ಯೋಗ ಸಂಸ್ಕೃತಿ-ಪರಂಪರೆಯ ಪ್ರತೀಕ: ಕೇಂದ್ರ ಸಚಿವ ಎಚ್‌ಡಿಕೆ

KannadaprabhaNewsNetwork |  
Published : Jun 22, 2026, 01:30 AM IST
೨೧ಕೆಎಂಎನ್‌ಡಿ-೧ಮಂಡ್ಯದ ಪಿಇಟಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಉದ್ಘಾಟಿಸಿದರು.  | Kannada Prabha

ಸಾರಾಂಶ

ವಿಶ್ವ ಯೋಗ ದಿನವನ್ನು ವಿಶ್ವದ ಎಲ್ಲಾ ಭಾಗಗಳಲ್ಲೂ ಆಚರಣೆ ಮಾಲಾಗುತ್ತಿದೆ. ಭಾರತದ ೨,೫೦೦ ಸ್ಥಳಗಳಲ್ಲಿ ಆಚರಿಸಲಾಗುತ್ತಿದೆ. ಯೋಗ ಮತ್ತು ಧ್ಯಾನ ಮಾಡುವುದರಿಂದ ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಪ್ರತಿಯೊಬ್ಬರೂ ನಿತ್ಯ ೧೫ ರಿಂದ ೨೦ ನಿಮಿಷ ಯೋಗ ಮತ್ತು ಧ್ಯಾನ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಯೋಗವು ಭಾರತದ ಪ್ರಾಚೀನ ಸಂಸ್ಕೃತಿ ಮತ್ತು ಪರಂಪರೆಯ ಅಮೂಲ್ಯ ಕೊಡುಗೆ. ದೇಹ, ಮನಸ್ಸು ಮತ್ತು ಆತ್ಮದ ನಡುವೆ ಸಮತೋಲನವನ್ನು ಸಾಧಿಸುವುದಕ್ಕೆ ಯೋಗ ಅತ್ಯುತ್ತಮ ಸಾಧನವಾಗಿದೆ. ಆರೋಗ್ಯಕರ ಜೀವನಕ್ಕೆ ಅತ್ಯುತ್ತಮ ಮಾರ್ಗವಾಗಿದೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ನಗರದ ಪಿಇಟಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಹನ್ನೆರಡನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿಶ್ವ ಯೋಗ ದಿನವನ್ನು ವಿಶ್ವದ ಎಲ್ಲಾ ಭಾಗಗಳಲ್ಲೂ ಆಚರಣೆ ಮಾಲಾಗುತ್ತಿದೆ. ಭಾರತದ ೨,೫೦೦ ಸ್ಥಳಗಳಲ್ಲಿ ಆಚರಿಸಲಾಗುತ್ತಿದೆ. ಯೋಗ ಮತ್ತು ಧ್ಯಾನ ಮಾಡುವುದರಿಂದ ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಪ್ರತಿಯೊಬ್ಬರೂ ನಿತ್ಯ ೧೫ ರಿಂದ ೨೦ ನಿಮಿಷ ಯೋಗ ಮತ್ತು ಧ್ಯಾನ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ ಎಂದರು.

ಶ್ರೀರಂಗಪಟ್ಟಣ ಬೇಬಿ ಮಠ ಚಂದ್ರವನ ಆಶ್ರಮದ ಶ್ರೀತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಮಾತನಾಡಿ, ನಮ್ಮ ದೇಶದ ಮಕ್ಕಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ. ಇದು ಮನಸ್ಸಿನ ಏಕಾಗ್ರತೆ, ಆತ್ಮ ನಿಯಂತ್ರಣ ಮತ್ತು ಆಧ್ಯಾತ್ಮಿಕ ಬೆಳವಣಿಗೆಯನ್ನು ಉತ್ತೇಜಿಸುವ ಸಮಗ್ರ ಜೀವನ ಪದ್ಧತಿ. ನಿಯಮಿತವಾಗಿ ಯೋಗಾಭ್ಯಾಸ ಮಾಡುವುದರಿಂದ ದೇಹದ ನಮ್ಯತೆ ಹೆಚ್ಚುತ್ತದೆ, ರೋಗ ನಿರೋಧಕ ಶಕ್ತಿ ವೃದ್ಧಿಯಾಗುತ್ತದೆ ಮತ್ತು ಹೃದಯ, ಉಸಿರಾಟ ಹಾಗೂ ಜೀರ್ಣಕ್ರಿಯೆ ಸುಧಾರಿಸುತ್ತದೆ. ಜೊತೆಗೆ, ಒತ್ತಡ, ಖಿನ್ನತೆ ಮತ್ತು ಆತಂಕದಂತಹ ಮಾನಸಿಕ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹ ಯೋಗವು ಸಹಾಯಕವಾಗಿದೆ ಎಂದರು.

ಆದಿ ಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಶ್ರೀಪುರುಷೋತ್ತಮಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಆರ್.ನಂದಿನಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ.ವಿ.ಜೆ.ಶೋಭಾರಾಣಿ, ಎಸ್.ಬಿ.ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಮೆರಿಕದಲ್ಲಿ ಮಂಡ್ಯ ಗಿರೀಶ್‌ರವರ ಕನ್ನಡ ಕೃತಿಗಳ ಲೋಕಾರ್ಪಣೆ
ಸರ್ವ ರೋಗಕ್ಕೂ ಯೋಗ ದಿವ್ಯೌಷಧ: ಡಿ.ಎನ್.ಶ್ರೀಪಾದು