ಕನ್ನಡಪ್ರಭ ವಾರ್ತೆ ನಂಜನಗೂಡು
ತಾಲೂಕಿನ ಹೆಗ್ಗಡಹಳ್ಳಿ ಗ್ರಾಾಮದಲ್ಲಿ ಸುಯೋಗ್ ಆಸ್ಪತ್ರೆ ಸಹಯೋಗದಲ್ಲಿ ಸಾಮೂಹಿಕ ನಾಯಕತ್ವದ ಕರ್ನಾಟಕ ರೈತ ಸಂಘ ಆಯೋಜಿಸಿದ್ದ ಉಚಿತ ಆರೋಗ್ಯ ಶಿಬಿರ ಉದ್ಘಾಟಿಸಿ ಮಾತನಾಡಿದರು.
ನಮ್ಮ ಜೀವನ ಶೈಲಿ, ದಿನನಿತ್ಯದ ಚಟುವಟಿಕೆಗಳು, ಆಹಾರದಲ್ಲಿ ರೀತಿ ನೀತಿಗಳಿಂದಾಗಿ ಹಲವಾರು ಕಾಯಿಲೆಗಳು ಬರುತ್ತಿವೆ. ಜೀವನದಲ್ಲಿ ಶಿಸ್ತುನ್ನು ಅಳವಡಿಸಿಕೊಂಡು ಆಹಾರ ಕ್ರಮದಲ್ಲಿ ನಿಯಮಿತವಾಗಿದ್ದರೆ ರೋಗ ಬರುವುದನ್ನು ತಡೆಗಟ್ಟಬಹುದು. ಅಲ್ಲದೆ ನಮಗೆ ಕಾಯಿಲೆ ಇಲ್ಲದಿದ್ದರೂ ಕೂಡ ವರ್ಷಕ್ಕೊಮ್ಮೆ ಆರೋಗ್ಯ ತಪಾಸಣೆಗೆ ಒಳಗಾಗಬೇಕು. ಆಗ ಕಾಯಿಲೆ ಇಲ್ಲ ಎಂಬ ಬಗ್ಗೆ ಆತ್ಮವಿಶ್ವಾಸ ಮೂಡುವ ಜೊತೆಗೆ ಕಾಯಿಲೆ ಇದ್ದಲ್ಲಿ ಪ್ರಾರಂಭದಲ್ಲೇ ಪತ್ತೆ ಹಚ್ಚಿ ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳಲು ಸಹಕಾರಿಯಾಗಲಿದೆ ಎಂದರು.ಸುಯೋಗ್ ಆಸ್ಪತ್ರೆಯ ವೈದ್ಯರು ಗ್ರಾಮೀಣ ಭಾಗದ ಬಡವರಿಗೆ ಅದರಲ್ಲೂ ಮುಖ್ಯವಾಗಿ ರೈತರಿಗೆ ನೆರವಾಗಲಿ ಎಂಬ ಉದ್ದೇಶದಿಂದ ಆರೋಗ್ಯ ತಪಾಸಣೆ ಶಿಬಿರ ನಡೆಸುತ್ತಿದ್ದು ಎಲ್ಲರೂ ಇದರ ಸದುಪಯೋಗ ಪಡೆದುಕೊಂಡು ತಪಾಸಣೆಗೆ ಒಳಗಾಗಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು.
ಇತ್ತೀಚಿನ ದಿನಗಳಲ್ಲಿ ಎಲ್ಲರಲ್ಲೂ ಕೂಡ ಸಕ್ಕರೆ ಖಾಯಿಲೆ, ಅಧಿಕ ರಕ್ತದ ಒತ್ತಡಗಳು ಮನುಷ್ಯನ ಮೌನ ಕಾಯಿಲೆಯಾಗಿವೆ. ಇದರಿಂದ ಹೃದಯಾಘಾತ, ಲಕ್ವದಂತಹ ಮಾರಣಾಂತಿಕ ಕಾಯಿಲೆಗೂ ಈ ಕಾಯಿಲೆ ಕಾರಣವಾಗುತ್ತಿದೆ. ಆದ್ದರಿಂದ ಆಸ್ಪತ್ರೆಯು ಸಕ್ಕರೆ ಕಾಯಿಲೆ ರೋಗಿಗಳ ಸಂಘವನ್ನೂ ಸ್ಥಾಪಿಸಿದೆ. ಬಡವರು ಆಸ್ಪತ್ರೆ ಕಡೆಗೆ ಸುಳಿಯದಂತೆ ಮಾಡುವ ಸಲುವಾಗಿ ಆಸ್ಪತ್ರೆ ವಾಟ್ಸಾಪ್ ಗ್ರೂಪ್ ರಚಿಸಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದರೊಂದಿಗೆ ಸಕ್ಕರೆ ಕಾಯಿಲೆ ಇದ್ದರೆ ಅವರಿಗೆ ಆಹಾರ ಕ್ರಮಗಳ ಬಗ್ಗೆ ತಿಳುವಳಿಕೆ ಮೂಡಿಸಲಾಗುತ್ತಿದೆ ಎಂದರು.
ಈ ವೇಳೆ ಗ್ರಾಪಂ ಅಧ್ಯಕ್ಷ ಕಾಂತರಾಜು, ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಮ್ಮಾವು ರಘು, ತಾಲೂಕು ಅಧ್ಯಕ್ಷ ಸತೀಶ್ ರಾವ್, ಶಿವಣ್ಣ, ವೆಂಕಟೇಗೌಡ, ಹೆಗ್ಗಡಹಳ್ಳಿ ಮಹದೇವಸ್ವಾಮಿ, ಶಿವಕುಮಾರ್, ಪ್ರಕಾಶ್, ಶೈಲಜಾ, ಶ್ವೇತಾ, ಸುಯೋಗ್ ಆಸ್ಪತ್ರೆಯ ಡಾ. ಪ್ರಭುದೇವ್, ಡಾ. ಲಿಖಿತಾ, ಡಾ. ಅಲೋಕ್ ಕುಮಾರ್, ಗ್ರಾಪಂ ಸದಸ್ಯರಾದ ಮನೋಜ್ ಮೊದಲಾದವರು ಇದ್ದರು.