ಮಹಿಳೆಯರಿಗೆ ಸ್ವ ಉದ್ಯೋಗ ಕಲ್ಪಿಸಿಕೊಡುವ ಉದ್ದೇಶದಿಂದ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯೂ ಜ್ಞಾನವಿಕಾಸ ಕಾರ್ಯಕ್ರಮ ಹಾಗೂ ಮಾನವ ಸಂಪನ್ಮೂಲ ತರಬೇತಿ ಕೇಂದ್ರ ವತಿಯಿಂದ ಉಚಿತವಾಗಿ ಟೈಲರಿಂಗ್ ತರಬೇತಿ ನೀಡಲಾಗುತ್ತಿದೆ. ಸಂಸ್ಥೆ ನೀಡುತ್ತಿರುವ ಇಂತಹ ತರಬೇತಿ ಸದ್ಬಳಕೆ ಆಗಲಿ.
ಕನ್ನಡಪ್ರಭ ವಾರ್ತೆ ಪಾಂಡವಪುರ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮ ಹಾಗೂ ಮಾನವ ಸಂಪನ್ಮೂಲ ತರಬೇತಿ ಕೇಂದ್ರದಿಂದ ತಾಲೂಕಿನ ಬನ್ನಂಗಾಡಿ ಗ್ರಾಮದಲ್ಲಿ ಮಹಿಳೆಯರಿಗೆ ಉಚಿತವಾಗಿ ನೀಡಲಾದ ಟೈಲರಿಂಗ್ ತರಬೇತಿಯಲ್ಲಿ ಭಾಗವಹಿಸಿ ತರಬೇತಿ ಪಡೆದ ಮಹಿಳೆಯರಿಗೆ ತರಬೇತಿ ಪ್ರಮಾಣ ಪತ್ರವನ್ನು ಯೋಜನಾಧಿಕಾರಿ ಯಶವಂತ್ ಹಾಗೂ ತರಬೇತುದಾರ ದಿನೇಶ್ಪೂಜಾರಿ ವಿತರಣೆ ಮಾಡಿದರು.
ಯೋಜನಾಧಿಕಾರಿ ಯಶವಂತ್ ಮಾತನಾಡಿ, ಮಹಿಳೆಯರಿಗೆ ಸ್ವ ಉದ್ಯೋಗ ಕಲ್ಪಿಸಿಕೊಡುವ ಉದ್ದೇಶದಿಂದ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯೂ ಜ್ಞಾನವಿಕಾಸ ಕಾರ್ಯಕ್ರಮ ಹಾಗೂ ಮಾನವ ಸಂಪನ್ಮೂಲ ತರಬೇತಿ ಕೇಂದ್ರ ವತಿಯಿಂದ ಉಚಿತವಾಗಿ ಟೈಲರಿಂಗ್ ತರಬೇತಿ ನೀಡಲಾಗುತ್ತಿದೆ. ಸಂಸ್ಥೆಯೂ ನೀಡುತ್ತಿರುವ ಇಂತಹ ತರಬೇತಿಗಳನ್ನು ಸದ್ಬಳಕೆ ಮಾಡಿಕೊಂಡು ಮಹಿಳೆಯರು ಸ್ವ ಉದ್ಯೋಗ ರೂಪಿಸಿಕೊಳ್ಳಬೇಕೆಂದು ಮನವಿ ಮಾಡಿದರು.
ಸ್ವ ಉದ್ಯೋಗದಲ್ಲಿ ತೊಡಗಿರುವ ಮಹಿಳೆಯರಿಗೆ ವಿಶೇಷವಾಗಿ ಬ್ಯಾಂಕಿನ ಮೂಲಕ ಸಾಲ ಸೌಲಭ್ಯ ಮತ್ತು ವಿಶೇಷ ತರಬೇತಿಯನ್ನು ಸಂಸ್ಥೆ ಯ ಮೂಲಕ ಒದಗಿಸಲಾಗಿದೆ ಎಂದರು.
ತರಬೇತಿ ಕೇಂದ್ರದ ಪ್ರಾಂಶುಪಾಲ ದಿನೇಶ್ ಪೂಜಾರಿ ಮಾತನಾಡಿ, ಸ್ವ ಉದ್ಯೋಗದ ಮಹತ್ವ, ಮತ್ತು ಮಾರುಕಟ್ಟೆಯ ಕುರಿತು ಉದ್ಯಮ ಶೀಲತಾ ತರಬೇತಿಯ ಬಗ್ಗೆ ಮಾಹಿತಿ ನೀಡಿದರು.
ಸಂದರ್ಭದಲ್ಲಿ ಸ್ವಾಮಿಗೌಡ, ಶಿಕ್ಷಕಿ ಪ್ರಮೀಳಾ ಉಪಸ್ಥಿತರಿದ್ದರು. ತರಬೇತಿ ಸಂಸ್ಥೆಯ ಉಪನ್ಯಾಸಕಿ ಶ್ವೇತಾ, ಜ್ಞಾನ ವಿಕಾಸ ಸಮನ್ವಯಾದಿಕಾರಿ ತೇಜಸ್ವಿ, ಸೇವಾಪ್ರತಿನಿಧಿ ಮಂಜುಳಾ ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.