ಈಜು ಸ್ಪರ್ಧೆ: ಎಕ್ಸಲೆಂಟ್ ವಿದ್ಯಾರ್ಥಿಗಳಿಂದ ಗಮನಾರ್ಹ ಸಾಧನೆ

KannadaprabhaNewsNetwork |  
Published : Aug 27, 2026, 03:15 AM IST
ಈಜು ಸ್ಪರ್ಧೆ: ಎಕ್ಸಲೆಂಟ್ ವಿದ್ಯಾರ್ಥಿಗಳಿಂದ ಗಮನಾರ್ಹ ಸಾಧನೆ- ಹಲವು ಪದಕ  | Kannada Prabha

ಸಾರಾಂಶ

ಇಲ್ಲಿನ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಂಗಳೂರು ವತಿಯಿಂದ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಹಲವು ಪದಕಗಳನ್ನು ಗೆದ್ದಿದ್ದಾರೆ.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಇಲ್ಲಿನ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಂಗಳೂರು ವತಿಯಿಂದ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಹಲವು ಪದಕಗಳನ್ನು ಗೆದ್ದಿದ್ದಾರೆ.ಸಂಮೇಧ್ ಪಿ ಜೈನ್ ಒಂದು ಬೆಳ್ಳಿ ಪದಕ, ವರುಣ್ ಜಿ ಪಾಟೀಲ್ ಒಂದು ಕಂಚಿನ ಪದಕ ಹಾಗೂ ನಿರಾಂತ್ ಕುಮಾರ್ ಗೌಡ ಎರಡು ಕಂಚಿನ ಪದಕಗಳನ್ನು ಗೆದ್ದಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಆಡಳಿತ ನಿರ್ದೇಶಕ ಡಾ. ಬಿ. ಪಿ. ಸಂಪತ್ ಕುಮಾರ್, ಶೈಕ್ಷಣಿಕ ನಿರ್ದೇಶಕ ಪುಷ್ಪರಾಜ್, ಮುಖ್ಯಶಿಕ್ಷಕ ಶಿವಪ್ರಸಾದ್ ಭಟ್, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಡುಪಿ - ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ ಮಹಾಸಭೆ
ಸೆ. 8, ಮೊಂತಿ ಫೆಸ್ತ್‌ಗೆ ರಜೆ ನೀಡಲು ಸಿಎಂಗೆ ಕಥೊಲಿಕ್ ಸಭಾ ಮನವಿ