ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ಆರೋಗ್ಯ ನಿಯಂತ್ರಣಾಧಿಕಾರಿ, ತಾಲೂಕು ಆರೋಗ್ಯ ಇಲಾಖೆ ಹಾಗೂ ತಾಲೂಕು ಪಂಚಾಯ್ತಿ ಸಹಯೋಗದಲ್ಲಿ ನಡೆದ ಕೀಟ ಜನ್ಯ ರೋಗಗಳ ನಿಯಂತ್ರಣ ಕುರಿತು ಅಂತರ ಇಲಾಖೆ ಅಧಿಕಾರಿಗಳ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿವೆ. ಕೆಲವೆಡೆ ಸಾವು ಸಂಭವಿಸಿವೆ. ತಾಲೂಕಿನಲ್ಲಿ 20 ಪ್ರಕರಣಗಳು ವರದಿಯಾಗಿವೆ. ಜ್ವರದಿಂದ ಸಾವುಗಳು ಸಂಭವಿಸುವ ಸಾಧ್ಯತೆಗಳು ಇರುವುದರಿಂದ ಡೆಂಘೀ ನಿಯಂತ್ರಣಕ್ಕೆ ಎಲ್ಲಾ ಅಧಿಕಾರಿಗಳು ಮುಂದಾಗಬೇಕು ಎಂದರು.ಡೆಂಘೀ ಪ್ರಕರಣಗಳು ಬೆಳಕಿಗೆ ಬರುತ್ತಿದ್ದಂತೆಯೇ ಆರಂಭದಲ್ಲಿಯೇ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ಅಧಿಕಾರಿಗಳು ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಕಟ್ಟುನಿಟ್ಟಿನಿಂದ ಕೆಲಸ ಮಾಡುವ ಮೂಲಕ ಎಚ್ಚರವಹಿಸಬೇಕು ಎಂದರು.
ಶಾಲೆಗಳಲ್ಲಿ ಮಕ್ಕಳಿಗೆ ಡೆಂಘೀ, ಸ್ವಚ್ಛತೆ, ನೀರಿನ ಮಹತ್ವ, ಸ್ವಯಂರಕ್ಷಣೆ, ಸೊಳ್ಳೆಗಳಿಂದ ರಕ್ಷಣೆಯ ಬಗ್ಗೆ ಅರಿವು ಮೂಡಿಸಿ, ಅಂಗನವಾಡಿ ಹಾಸ್ಟೆಲ್ಗಳಿಗೆ ಕಿಟಕಿಗಳಿಗೆ ಮೆಸ್ ಹಾಕಬೇಕು. ಹಾಸ್ಟೆಲ್ಗಳಲ್ಲಿ ಪ್ರಕರಣಗಳು ಹೆಚ್ಚುವ ಸಾಧ್ಯತೆಗಳಿದ್ದು, ಸ್ವಚ್ಛತೆ ಕಾಪಾಡಬೇಕು, ನಗರ ಪ್ರದೇಶದಲ್ಲಿ ಖಾಲಿ ನಿವೇಶನ, ನೀರು ಸಂಗ್ರಹಿಸುರುವ ಸ್ಥಳಗಳನ್ನು ಸ್ವಚ್ಛಗೊಳಿಸಿ ಡೆಂಘೀ ಹರಡದಂತೆ ಕ್ರಮವಹಿಸಬೇಕು ಎಂದರು.
ಸಭೆಯಲ್ಲಿ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸಿ.ಎ.ಅರವಿಂದ್, ಬಿಇಒ ಚಂದ್ರಶೇಖರ, ಎಇಇ ಮಹದೇವಸ್ವಾಮಿ, ಸುರೇಂದ್ರ, ಪುಟ್ಟಸ್ವಾಮಿ, ಸಿ.ಪಿ.ವಿಜಯ್ಕುಮಾರ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.