ಫೆಬ್ರವರಿ 16ಕ್ಕೆ ಸ್ವಾಭಿಮಾನಿ ಬಳಗದ ವಿಚಾರ ಸಂಕ್ರಾಂತಿ: ಜಿ.ಬಿ.ವಿನಯಕುಮಾರ

KannadaprabhaNewsNetwork |  
Published : Feb 05, 2025, 12:32 AM IST
1ಕೆಡಿವಿಜಿ92-ದಾವಣಗೆರೆಯಲ್ಲಿ ಶನಿವಾರ ಸ್ವಾಭಿಮಾನಿ ಬಳಗ ರಾಜ್ಯಾಧ್ಯಕ್ಷ ಜಿ.ಬಿ.ವಿನಯಕುಮಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಸ್ವಾಭಿಮಾನಿ ಬಳಗದಿಂದ ವಿಚಾರ ಸಂಕ್ರಾಂತಿ ಹಾಗೂ ಕುಟುಂಬ ರಾಜಕಾರಣ ಪ್ರಜಾಪ್ರಭುತ್ವ ಹಾಗೂ ಅಭಿವೃದ್ಧಿಗೆ ಮಾರಕವೇ? ಪ್ರಬಂಧ ಸ್ಪರ್ಧೆಯಲ್ಲಿ ಪಾಲ್ಗೊಂಡ ಸ್ಪರ್ಧಿಗಳಿಗೆ ಬಹುಮಾನ ವಿತರಣೆ ಸಮಾರಂಭ ನಗರದ ಶ್ರೀ ಶಿವಯೋಗಿ ಮಂದಿರದಲ್ಲಿ ಫೆ.16ರಂದು ನಡೆಯಲಿದೆ ಎಂದು ಬಳಗದ ರಾಜ್ಯಾಧ್ಯಕ್ಷ ಜಿ.ಬಿ.ವಿನಯಕುಮಾರ ತಿಳಿಸಿದರು.

ಕುಟುಂಬ ರಾಜಕಾರಣ ಬಗ್ಗೆ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ

ಕನ್ನಡಪ್ರಭ ವಾರ್ತೆ ದಾವಣಗೆರೆ

ಸ್ವಾಭಿಮಾನಿ ಬಳಗದಿಂದ ವಿಚಾರ ಸಂಕ್ರಾಂತಿ ಹಾಗೂ ಕುಟುಂಬ ರಾಜಕಾರಣ ಪ್ರಜಾಪ್ರಭುತ್ವ ಹಾಗೂ ಅಭಿವೃದ್ಧಿಗೆ ಮಾರಕವೇ? ಪ್ರಬಂಧ ಸ್ಪರ್ಧೆಯಲ್ಲಿ ಪಾಲ್ಗೊಂಡ ಸ್ಪರ್ಧಿಗಳಿಗೆ ಬಹುಮಾನ ವಿತರಣೆ ಸಮಾರಂಭ ನಗರದ ಶ್ರೀ ಶಿವಯೋಗಿ ಮಂದಿರದಲ್ಲಿ ಫೆ.16ರಂದು ನಡೆಯಲಿದೆ ಎಂದು ಬಳಗದ ರಾಜ್ಯಾಧ್ಯಕ್ಷ ಜಿ.ಬಿ.ವಿನಯಕುಮಾರ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಅಂದು ಬೆಳಿಗ್ಗೆ 10ಕ್ಕೆ ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಶ್ರೀ ಜಯದೇವ ವೃತ್ತದವರೆಗೆ ಮೆರವಣಿಗೆ ನಡೆಯಲಿದೆ ಎಂದರು.

ನಂತರ ಶ್ರೀ ಶಿವಯೋಗಿ ಮಂದಿರದಲ್ಲಿ ಚಿತ್ರದುರ್ಗ ಮುರುಘಾ ಮಠದ ಶ್ರೀ ಬಸವಪ್ರಭು ಸ್ವಾಮೀಜಿ, ಹೊನ್ನಾಳಿ ಹಿರೇಕಲ್ಮಠದ ಡಾ.ಒಡೆಯರ್ ಮಲ್ಲಿಕಾರ್ಜುನ ಸ್ವಾಮೀಜಿ ಸಾನಿಧ್ಯದಲ್ಲಿ ವಿಚಾರ ಸಂಕ್ರಾಂತಿ ಕಾರ್ಯಕ್ರಮ ನಡೆಯಲಿದೆ. ಸಾಮಾಜಿಕ ಕಳಕಳಿಯುಳ್ಳ, ಪ್ರಜ್ಞಾವಂತ ಹೋರಾಟಗಾರರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.

ಪ್ರಬಂಧ ಸ್ಪರ್ಧೆಯ ಮೂರು ವಿಭಾಗಗಳ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಮೊದಲ ಬಹುಮಾನ 20 ಸಾವಿರ ರು., ದ್ವಿತೀಯ ಬಹುಮಾನ 15 ಸಾವಿರ ರು., ಮೂವರಿಗೆ 15 ಸಾವಿರ ರು. ನಗದು ಬಹುಮಾನ ನೀಡಲಾಗುವುದು. 282 ಪ್ರಬಂಧಗಳು ಸ್ಪರ್ಧೆಗೆ ಬಂದಿದ್ದು, ಅವುಗಳ ಪೈಕಿ ಬಹುತೇಕ ಪ್ರಬಂಧಗಳು ಕುಟುಂಬ ರಾಜಕಾರಣದ ವಿರುದ್ಧವೇ ಬಂದಿವೆ. ಇದೇ ವೇದಿಕೆಯಲ್ಲಿ ವಿಚಾರ ಕುರಿತಂತೆ ಪ್ರಬಂಧ ಸ್ಪರ್ಧೆ ವಿಜೇತರು ಸಹ ಮಾತನಾಡಲಿದ್ದಾರೆ ಎಂದು ತಿಳಿಸಿದರು.

ಬಳಗದ ಜಿಲ್ಲಾಧ್ಯಕ್ಷ ಶಿವಕುಮಾರ ಶೆಟ್ಟರ್, ರಾಜ್ಯ ಸಂಘಟನಾ ಕಾರ್ಯದರ್ಶಿ ವಿರುಪಾಕ್ಷಪ್ಪ ಪಂಡಿತ್‌, ಅಹಿಂದ ಮುಖಂಡ ಎಸ್.ಎಂ.ಸಿದ್ದಲಿಂಗಪ್ಪ, ರಾಜ್ಯ ಸಂಚಾಲಕ ಮೊಹಮ್ಮದ್ ಸಾದಿಕ್‌, ಜಿಲ್ಲಾ ಸಂಚಾಲಕ ಎಸ್.ಚಂದ್ರಶೇಖರ ಇತರರು ಇದ್ದರು.

ಅಡ್ಡಿಪಡಿಸಿದರೂ ಸ್ವಾಭಿಮಾನಿ ಬಳಗ ಗಟ್ಟಿ:

ಹರಿಹರ ತಾ. ಮಲೆಬೆನ್ನೂರು ಗ್ರಾಮದಲ್ಲಿ ಸಾರ್ವಜನಿಕ ಜನತಾ ಅದಾಲತ್ ವೇಳೆ ತಮಗೆ ಅಧಿಕಾರಿಗಳು ಅಡ್ಡಿಪಡಿಸುವಂತೆ ಹರಿಹರ ಕ್ಷೇತ್ರದ ಕೆಲ ಕಾಂಗ್ರೆಸ್ ಮುಖಂಡರು ತೆರೆ ಮರೆಯಲ್ಲೇ ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದು, ಇಂತಹದ್ದು ನೀವು ಹೆಚ್ಚು ಮಾಡಿದಷ್ಟೂ ಸ್ವಾಭಿಮಾನಿ ಬಳಗ ಹಾಗೂ ನಮ್ಮ ಹೋರಾಟವೂ ತೀವ್ರಗೊಳ್ಳುತ್ತ ಸಾಗುತ್ತದೆ ಎಂದು ಜಿ.ಬಿ.ವಿನಯಕುಮಾರ ಗುಟುರು ಹಾಕಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾತನಾಡುವ, ಜನರ ಅಹವಾಲು ಆಲಿಸುವ ಅಧಿಕಾರ ಎಲ್ಲರಿಗೂ ಇದೆ. ಆದರೆ, ಅಧಿಕಾರಿ ವರ್ಗವನ್ನು ಬಳಸಿಕೊಂಡು, ಪಕ್ಷದ ತಮ್ಮ ಕೆಲವು ಹಿಂಬಾಲಕರನ್ನು ಕಳಿಸಿ, ಸ್ವಾಭಿಮಾನಿ ಬಳಗ ಸಮಾಜಮುಖಿ ಕಾರ್ಯಕ್ಕೆ ಅಡ್ಡಿಪಡಿಸಲು ಯತ್ನಿಸಿದರು. ನೀವು ಎಷ್ಟೇ ಅಡ್ಡಿಪಡಿಸಿದರೂ ಅಷ್ಟೇ ಬಲವಾಗಿ ನಮ್ಮ ಕಾರ್ಯಕ್ರಮಗಳು, ಚಟುವಟಿಕೆಗಳೂ ನಡೆಯುತ್ತವೆ ಎಂದರು.

ದಾವಣಗೆರೆ ಮಹಾ ನಗರ ಪಾಲಿಕೆ ಸೇರಿದಂತೆ ಮುಂಬರುವ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗಳಿಗೆ ಸ್ವಾಭಿಮಾನಿ ಬಳಗದ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ದಾವಣಗೆರೆ ಪಾಲಿಕೆಯ ಎಲ್ಲಾ 45 ವಾರ್ಡ್‌ನಲ್ಲೂ ನಮ್ಮ ಅಭ್ಯರ್ಥಿಗಳ ಸ್ಪರ್ಧೆ ಇರಲಿದೆ. ಜನರೂ ಸಹ ಬದಲಾವಣೆ ಬಯಸುತ್ತಿದ್ದಾರೆ. ಅದು ಸ್ವಾಭಿಮಾನಿ ಬಳಗದ ಮೂಲಕವೇ ಆಗಲಿದೆ ಎಂದು ಅವರು ತಿಳಿಸಿದರು.

ಫೆ.3ರಂದು ಹೊನ್ನಾಳಿಯಲ್ಲಿ ದ್ವಿತೀಯ ಪಿಯುಸಿ ನಂತರ ಮುಂದೆ ಏನು ಎಂಬ ಬಗ್ಗೆ ದಿಕ್ಸೂಚಿ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಪಿಯುಸಿ ನಂತರ ಯಾವ ಕೋರ್ಸ್ ಪಡೆದರೆ ಅನುಕೂಲ ಎಂಬ ಬಗ್ಗೆ ತಾವೂ ಸೇರಿದಂತೆ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ಮಾರ್ಗದರ್ಶನ ನೀಡಲಿದ್ದೇವೆ. ಎಸ್ಸೆಸ್ಸೆಲ್ಸಿ, ಪಿಯುಸಿ ಮಕ್ಕಳು ಹಾಗೂ ಪಾಲಕರು ಸಹ ಪಾಲ್ಗೊಳ್ಳಬಹುದು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ