ಕನ್ನಡಪ್ರಭ ವಾರ್ತೆ ಉಡುಪಿ
ಮಂಗಳೂರು ವಿಶ್ವವಿದ್ಯಾಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಇಲ್ಲಿನ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನಡೆದ, ವಿವೇಕವಾಣಿ ಸರಣಿಯ 35ನೇ ಉಪನ್ಯಾಸ ‘ಸ್ವಾಮಿ ವಿವೇಕಾನಂದರ ಬೋಧನೆಗಳ ಬೆಳಕಿನಲ್ಲಿ ವ್ಯಕ್ತಿತ್ವ ವಿಕಸನ’ ಎಂಬ ವಿಷಯದ ಕುರಿತು ಅವರು ಮಾತನಾಡಿದರು.
ಧ್ಯಾನ, ನೈತಿಕತೆ, ಧೈರ್ಯ ಮುಂತಾದ ಮೌಲ್ಯಗಳನ್ನು ಅನುಸರಿಸುವುದರಿಂದ ಒಬ್ಬನ ವ್ಯಕ್ತಿತ್ವ ವಿಕಸಿತವಾಗುತ್ತದೆ. ಆದರೆ, ಅವರ ಬೋಧನೆಗಳನ್ನು ಅನುಸರಿಸಲು ಪ್ರಯತ್ನ ಮಾತ್ರ ಸಾಲದು, ಅದು ಅನುಭವದ ಮೂಲಕ ಸಾಧ್ಯ. ವ್ಯಕ್ತಿತ್ವ ಅನ್ವೇಷಣೆಯ ಪಥದಲ್ಲಿ ಪ್ರತಿಯೊಬ್ಬರೂ ತಮ್ಮ ಅನುಭವಗಳನ್ನು ಅನುಸರಿಸಬೇಕಾಗಿದೆ ಎಂದರು.ಕಾಲೇಜು ಪ್ರಾಂಶುಪಾಲರಾದ ಡಾ. ರಾಮು ಎಲ್., ಮಂಗಳೂರಿನ ರಾಮಕೃಷ್ಣ ಮಿಷನ್ ಹಿರಿಯ ಸ್ವಯಂಸೇವಕ ಪರಮೇಶ್ವರ ಅಡಿಗ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕ ವೃಂದದವರು ಮತ್ತು ಪದವಿ ವಿದ್ಯಾರ್ಥಿಗಳು ಭಾಗವಹಿಸಿದರು.
ರಾಮಕೃಷ್ಣ ಮಿಷನ್ ನ ಕಾರ್ಯಕ್ರಮ ಸಂಯೋಜಕ ರಂಜನ್ ಬೆಳ್ಳಾರ್ಪಾಡಿ ಅವರು ಸ್ವಾಗತಿಸಿ, ಕಾರ್ಯಕ್ರಮ ಸಂಯೋಜಕ ಸಂದೀಪ್ ವಂದಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ನಾಯಕಿ ನಿಖಿತಾ ಕಾರ್ಯಕ್ರಮ ನಿರೂಪಿಸಿದರು.