ಸ್ವಾಮಿ ವಿವೇಕಾನಂದರು ಹುರುಪು, ಹುಮ್ಮಸ್ಸಿನ ಸಂಚಲನ

KannadaprabhaNewsNetwork |  
Published : Apr 06, 2025, 01:51 AM IST
ಚಿತ್ರ 1 | Kannada Prabha

ಸಾರಾಂಶ

ಸರಸ್ವತಿ ಕಾನೂನು ಕಾಲೇಜಿನಲ್ಲಿ ನಡೆದ 2 ದಿನಗಳ ರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ನ್ಯಾಯಮೂರ್ತಿ ಕೃಷ್ಣ ಶ್ರೀಪಾದ್ ದೀಕ್ಷಿತ್ ಮಾತನಾಡಿದರು.

ರಾಷ್ಟ್ರೀಯ ಸಮ್ಮೇಳನ ಸಮಾರೋಪ ಸಮಾರಂಭದಲ್ಲಿ ನ್ಯಾ.ಕೃಷ್ಣ ಶ್ರೀಪಾದ ದೀಕ್ಷಿತ್ ಅಭಿಮತ ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಭಾರತದ ಹಿರಿಮೆ, ಗರಿಮೆ, ಉತ್ಕೃಷ್ಟತೆಯನ್ನು ಹೊರ ದೇಶಗಳಲ್ಲಿ ಹೊಗಳಿರುವ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು ಎಂದ ಕೂಡಲೆ ಎಲ್ಲರಿಗೂ ಒಂದು ರೀತಿಯ ಹುರುಪು, ಹುಮ್ಮಸ್ಸು ಸಂಚಲನವಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಶ್ರೀಪಾದ ದೀಕ್ಷಿತ್ ತಿಳಿಸಿದರು.

ನಗರದ ಸರಸ್ವತಿ ಕಾನೂನು ಕಾಲೇಜಿನಲ್ಲಿ ವರ್ತಮಾನದ ಸನ್ನಿವೇಶದಲ್ಲಿ ಯುವಕರ ಬಗೆಗಿನ ಸ್ವಾಮಿ ವಿವೇಕಾನಂದರ ಚಿಂತನೆಗಳ ಪ್ರಸ್ತುತತೆ ಬಗ್ಗೆ 2 ದಿನಗಳ ಕಾಲ ನಡೆದ ರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಅಮೇರಿಕಾದ ಚಿಕಾಗೋದಲ್ಲಿ ಭಾಷಣ ಮಾಡಿದ ಸ್ವಾಮಿ ವಿವೇಕಾನಂದರು, ಭಾರತದ ಬಗ್ಗೆ ಬೇರೆ ದೇಶಗಳಲ್ಲಿರುವ ತಪ್ಪು ಕಲ್ಪನೆಯನ್ನು ಹೋಗಲಾಡಿಸಿದರು. ಭಾರತವೆಂದರೆ ಜ್ಞಾನದ ನಾಡು ಎನ್ನುವುದು ಅವರ ಪರಿಕಲ್ಪನೆಯಾಗಿತ್ತು. ತುಂಬಾ ಬಡತನದ ಕುಟುಂಬ ಅವರದು. ಜಾತಿಯತೆ ನಿರ್ಮೂಲನೆಯಾಗುವ ತನಕ ಭಾರತದ ಉದ್ದಾರ ಸಾಧ್ಯವಿಲ್ಲ ಎಂದು ವಿವೇಕಾನಂದರು ಹೇಳಿದ್ದನ್ನು ಸ್ಮರಿಸಿಕೊಂಡ ನ್ಯಾಯಾಧೀಶ ಕೃಷ್ಣ ಶ್ರೀಪಾದ ದೀಕ್ಷಿತ್‍ರವರು ರಾಮಾಯಣ, ಮಹಾಭಾರತ, ಸಂವಿಧಾನವನ್ನು ಕೊಡುಗೆಯಾಗಿ ಕೊಟ್ಟವರು ಮೇಲ್ಜಾತಿಯವರಲ್ಲ ಎನ್ನುವ ಜಾಗೃತಿ ಎಲ್ಲರಲ್ಲಿಯೂ ಇರಬೇಕು ಎಂದು ಹೇಳಿದರು. ವಿಕ್ರಮಾದಿತ್ಯನಿಗೆ ಸಲಹೆ ಕೊಟ್ಟವನು ಕಾಳಿದಾಸ. 10 ಉಪನಿಷತ್ತುಗಳಲ್ಲಿ ಮೂರ್ನಾಲ್ಕು ಉಪನಿಷತ್ತುಗಳನ್ನು ಕೊಟ್ಟವರು ಕೆಳಜಾತಿಯವರು. ಸನಾತನ ಧರ್ಮ ಭಾರತೀಯರಿಗೆ ಪೂರಕವಾಗಿದೆ ಎನ್ನುವುದು ಸ್ವಾಮಿ ವಿವೇಕಾನಂದರವರ ಆಶಯವಾಗಿತ್ತು. ಸನಾತನ ಧರ್ಮಕ್ಕೆ ತನ್ನದೆಯಾದ ವೈಶಿಷ್ಠ್ಯತೆಯಿದೆ. ಹಾಗಾಗಿ ಧರ್ಮ ಉಳಿಸಲು ಪ್ರಯತ್ನಿಸುತ್ತೇನೆ. ಮನುಷ್ಯ ತನ್ನಲ್ಲಿರುವ ಕೀಳರಿಮೆಯನ್ನು ಬಿಡಬೇಕೆಂದು ಸ್ವಾಮಿ ವಿವೇಕಾನಂದರು ಹೇಳಿದ್ದರು.

ಉತ್ಕಷ್ಟವಾದ ಚಿಂತನೆ ಅವರದು. ದೇಶಕ್ಕೆ ಸಂವಿಧಾನವನ್ನು ಕೊಡುಗೆಯಾಗಿ ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಅತ್ಯಂತ ಕೆಳ ಸಮುದಾಯದವರು. ಜಾತಿ ನಿರ್ಮೂಲನೆ ಅವರ ಉದ್ದೇಶವಾಗಿತ್ತು. ಆದರೆ ಇಂದಿಗೂ ಜಾತಿ ತಾರತಮ್ಯ ನಿವಾರಣೆಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸ್ವಾಮಿ ವಿವೇಕಾನಂದರ ಬರವಣಿಗೆ, ಪ್ರವಚನಕ್ಕೆ ಮಹಾತ್ಮಗಾಂಧಿ ಕೂಡ ಪ್ರಭಾವಿತರಾಗಿದ್ದರು. ಮೋತಿಲಾಲ್ ನೆಹರೂಗೆ ಭಾರತದ ಮೇಲೆ ಪ್ರೀತಿಯಿತ್ತು. ಜಾತಿಯತೆ, ಮೌಢ್ಯ ನಮ್ಮ ದೇಶದಲ್ಲಿದ್ದರೂ ಭಾರತ ಒಂದು ಅನುಭೂತಿ. ಅನೇಕರು ಈ ದೇಶಕ್ಕೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ. ಭಾರತ ಪುಣ್ಯ ಭೂಮಿ ಎಂದು ಹೇಳಿರುವ ಸ್ವಾಮಿ ವಿವೇಕಾನಂದರವರಲ್ಲಿದ್ದ ಚಿಂತನೆ ಎಲ್ಲರ ಜೀವನದಲ್ಲಿ ಹಾಸು ಹೊಕ್ಕಾಗಬೇಕು. ಪ್ರಖರ ವಾಗ್ಮಿ, ಜ್ಞಾನಿಯಾಗಿದ್ದ ಸ್ವಾಮಿ ವಿವೇಕಾನಂದರು ಯುವ ಜನಾಂಗದ ಮೇಲೆ ಅಪಾರವಾದ ವಿಶ್ವಾಸ ನಂಬಿಕೆಯಿಟ್ಟುಕೊಂಡಿದ್ದರು. ಅದಕ್ಕಾಗಿ ಯುವ ಜನಾಂಗ ತಪ್ಪು ಕಲ್ಪನೆ ತಲೆಯಲ್ಲಿ ಸೇರಲು ಅವಕಾಶ ಕೊಡಬಾರದು. ಒಂದು ದಿನಕ್ಕೆ 106 ಸೆಟಲೈಟ್‍ಗಳನ್ನು ಅಂತರಿಕ್ಷಕ್ಕೆ ಹಾರಿ ಬಿಟ್ಟ ದೇಶ ನಮ್ಮದು ಎನ್ನುವ ಪ್ರೌಢಿಮೆ ಇರಬೇಕು. ಕೋವಿಡ್‍ನಲ್ಲಿ ಬೇರೆ ದೇಶಗಳಿಗೆ ಔಷಧಿಯನ್ನು ಕಳಿಸಿ ಪ್ರಾಣ ಉಳಿಸಿದ ಹೆಗ್ಗಳಿಕೆ ಭಾರತಕ್ಕಿದೆ ಎಂದು ಹೇಳಿದರು.

ಈ ವೇಳೆ ಸರಸ್ವತಿ ಕಾನೂನು ಕಾಲೇಜು ಅಧ್ಯಕ್ಷ ಎಚ್.ಹನುಮಂತಪ್ಪ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊ.ಸಿ.ಬಸವರಾಜು, ನಿವೃತ್ತ ನ್ಯಾಯಮೂರ್ತಿ ಎಚ್.ಬಿಲ್ಲಪ್ಪ, ರಾಜ್ಯ ಎನ್.ಎಸ್.ಎಸ್.ಅಧಿಕಾರಿ ಪ್ರತಾಪ್ ಲಿಂಗಯ್ಯ, ಸರಸ್ವತಿ ಕಾನೂನು ಕಾಲೇಜು ಉಪಾಧ್ಯಕ್ಷರಾದ ಫಾತ್ಯರಾಜನ್, ಡಿ.ಕೆ.ಶೀಲಾ, ಎನ್.ಎಸ್.ಎಸ್.ಕೋ-ಆರ್ಡಿನೇಟರ್ ಐ.ಬಿ.ಬೀರಾದರ್, ಸರಸ್ವತಿ ಕಾನೂನು ಕಾಲೇಜು ಪ್ರಾಚಾರ್ಯರಾದ ಡಾ.ಎಂ.ಎಸ್.ಸುಧಾದೇವಿ, ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ