ಕೇಂದ್ರ ಬಿಜೆಪಿ ಸರ್ಕಾರದಿಂದ ವ್ಯವಸ್ಥಿತವಾಗಿ ಜನವಿರೋಧಿ ನೀತಿ: ಸಂಸದ

KannadaprabhaNewsNetwork |  
Published : Jan 13, 2026, 01:45 AM IST
12ಕೆಪಿಆರ್‌ಸಿಆರ್‌ 03: ಸಂಸದ ಜಿ.ಕುಮಾರ ನಾಯಕ | Kannada Prabha

ಸಾರಾಂಶ

ಬಿಜೆಪಿ ನೇತೃತ್ವದಲ್ಲಿ ಆಡಳಿತ ನಡೆಸುತ್ತಿರುವ ಕೇಂದ್ರ ಸರ್ಕಾರವು ವ್ಯವಸ್ಥಿತವಾಗಿ ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದು, ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್‌ (ವಿಬಿ ಜಿ ರಾಮ್‌ ಜಿ) ಕಾಯ್ದೆ ಜಾರಿ, ಬಲವಂತವಾಗಿ ಹಿಂದಿ ಹೇರಿಕೆ ಸೇರಿ ಅನೇಕ ಕ್ರಮಗಳಿಂದ ದೇಶ, ಸಂವಿಧಾನಕ್ಕೆ ಮಾರಕವಾಗುವಂತಹ ತೀರ್ಮಾನಗಳನ್ನು ತೆಗೆದುಕೊಂಡಿದೆ ಎಂದು ಸಂಸದ ಜಿ.ಕುಮಾರ ನಾಯಕ ಆರೋಪಿಸಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ಬಿಜೆಪಿ ನೇತೃತ್ವದಲ್ಲಿ ಆಡಳಿತ ನಡೆಸುತ್ತಿರುವ ಕೇಂದ್ರ ಸರ್ಕಾರವು ವ್ಯವಸ್ಥಿತವಾಗಿ ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದು, ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್‌ (ವಿಬಿ ಜಿ ರಾಮ್‌ ಜಿ) ಕಾಯ್ದೆ ಜಾರಿ, ಬಲವಂತವಾಗಿ ಹಿಂದಿ ಹೇರಿಕೆ ಸೇರಿ ಅನೇಕ ಕ್ರಮಗಳಿಂದ ದೇಶ, ಸಂವಿಧಾನಕ್ಕೆ ಮಾರಕವಾಗುವಂತಹ ತೀರ್ಮಾನಗಳನ್ನು ತೆಗೆದುಕೊಂಡಿದೆ ಎಂದು ಸಂಸದ ಜಿ.ಕುಮಾರ ನಾಯಕ ಆರೋಪಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ದಶಕಗಳ ಹಿಂದೆ ಯುಪಿಎ ಸರ್ಕಾರ ರೂಪಿಸಿದ ರಾಷ್ಟ್ರೀಯ ಮಹಾತ್ಮಗಾಂಧಿ ಉದ್ಯೋಗ ಖಾತರಿ ಯೋಜನೆಯನ್ನು ಸಂಪೂರ್ಣವಾಗಿ ಮುಗಿಸುವ ದುರುದ್ದೇಶದಿಂದಲೆಯೇ ಅನಗತ್ಯ, ಅಸಾಧ್ಯತೆ ನಿಯಮಗಳನ್ನು ರೂಪಿಸಿ ಬಿವಿ ಜಿರಾಮ್‌ ಜಿ ಕಾಯ್ದೆಯನ್ನು ಮಾಡಿದ್ದು ಇದು ಕೇಂದ್ರದ ಮತ್ತೊಂದು ಅಕ್ರಮ ಯೋಜನೆಯಾಗಿದೆ. ಹೆಸರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವ, ಉದ್ಯೋಗ ಕಸಿದುಕೊಳ್ಳುವುದು, ಪಂಚಾಯ್ತಿಯ ಅಧಿಕಾರವನ್ನು ಕಿತ್ತುಕೊಳ್ಳುವುದು ಸೇರಿ ಹಲವಾರು ಅನ್ಯಾಯಗಳನ್ನು ಮಾಡಿದೆ ಎಂದು ದೂರಿದರು.

ಕೇಂದ್ರ ಸರ್ಕಾರವು ಉಗ್ರ ಪ್ರಮಾಣದ ಬಲಪಂಥೀಯ ಧೋರಣೆಗಳನ್ನು ಅನುಸರಿಸುತ್ತಿದೆ, ಖಾಸಗಿ ಕಂಪನಿಗಳಿಗೆ ಸಾವಿರಾರು ಕೋಟಿ ಸಬ್ಸಿಡಿ ಘೋಷಣೆ ಮಾಡಿರುವ ಕೇಂದ್ರವು ನೋಟ್‌ ಬಂದಿ, ಮನಿ ಲ್ಯಾಂಡರಿಂಗ್‌, ಡಿಪಿಡಿಐ ಕಾಯ್ದೆ, ಆರ್‌ಟಿಐ ಪಾರದರ್ಶಕತೆಗೆ ಧಕ್ಕೆ ತರುವಂತಹ ಕ್ರಮಗಳು ನಿಜಕ್ಕೂ ಖಂಡನೀಯ ವಿಷಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ರವಿ ಬೋಸರಾಜು, ಮೊಹಮ್ಮದ ಶಾಲಂ, ಜಯಣ್ಣ,ಕೆ.ಶಾಂತಪ್ಪ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆಕೋರಿಕೆ:ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ