ಹೊಯ್ಸಳ ಶೈಲಿಯ ಭವ್ಯ ದೇವಾಲಯ ಲೋಕಾರ್ಪಣೆಗೊಳಿಸಿದ ಸ್ವರ್ಣವಲ್ಲೀ ಶ್ರೀ

KannadaprabhaNewsNetwork |  
Published : Jun 20, 2026, 02:00 AM IST
ಬೆಂಗಳೂರಿನ ಶ್ರೀ ಸ್ವಾನಂದಾಶ್ರಮದ ಗಣೇಶ ಸಂಸ್ಥಾನದ ಆವರಣದಲ್ಲಿ ನಿರ್ಮಾಣಗೊಂಡಿರುವ ದೇವಾಲಯವನ್ನು ಶ್ರೀ ಗಂಗಾಧರೇಂದ್ರ ಸರಸ್ವತೀ‌‌ ಮಹಾಸ್ವಾಮಿಗಳು ಲೋಕಾರ್ಪಣೆಗೊಳಿಸಿದರು. | Kannada Prabha

ಸಾರಾಂಶ

ಬೆಂಗಳೂರಿನ ಶ್ರೀ ಸ್ವಾನಂದಾಶ್ರಮದ ಗಣೇಶ ಸಂಸ್ಥಾನದ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಹೊಯ್ಸಳ ಶೈಲಿಯ ಭವ್ಯ ದೇವಾಲಯದ ಪ್ರಥಮ ಹಂತದ ಲೋಕಾರ್ಪಣೆಯನ್ನು ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾ‌ಸಂಸ್ಥಾನದ‌‌ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತೀ‌‌ ಮಹಾಸ್ವಾಮಿಗಳು ನೆರವೇರಿಸಿದರು.

ಶಿರಸಿ: ಶ್ರೀ ಮಠದ ಅಂಗ ಸಂಸ್ಥೆಯಾದ ಬೆಂಗಳೂರಿನ ಶ್ರೀ ಸ್ವಾನಂದಾಶ್ರಮದ ಗಣೇಶ ಸಂಸ್ಥಾನದ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಹೊಯ್ಸಳ ಶೈಲಿಯ ಭವ್ಯ ದೇವಾಲಯದ ಪ್ರಥಮ ಹಂತದ ಲೋಕಾರ್ಪಣೆಯನ್ನು ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾ‌ಸಂಸ್ಥಾನದ‌‌ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತೀ‌‌ ಮಹಾಸ್ವಾಮಿಗಳು ನೆರವೇರಿಸಿದರು.

ಈ ಮಹೋತ್ಸವದ ಪ್ರಯುಕ್ತ ಶ್ರೀ ಏಕಾಕ್ಷರ ಮಹಾಗಣಪತಿ ಅಷ್ಟಬಂಧ ಪ್ರತಿಷ್ಠಾಪನೆ, ಮುದ್ಗಲ ಪುರಾಣೋಕ್ತ 32 ಗಣಪತಿಗಳು ಹಾಗೂ ಗಣೇಶ ಪುರಾಣದಲ್ಲಿ ಉಲ್ಲೇಖಗೊಂಡಿರುವ 4 ಯುಗ ಗಣಪತಿಗಳ ಪ್ರತಿಷ್ಠಾಪನೆ ಕಾರ್ಯಕ್ರಮಗಳು ಶ್ರೀಗಳ‌ ಸಾನ್ನಿಧ್ಯದಲ್ಲಿ ಶಾಸ್ತ್ರೋಕ್ತವಾಗಿ ಜರುಗಿದವು.

ಬೆಳಗ್ಗೆ ಕರ್ಕ ಲಗ್ನದ ಶುಭ ಮುಹೂರ್ತದಲ್ಲಿ ವೇದಘೋಷ, ಮಂತ್ರೋಚ್ಚಾರಣೆ ಹಾಗೂ ಧಾರ್ಮಿಕ ವಿಧಿ-ವಿಧಾನಗಳ ಮಧ್ಯೆ ಗಣಪತಿ ದೇವರ ಮೂರ್ತಿ ಪ್ರತಿಷ್ಠಾಪನೆ ನೆರವೇರಿತು. ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಭಕ್ತರು ಈ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು. ಇದೇ ಸಂದರ್ಭದಲ್ಲಿ ಶ್ರೀ ಆನಂದಬೋಧೇಂದ್ರ ಸರಸ್ವತೀ ಸ್ವಾಮಿಗಳು ರಚಿಸಿದ ಗಣಪತಿಯ ಸ್ತುತಿಸುವ ಶ್ಲೋಕಗಳನ್ನು ಸಮರ್ಪಿಸಿದರು.

ಬಳಿಕ ಆಶ್ರಮದ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಶ್ರೀಗಳು, ಭಕ್ತಿ, ಧರ್ಮ ಹಾಗೂ ಭಾರತೀಯ ಶಿಲ್ಪಕಲೆಯ ಮಹತ್ವವನ್ನು ವಿವರಿಸಿದರು. ಹೊಯ್ಸಳ ಶೈಲಿಯ ಈ ದೇವಾಲಯವು ಸಮಾಜಕ್ಕೆ ಶಾಂತಿ, ಸೌಹಾರ್ದ ಹಾಗೂ ಆಧ್ಯಾತ್ಮಿಕ ಚೈತನ್ಯ ನೀಡುವ ಕೇಂದ್ರವಾಗಲಿ ಎಂದು ಹಾರೈಸಿದರು.

ಎಲ್ಲರೂ ದೇವಸ್ಥಾನಗಳಿಗೆ ಹೋಗುವ ಹಾಗೆ ಆಗಲಿ. ವಿಶೇಷವಾಗಿ ಇಂದಿನ ಮಕ್ಕಳಿಗೆ ತಮ್ಮ ಪಾಲಕರು ದೇವಸ್ಥಾನಗಳನ್ನು ತೋರಿಸಿ ಚಿಕ್ಕಂದಿನಿಂದಲೇ ದೇವರ ಮೇಲೆ ಶ್ರದ್ಧಾ-ಭಕ್ತಿಗಳು ಜಾಗ್ರತವಾಗುವ ಹಾಗೆ ಮಾಡಿ ಎಂದು ನುಡಿದರು.

ಗಣೇಶ ವಿಗ್ರಹ ನಿರ್ಮಾಣ ಮಾಡುವ ಶಿಲ್ಪಿಗಳಿಗೆ ಈ ದೇವಾಲಯ ಮಾದರಿಯಾಗುವಂತಾಗಲಿ ಎಂದು ಆಶೀರ್ವದಿಸಿದರು.

ಹರಿಹರಪುರದ ಆದಿಶಂಕರಾಚಾರ್ಯ ಶಾರದಾ ಲಕ್ಷ್ಮೀನೃಸಿಂಹ ಪೀಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತೀ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.

ಮೈಸೂರಿನ ಭಾರತೀಯ ಯೋಗಧಾಮದ ಅಧ್ಯಕ್ಷ ಡಾ. ಕೆ.ಎಲ್. ಶಂಕರನಾರಾಯಣ ಜೋಯಿಸ್ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯಾರ್ಥಿಯ ಯಶಸ್ವಿ ಬದುಕಿಗೆ ಪಠ್ಯೇತರ ಚಟುವಟಿಕೆಗಳು ಪೂರಕ
ಬೀದಿ ನಾಯಿ ಹಾವಳಿ ನಿಯಂತ್ರಣಕ್ಕೆ ನಗರಸಭೆ ದಿಟ್ಟಕ್ರಮ