ಪರವಾನಗಿ ಇಲ್ಲದ ವಾಹನ ವಿರುದ್ಧ ಕ್ರಮಕೈಗೊಳ್ಳಿ

KannadaprabhaNewsNetwork |  
Published : Jun 17, 2026, 02:00 AM IST
ಪರವಾನಗಿ ಇಲ್ಲದೇ ಸಂಚರಿಸುವ ಖಾಸಗಿ ಕಂಪನಿಗಳ ವಾಹನಗಳ ನಿಯಂತ್ರಣಕ್ಕೆ ಒತ್ತಾಯಿಸಿ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘದ ಸದಸ್ಯರು ಮಂಗಳವಾರ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ, ಅಗತ್ಯ ವಸ್ತು, ಬಿಡಿ ಭಾಗಗಳು, ಪೆಟ್ರೋಲ್‌-ಡೀಸೆಲ್‌ ಹಾಗೂ ಎಲ್‌ಪಿಜಿ, ಸಿಎನ್‌ಜಿ ಬೆಲೆ ಏರಿಕೆಯಿಂದ ಆಟೋ ಚಾಲಕರ ಕುಟುಂಬ ನಿರ್ವಹಣೆ ಕಷ್ಟವಾಗಿದೆ.

ಹುಬ್ಬಳ್ಳಿ:

ನಗರದಲ್ಲಿ ಪರವಾನಗಿ ಇಲ್ಲದೆ ಓಲಾ, ಊಬರ, ರ‍್ಯಾಫಿಡೋ ಹಾಗೂ ಖಾಸಗಿ ಕಂಪನಿ ವಾಹನಗಳು ಓಡಾಡುತ್ತಿದ್ದು ಇಂತಹ ವಾಹನಗಳ ಮೇಲೆ ಸಾರಿಗೆ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘದ ಸದಸ್ಯರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದಲ್ಲಿ ಮಂಗಳವಾರ ನಗರದ ಚೆನ್ನಮ್ಮ ವೃತ್ತದಿಂದ ಮಿನಿವಿಧಾನ ಸೌಧದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಆಟೋ ಚಾಲಕರು, ಪರವಾನಗಿ ಪಡೆಯದೆ ಓಡಾಡುವ ಖಾಸಗಿ ಕಂಪನಿಗಳ ವಾಹನ ನಿಯಂತ್ರಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ, ಅಗತ್ಯ ವಸ್ತು, ಬಿಡಿ ಭಾಗಗಳು, ಪೆಟ್ರೋಲ್‌-ಡೀಸೆಲ್‌ ಹಾಗೂ ಎಲ್‌ಪಿಜಿ, ಸಿಎನ್‌ಜಿ ಬೆಲೆ ಏರಿಕೆಯಿಂದ ಆಟೋ ಚಾಲಕರ ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಸಾಲ ಪಡೆದು ಆಟೋ ರಿಕ್ಷಾ ಓಡಿಸುವ ಕೆಲಸ ಮಾಡುತ್ತಿದ್ದು, ಕಂತು ತುಂಬಲಾಗದೆ ಸಾಕಷ್ಟು ತೊಂದರೆಯಾಗಿದೆ. ಇಂತಹ ಸಮಯದಲ್ಲಿ ಖಾಸಗಿ ಕಂಪನಿ ವಾಹನಗಳ ಓಡಾಟದಿಂದ ಆಟೋ ಚಾಲಕರಿಗೆ ಮತಷ್ಟು ಸಂಕಷ್ಟ ಎದುರಾಗಿದೆ ಎಂದು ಅಳಲು ತೋಡಿಕೊಂಡರು.

ಸಂಘದ ರಾಜ್ಯಾಧ್ಯಕ್ಷ ಶೇಖರಯ್ಯ ಮಠಪತಿ, ಪ್ರಧಾನ ಕಾರ್ಯದರ್ಶಿ ಜೀವನ ಉತ್ಕುರಿ, ದಾವಲಸಾಬ್‌ ಕುರಹಟ್ಟಿ, ಮುರಳಿ ಇಂಗಳಹಳ್ಳಿ, ಲೋಕೇಶ ಚಿಕ್ಕಮಗಳೂರ, ಪರಶುರಾಮ ಪೂಜಾರ, ರಫೀಕ ಕುಂದಗೋಳ, ರಾಜೇಶ ಬಿಜವಾಡ, ದಾವೂದ ಅಲಿಶೇಖ, ಮಹಾವೀರ ಬಿಲಾನ ಸೇರಿ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಮುನಿಸ್ವಾಮಯ್ಯನವರಿಗೆ ಆತ್ಮೀಯ ಬೀಳ್ಕೊಡುಗೆ
ಬಿಲ್‌ ಕಲೆಕ್ಟರ್‌ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ