ಕನ್ನಡಪ್ರಭ ವಾರ್ತೆ ಸಾಗರ ತಾಲೂಕಿನ ತಾಳಗುಪ್ಪ ಹೋಬಳಿಯ ಸಿರಿವಂತೆ ಗ್ರಾಮದ ಸರ್ವೆ ನಂ.74/4ರಲ್ಲಿ ಇರುವ ಜಮೀನಿನ ಮಾಲೀಕ ಬಸವರಾಜ್ ಗೌಡರ ಮೇಲೆ ಅಟ್ರಾಸಿಟಿ ಪ್ರಕರಣ ದಾಖಲಿಸಿರುವ ಹಾವಾಡಿಗರ ಕೇರಿಯವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ಸದಸ್ಯರು ಪಟ್ಟಣದ ಪೊಲೀಸ್ ಉಪ ಅಧೀಕ್ಷಕರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನಿಷ್ಪಕ್ಷಪಾತ ತನಿಖೆ ನಡೆಸಿ:
ಇವರು ಅಟ್ರಾಸಿಟಿ ಕಾನೂನನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಹಾವಾಡಿಗರ ಕೇರಿಯವರ ವಿರುದ್ಧ ದಾವಣಗೆರೆಯಲ್ಲಿ ನಾಗರಿಕ ಜಾರಿ ನಿರ್ದೇಶನಾಲಯದಲ್ಲಿ ಪ್ರಕರಣವಿದ್ದು, ಬೆಂಗಳೂರಿಗೆ ವರದಿ ಕಳುಹಿಸಲಾಗಿದೆ. ಹಾವಾಡಿಗರು ಪರಿಶಿಷ್ಠ ಜಾತಿ ಪ್ರಮಾಣಪತ್ರ ಪಡೆದಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಅಟ್ರಾಸಿಟಿ ಪ್ರಕರಣದ ನಿಷ್ಪಕ್ಷ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.ದಸಂಸ ರಾಜ್ಯ ಸಂಘಟನಾ ಸಂಚಾಲಕ ಭರ್ಮಪ್ಪ ಮಾತನಾಡಿ, ಹಾವಾಡಿಗರು ಪ್ರವರ್ಗ 1ರಡಿ ಬರುತ್ತಾರೆ. ಆದರೆ, ಸ್ಥಳೀಯ ರಾಜಕಾರಣಿಗಳು ಓಟಿಗಾಗಿ ಅವರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ಕೊಡಿಸಿದ್ದಾರೆ. ಇದರ ಲಾಭ ಪಡೆದು ಅವರು ಸರ್ಟಿಫಿಕೇಟ್ ಪಡೆದಿದ್ದಾರೆ. ಅಲ್ಲಿನ ಗ್ರಾಮ ಲೆಕ್ಕಿಗರು, ರಾಜಸ್ವ ನಿರೀಕ್ಷಕರು ಹೇಗೆ ಜಾತಿ ಪ್ರಮಾಣ ಪತ್ರ ನೀಡಿದರು? ಹೀಗಾಗಿ ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಅಧಿಕಾರಿಗಳನ್ನೂ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.
- - - -20ಕೆಎಸ್ಎಜಿ3:
ಸಾಗರದ ಡಿವೈಎಸ್ಪಿ ಕಚೇರಿಯಲ್ಲಿ ಹಾವಾಡಿಗರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದಸಂಸ ಕಾರ್ಯಕರ್ತರು ಸಾಗರ ಪೊಲೀಸ್ ಉಪ ಅಧೀಕ್ಷಕರ ಕಚೇರಿ ಎದುರು ಪ್ರತಿಭಟಸಿಸಿ, ಮನವಿ ಸಲ್ಲಿಸಿದರು.