರವಾಗಿ ಹಣ ಬಿಡುಗಡೆ ಮಾಡಿರೋ ಆರೋಪವಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಶಂಕರಪ್ಪ ಕರ್ನಾಟಕ ರತ್ನಕ್ಕೆ ಅರ್ಹ : ಶ್ರೀ
ಮೈಸೂರು ಹೀಲಿಯಂ ಸಿಲಿಂಡರ್‌ ಸ್ಫೋಟ : ಎನ್‌ಐಎ ಭೇಟಿ