ವಿದ್ಯಾರ್ಥಿನಿ ಸಾವಿಗೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳಿ

KannadaprabhaNewsNetwork |  
Published : Apr 05, 2026, 01:15 AM IST
ಪೋಟೋ, 4ಎಚ್‌ಎಸ್‌ಡಿ1: ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿಯ  ಆಯುರ್ವೇದಿಕ್ ಕಾಲೇಜಿನ ವಿದ್ಯಾರ್ಥಿನಿ ಲಿಖಿತ ಸಾವಿಗೆ ಕಾರಣನಾದ ವ್ಯಕ್ತಿಯ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಅವರಿಗೆ  ಮನವಿ ಸಲ್ಲಿಸಲಾಯಿತು.  | Kannada Prabha

ಸಾರಾಂಶ

ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿಯ ಆಯುರ್ವೇದಿಕ್ ಕಾಲೇಜಿನ ವಿದ್ಯಾರ್ಥಿನಿ ಲಿಖಿತ ಸಾವಿಗೆ ಕಾರಣನಾದ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಎಬಿವಿಪಿಯಿಂದ ಎಡಿಸಿ ಕುಮಾರಸ್ವಾಮಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ವಿದ್ಯಾರ್ಥಿನಿ ಲಿಖಿತ ಸಾವಿಗೆ ಕಾರಣನಾದ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಯಿತು.

ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿಯ ಆಯುರ್ವೇದಿಕ್ ಕಾಲೇಜಿನ ಲಿಖಿತಾ (22) ಎಂಬ ವಿದ್ಯಾರ್ಥಿನಿ ಬಿಎ ಎಂಎಸ್‌ ಮುಗಿಸಿ ಇಂಟರ್ನಶಿಪ್​​ ವ್ಯಾಸಂಗ ಮಾಡುತ್ತಿದ್ದು ಈ ವಿದ್ಯಾರ್ಥಿನಿ ಪ್ರಾಧ್ಯಾಪಕರೊಂದಿಗಿನ ಸಂಬಂಧದ ಕುರಿತು ಸುಳ್ಳು ಅಪಪ್ರಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸಮಾಜದಲ್ಲಿ ವ್ಯಕ್ತಿಯ ಚಾರಿತ್ರ್ಯ ಹರಣ ಮಾಡುವುದು ಎಂತಹ ಭೀಕರ ಪರಿಣಾಮ ಬೀರಬಲ್ಲದು ಎಂಬುದಕ್ಕೆ ಈ ಘಟನೆ ಕೈಗನ್ನಡಿಯಾಗಿದೆ. ಮತ್ತೆ ಜಿಲ್ಲೆಯಲ್ಲಿ ಯಾವುದೇ ಭಾಗದಲ್ಲಿ ಈ ರೀತಿ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಿ ಜಿಲ್ಲಾಡಳಿತ ಇವರಿಗೆ ಕಾನೂನು ರೀತಿಯಲ್ಲಿ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.

ಈ ವೇಳೆ ಜಿಲ್ಲಾ ಸಂಚಾಲಕ ಸಂಜಯ್‌, ರಾಜ್ಯ ಕಾರ್ಯಕಾರಿಣಿ ಸದಸ್ಯೆ, ನಿಹಾರಿಕ, ನಗರ ಸಹ ಕಾರ್ಯದರ್ಶಿ ರಾಘವೇಂದ್ರ, ಕನಕರಾಜ್‌ ಕೋಡಿಹಳ್ಳಿ, ಮೇಘನ, ಅಕ್ಷತ, ರಾಜೇಶ್‌ ಕುಮಾರ್‌, ಜಯರಾಜ್‌, ಜಯಂತ್‌, ಮಲ್ಲಿಕಾರ್ಜುನ್‌ ಇನ್ನಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಾದಾಪುರ ಜೇನುಕಲ್ಲು ಸಿದ್ದೇಶ್ವರಸ್ವಾಮಿ ಮಹಾರಥೋತ್ಸವ
ಅರಸೀಕೆರೆಯಲ್ಲಿ ಯುವಕನ ಮೇಲೆ ಹಲ್ಲೆ ಆರೋಪ