- ಹಿಂದು ರಾಷ್ಟ್ರ ಸಮನ್ವಯ ಸಮಿತಿ ಒತ್ತಾಯ
- - -
ದಾವಣಗೆರೆ: ಬೆಂಗಳೂರಿಗೆ ಅಕ್ರಮವಾಗಿ ಕಳಪೆ ಮಾಂಸ ಪೂರೈಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ಹಿಂದು ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮೇಲೆ ದೌರ್ಜನ್ಯ ನಡೆಸಿದ ಎಸಿಪಿ ಚಂದನ ಕುಮಾರ ಅವರನ್ನು ಅಮಾನತುಗೊಳಿಸಬೇಕು ಹಾಗೂ ರಾಮ ನಗರದ ಹೆಸರನ್ನು ದಕ್ಷಿಣ ಬೆಂಗಳೂರು ಎಂಬುದಾಗಿ ಮರುನಾಮಕರಣ ಮಾಡಬಾರದು ಎಂದು ಆಗ್ರಹಿಸಿ ಹಿಂದು ರಾಷ್ಟ್ರ ಸಮನ್ವಯ ಸಮಿತಿ ಶನಿವಾರ ಜಿಲ್ಲಾಧಿಕಾರಿ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿತು.ನಗರದ ಡಿಸಿ ಕಚೇರಿಯಲ್ಲಿ ಮನವಿ ಸಲ್ಲಿಸಿದ ಮುಖಂಡರು ಮಾತನಾಡಿ, ರಾಮನಗರ ಹೆಸರು ಬದಲಾವಣೆಗೆ ರಾಜ್ಯಪಾಲರು ಯಾವುದೇ ಕಾರಣಕ್ಕೂ ಅಂಕಿತ ಹಾಕಬಾರದು ಎಂದರು.
- - - -3ಕೆಡಿವಿಜಿ14:
ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ರಾಷ್ಟ್ರ ಸಮನ್ವಯ ಸಮಿತಿಯಿಂದ ದಾವಣಗೆರೆ ಡಿಸಿ ಜಿ.ಎಂ. ಗಂಗಾಧರ ಸ್ವಾಮಿ ಅವರಿಗೆ ಮನವಿ ಅರ್ಪಿಸಲಾಯಿತು.