ಅನುದಾನ ವ್ಯಯವಾಗದಂತೆ ಕ್ರಮ ಕೈಗೊಳ್ಳಿ: ತಾಪಂ ಆಡಳಿತಾಧಿಕಾರಿ ನಂದಾ ಹಣಬರಟ್ಟಿ

KannadaprabhaNewsNetwork |  
Published : Feb 07, 2026, 03:15 AM IST
ಸಭೆಯಲ್ಲಿ ತಾಪಂ ಆಡಳಿತಾಧಿಕಾರಿ ನಂದಾ ಹಣಬರಟ್ಟಿ ಮಾತನಾಡಿದರು. | Kannada Prabha

ಸಾರಾಂಶ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮೀಪಿಸುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳ ಫಲಿತಾಂಶ ಉತ್ತಮವಾಗುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ವಿಶೇಷ ಗಮನ ನೀಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.

ರೋಣ: ಪ್ರಸ್ತುತ ಆರ್ಥಿಕ ವರ್ಷ ಅಂತ್ಯದ ಹಂತದಲ್ಲಿರುವುದರಿಂದ ಯಾವುದೇ ಯೋಜನೆಯ ಅನುದಾನ ವ್ಯಯವಾಗದೆ ಉಳಿಯದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ತಾಪಂ ಆಡಳಿತಾಧಿಕಾರಿ ನಂದಾ ಹಣಬರಟ್ಟಿ ತಿಳಿಸಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ತಾಪಂ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮೀಪಿಸುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳ ಫಲಿತಾಂಶ ಉತ್ತಮವಾಗುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ವಿಶೇಷ ಗಮನ ನೀಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಭೂಸೇನಾ ನಿಗಮದ ವತಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗಳು ವಿಳಂಬವಾಗುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿರುವುದನ್ನು ಉಲ್ಲೇಖಿಸಿದ ಅವರು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಪಂದಿಸಿ ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಸಭೆಯಲ್ಲಿ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ, ತಾಪಂ ವ್ಯವಸ್ಥಾಪಕ ದೇವರಾಜ ಸಜ್ಜನಶೆಟ್ಟರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಕಾಮಗಾರಿ ಪರಿಶೀಲನೆ: ಸಭೆ ಬಳಿಕ ತಾಲೂಕು ಕ್ರೀಡಾಂಗಣದಲ್ಲಿ ನೂತನವಾಗಿ ನಿರ್ಮಾಣ ಆಗುತ್ತಿರುವ ಸರ್ಕಾರಿ ಈಜುಕೊಳವನ್ನು ತಾಪಂ ಆಡಳಿತಾಧಿಕಾರಿ ನಂದಾ ಹಣಬರಟ್ಟಿ ಪರಿಶೀಲನೆ ನಡೆಸಿ ಶೀಘ್ರವಾಗಿ ಕಾಮಗಾರಿ ಮುಗಿಸಲು ಸೂಚಿಸಿದರು. ಬಳಿಕ ಪ್ರೌಢಶಾಲೆಗೆ ಭೇಟಿ ನೀಡಿ ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ಸ್ಪೆಷಲ್ ಕ್ಲಾಸ್ ತಗೆದುಕೊಳ್ಳಲು ಶಿಕ್ಷಕರಿಗೆ ತಿಳಿಸಿದರು.ಪ್ರತ್ಯೇಕ ಅಪಘಾತ: ಬೈಕ್ ಸವಾರ ಸಾವು

ಲಕ್ಷ್ಮೇಶ್ವರ: ತಾಲೂಕಿನ ವಿವಿಧೆಡೆ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರರೊಬ್ಬರು ಸಾವಿಗೀಡಾಗಿದ್ದಾರೆ. ಮತ್ತೊಂದು ಘಟನೆಯಲ್ಲಿ ಬೈಕ್‌ ಸವಾರ ತೀವ್ರವಾಗಿ ಗಾಯಗೊಂಡಿದ್ದಾರೆ.ಸಮೀಪದ ರಾಮಗೇರಿ ಗ್ರಾಮದ ಹತ್ತಿರ ಬೈಕ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮಹಾಂತೇಶ ತಿರಕಪ್ಪ ಯಲಗಚ್ಚ(31) ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿಯ ಸವಾರ ಮುದಕಪ್ಪ ಮಾರ್ತಾಂಡಪ್ಪ ಗಂಜಿಗಟ್ಟಿ(35) ಎಂಬುವವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.ಗಾಯಗೊಂಡಿರುವ ಮುದುಕಪ್ಪ ಗಂಜಿಗಟ್ಟಿ ಅವರನ್ನು ಗದಗ ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ. ರಾಮಗೇರಿ ಗ್ರಾಮದ ಯುವಕರು ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, ಕೆಲಸ ಮುಗಿಸಿ ಊರಿಗೆ ವಾಪಸ್‌ ಹೋಗುತ್ತಿರುವ ವೇಳೆ ಅಪಘಾತ ಸಂಭವಿಸಿದೆ.

ಬೈಕ್‌ ಸವಾರನಿಗೆ ಗಾಯ: ಇನ್ನೊಂದು ಘಟನೆಯಲ್ಲಿ ಸಮೀಪದ ಸೂರಣಗಿ ಗ್ರಾಮದಲ್ಲಿ ಸಂಶಿ ಗ್ರಾಮದ ನೀಲಪ್ಪ ಮಹಾದೇವಪ್ಪ ಕಾಡಪ್ಪನವರ(55) ಎಂಬಾತ ಬೈಕ್ ಸ್ಕಿಡ್ ಆಗಿ ಬಿದ್ದು ತೀವ್ರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಸಾಯಂಕಾಲ ನಡೆದಿದೆ. ಘಟನೆಯಲ್ಲಿ ಗಾಯಗೊಂಡಿರುವ ನೀಲಪ್ಪ ಅವರನ್ನು ಗದಗ ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಶಂಕರ ಶ್ರೀಗಳ ಜ್ಞಾನಮಾರ್ಗ ನಮಗೆ ಆದರ್ಶ
ಮುಂದಿನ ಪೀಳಿಗೆ ಧರ್ಮವಂತರಾಗಿಸೋದೆ ಜೈನ ಧರ್ಮದ ಉದ್ದೇಶ: ಜೈನಮುನಿ ಕುಲರತ್ನಭೂಷಣ ಮಹಾರಾಜರು