ಸ್ವಾಮೀಜಿಗಳ ಆಶೀರ್ವಚನ ಸಮಾಜದಲ್ಲಿ ಬದಲಾವಣೆ ತರಬಲ್ಲದು

KannadaprabhaNewsNetwork | Published : Oct 5, 2024 1:44 AM

ಸಾರಾಂಶ

ನಾಡಿನ ಮಠಾಧೀಶರು ಯುವಸಮೂಹಕ್ಕೆ ದೇಶದ, ನಾಡಿನ ಸಂಸ್ಕೃತಿ, ಸಂಸ್ಕಾರಗಳನ್ನು ಅಳವಡಿಸಿಕೊಳ್ಳುವಂತೆ ಬುದ್ಧಿಮಾತು ಹೇಳಬೇಕು. ರಾಜಕಾರಣಿಗಳ ಭಾಷಣದಿಂದ ಇದು ಸಾಧ್ಯವಿಲ್ಲ. ಆದರೆ, ಮಠಗಳಲ್ಲಿ ನಡೆಯುವ ಧಾರ್ಮಿಕ ಸಭೆಗಳಲ್ಲಿ ಮಠಾಧಿಪತಿಗಳ ಆಶೀರ್ವಚನಗಳಿಂದ ಸಮಾಜದ ಬದಲಾವಣೆ ಸಾಧ್ಯ ಎಂದು ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.

- ಹಿರೇಕಲ್ಮಠದಲ್ಲಿ ಶರನ್ನವರಾತ್ರಿ- ದಸರಾ ಮಹೋತ್ಸವ ಉದ್ಘಾಟಿಸಿ ಶಾಸಕ ಶಾಂತನಗೌಡ - - - ಕನ್ನಡಪ್ರಭ ವಾರ್ತೆ ಹೊನ್ನಾಳಿ

ನಾಡಿನ ಮಠಾಧೀಶರು ಯುವಸಮೂಹಕ್ಕೆ ದೇಶದ, ನಾಡಿನ ಸಂಸ್ಕೃತಿ, ಸಂಸ್ಕಾರಗಳನ್ನು ಅಳವಡಿಸಿಕೊಳ್ಳುವಂತೆ ಬುದ್ಧಿಮಾತು ಹೇಳಬೇಕು. ರಾಜಕಾರಣಿಗಳ ಭಾಷಣದಿಂದ ಇದು ಸಾಧ್ಯವಿಲ್ಲ. ಆದರೆ, ಮಠಗಳಲ್ಲಿ ನಡೆಯುವ ಧಾರ್ಮಿಕ ಸಭೆಗಳಲ್ಲಿ ಮಠಾಧಿಪತಿಗಳ ಆಶೀರ್ವಚನಗಳಿಂದ ಸಮಾಜದ ಬದಲಾವಣೆ ಸಾಧ್ಯ ಎಂದು ಡಿ.ಜಿ.ಶಾಂತನಗೌಡ ಹೇಳಿದರು.

ಪಟ್ಟಣದ ಹಿರೇಕಲ್ಮಠದ ಶ್ರೀ ಜಗದ್ಗುರು ಪಂಚಾಚಾರ್ಯ ಸಮುದಾಯ ಭವನದಲ್ಲಿ ಅ.3ರಿಂದ ಅ.12ರವಗೆರೆ ಹಮ್ಮಿಕೊಳ್ಳಲಾಗಿರುವ ಶರನ್ನವರಾತ್ರಿ ಮತ್ತು ದಸರಾ ಮಹೋತ್ಸವದ ಮೊದಲ ದಿನ ಗುರುವಾರ ರಾತ್ರಿ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ನೀಡಿ ಅವರು ಮಾತನಾಡಿದರು.

ತಮ್ಮ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯಿಂದಾಗಿ ಬಹುಪಾಲು ಮಹಿಳೆಯರು ಎಲ್ಲ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಳ್ಳುವಂತಾಗಿದೆ. ಇತ್ತೀಚಿನ ದಿನಗಳಲ್ಲಿ ಮೊಬೈಲ್‌ಗಳು ಜೀವನದ ಅವಿಭಾಜ್ಯ ಅಂಗವಾದಂತಾಗಿವೆ ಎಂದರು.

ಹಿರೇಕಲ್ಮಠದ ಒಡೆಯರ್ ಡಾ.ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿ ಮಾತನಾಡಿ, ಶ್ರೀ ಮಠದಲ್ಲಿ ದಸರಾ ಹಬ್ಬದ ಪ್ರಯುಕ್ತ ನಾಡಿನ ಒಳಿತಿಗಾಗಿ ಹೋಮ, ಪೂಜಾ, ಉಪನ್ಯಾಸ, ವಿದ್ಯಾರ್ಥಿಗಳಿಂದ ಸಾಂಸ್ಕತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಮುಖಂಡ ಬಿ.ಸಿದ್ದಪ್ಪ ಮಾತನಾಡಿದರು. ಚನ್ನಪ್ಪಸ್ವಾಮಿ ವಿದ್ಯಾಪೀಠದ ಕಾರ್ಯದರ್ಶಿ ಚನ್ನಯ್ಯ ಬೆನ್ನೂರುಮಠ, ಶಿಮುಲ್ ನಿರ್ದೇಶಕ ಬಿ.ಜಿ. ಹನುಮನಹಳ್ಳಿ ಬಸವರಾಜಪ್ಪ, ಟಿ.ಬಿ.ವೃತ್ತದ ಕಸಬಾ ಸೊಸೈಟಿ ಅಧ್ಯಕ್ಷ ದಿಡಗೂರು ಎ.ಜಿ.ಪ್ರಕಾಶ್, ಮುಖಂಡ ಸಣ್ಣಕ್ಕಿ ಬಸವನಗೌಡ ಮಾತನಾಡಿದರು.

ಹರಿಹರದ ನಿವೃತ್ತ ಪ್ರಾಚಾರ್ಯ ಎಚ್.ಎ. ಭಿಕ್ಷಾವರ್ತಿಮಠ ಅವರು ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯದ ಕುರಿತಾಗಿ ಉಪನ್ಯಾಸ ನೀಡಿದರು. ಶ್ರೀ ಮಂಜುನಾಥ ದೇವರು ದೇವಿ ಪುರಾಣ ವಾಚಿಸಿದರು.

ಓಂಕಾರೇಶ್ವರ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆಯನ್ನು ವಹಿಸಿದ್ದರು, ವೇದಿಕೆಯಲ್ಲಿ ಸವಳಂಗ ಕಲ್ಲೇಶ್ವರ ಮಠದ ಅಕ್ಕಮಹಾದೇವಿ ಮಾತಾಜಿ, ಕಾಂಗ್ರೆಸ್ ಮುಖಂಡರಾದ ಎಚ್.ಎ.ಉಮಾಪತಿ, ಎಚ್.ಬಿ.ಶಿವಯೋಗಿ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯರಾದ ಪುಷ್ಪಾರವೀಶ್, ವನಜಾಕ್ಷಮ್ಮ, ಚನ್ನಪ್ಪಸ್ವಾಮಿ ವಿದ್ಯಾಪೀಠದ ನಿರ್ದೇಶಕ ಕೋರಿ ಮಲ್ಲಿಕಾರ್ಜುನಪ್ಪ,ಮಠದ ವ್ಯವಸ್ಫಾಪಕರಾದ ಎಂ.ಪಿ.ಎಂ.ಚನ್ನಬಸಯ್ಯ, ಪತ್ರಕರ್ತ ಎಂ.ಪಿ.ಎಂ. ವಿಜಯಾನಂದ ಕುಮಾರಸ್ವಾಮಿ, ಸವಿತಾ ಉಮೇಶ್‍ ನಾಡಿಗ್ ಮತ್ತಿತರರು ಉಪಸ್ಥಿತರಿದ್ದರು.

ಕಡದಕಟ್ಟೆ ತಿಮ್ಮಪ್ಪನವರು ಸಂಗೀತ ಸಂಯೋಜಿಸಿ ಹಾಡಿರುವ ಧ್ವನಿಮುದ್ರಿಕೆಯನ್ನು ಗಣ್ಯರು ಬಿಡುಗಡೆಗೊಳಿಸಿದರು. ಶ್ರೀ ಚನ್ನಮಲ್ಲಿಕಾರ್ಜುನ ಸ್ವಾಮಿ ಶಾಲೆ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕತಿಕ ಕಾರ್ಯಕ್ರಮಗಳು ಜನರ ಮನಸೂರೆಗೊಂಡವು.

- - - -4ಎಚ್.ಎಲ್.ಐ2:

ಹಿರೇಕಲ್ಮಠದ ಶ್ರೀ ಜಗದ್ಗುರು ಪಂಚಾಚಾರ್ಯ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿರುವ ಶರನ್ನವರಾತ್ರಿ ಮತ್ತು ದಸರಾ ಮಹೋತ್ಸವ ಕಾರ್ಯಕ್ರಮಕ್ಕೆ ಗುರುವಾರ ರಾತ್ರಿ ಶಾಸಕ ಡಿ.ಜಿ.ಶಾಂತನಗೌಡ ಚಾಲನೆ ನೀಡಿದರು.

Share this article