ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ: ಎಂ. ಧನಂಜಯ

KannadaprabhaNewsNetwork |  
Published : Mar 15, 2026, 02:30 AM IST
ಪೊಟೋ- ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪೂರ್ವ ಭಅವಿ ಸಭೆರಯಲ್ಲಿ ತಹಸೀಲ್ದಾರ ಧನಂಜಯ ಎಂ ಅವರು ಮಾತನಾಡಿದರು.  | Kannada Prabha

ಸಾರಾಂಶ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 18ರಿಂದ ಆರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಪೂರ್ವಭಾವಿ ಸಭೆ ಜರುಗಿತು.

ಲಕ್ಷ್ಮೇಶ್ವರ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 18ರಿಂದ ಆರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಪೂರ್ವಭಾವಿ ಸಭೆ ಜರುಗಿತು.

ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಎಂ. ಧನಂಜಯ ಸಭೆ ಉದ್ಧೇಶಿಸಿ ಮಾತನಾಡಿ, ಯಾವುದೇ ಸಮಸ್ಯೆ ಆಗದಂತೆ ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಕ್ರಮವಹಿಸಬೇಕು. ವಿಶೇಷವಾಗಿ ಮಕ್ಕಳಿಗೆ ಪರೀಕ್ಷಾ ಕೇಂದ್ರಗಳಿಗೆ ಹೋಗಿ ಬರಲು ಸಾರಿಗೆ ಇಲಾಖೆ ಸೂಕ್ತ ಬಸ್‌ಗಳ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಶಿಕ್ಷಣ ಸಂಯೋಜಕ ರಾಘವೇಂದ್ರ ಜೋಶಿ ಮಾತನಾಡಿ, ತಾಲೂಕಿನಲ್ಲಿ ಪುರಸಭೆ ಉಮಾ ವಿದ್ಯಾಲಯ ಪ್ರೌಢಶಾಲೆ, ಪಿಎಸ್‌ಬಿಡಿ ಬಾಲಕಿಯರ ಪ್ರೌಢಶಾಲೆ, ಬಿಸಿಎನ್ ಕನ್ನಡ ಮಾಧ್ಯಮ ಪ್ರೌಢ ಶಾಲೆ, ತಾಲೂಕಿನ ಪುಟಗಾಂವ್‌ ಬಡ್ನಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆ, ಶಿಗ್ಲಿಯ ಎಸ್‌ಎಸ್‌ಕೆ ಪ್ರೌಢಶಾಲೆ ಮತ್ತು ಬಾಲೆಹೊಸೂರಿನ ಸರ್ಕಾರಿ ಪ್ರೌಢ ಶಾಲೆ ಸೇರಿದಂತೆ ಒಟ್ಟು ಆರು ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಅದಕ್ಕೆ ತಕ್ಕಂತೆ ಅಧೀಕ್ಷಕರು, ಕಸ್ಟೋಡಿಯನ್, ಸ್ಥಾನಿಕ ಜಾಗೃತಿದಳದ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ಮೊಬೈಲ್ ಸ್ವಾಧೀನಧಿಕಾರಿಗಳು, ಕೊಠಡಿ ಮೇಲ್ವಿಚಾರಕರು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ಕೆಲಸ ನಿರ್ವಹಿಸಲಿದ್ದಾರೆ.

ತಾಲೂಕಿನಲ್ಲಿ 14 ಸರ್ಕಾರಿ ಶಾಲೆಗಳು, 8 ಅನುದಾನಿತ ಪ್ರೌಢ ಶಾಲೆಗಳು, 13 ಅನುದಾನರಹಿತ ಪ್ರೌಢ ಶಾಲೆಗಳ 1610 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ’ ಎಂದು ತಿಳಿಸಿದರು.

ಸಾರಿಗೆ ಇಲಾಖೆಯ ಲಕ್ಷ್ಮೇಶ್ವರ ಘಟಕ ವ್ಯವಸ್ಥಾಪಕಿ ಸವಿತಾ ಆದಿ ಮಾತನಾಡಿ ‘ಪರೀಕ್ಷಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಆಗದ ರೀತಿಯಲ್ಲಿ ಬಸ್ ಸಂಚಾರ ವ್ಯವಸ್ಥೆ ಮಾಡಲಾಗುವುದು ಎಂದರು.

ಈ ವೇಳೆ ಪೊಲೀಸ್ ಇಲಾಖೆಯ ದೊಡ್ಡಮನಿ, ಆರೊಗ್ಯ ಇಲಾಖೆ ಸಿಬ್ಬಂದಿ ಕೃಷ್ಣಕುಮಾರ ಕುಲಕರ್ಣಿ, ಪುರಸಭೆ ಕಚೇರಿ ವ್ಯವಸ್ಥಾಪಕಿ ಮಂಜುಳಾ ಹೂಗಾರ ಹಾಗೂ ತಾಲೂಕಿನ ಎಲ್ಲ ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಸಿಲಿನ ಹೊಡೆತಕ್ಕೆ ಸಾವಿರಾರು ಮೀನುಗಳ ಮಾರಣಹೋಮ
ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸ