ಜನರಿಗೆ ನೀರು, ಜಾನುವಾರಿಗೆ ಮೇವಿನ ಕೊರತೆಯಾದಂತೆ ಕ್ರಮವಹಿಸಿ: ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಡಿಕೆಶಿ ಸೂಚನೆ

KannadaprabhaNewsNetwork |  
Published : Apr 30, 2026, 01:15 AM IST
ಕೆ ಕೆ ಪಿ ಸುದ್ದಿ 01: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಉಪಮುಖ್ಯಮಂತ್ರಿ ಡಿಕೆಶಿ ಕೆಡಿಪಿ ಸಭೆ ನಡೆಸಿದರು.  | Kannada Prabha

ಸಾರಾಂಶ

ಬೆಂಗಳೂರು ದಕ್ಷಿಣ ಜಿಲ್ಲೆ ವಿಶೇಷವಾದ ಜಿಲ್ಲೆಯಾಗಿದೆ. ಇದು ಬಹಳ ಬಲಿಷ್ಠವಾದ ನಾಯಕರುಗಳನ್ನು ನೀಡಿರುವ ಜಿಲ್ಲೆ. ಚನ್ನಪಟ್ಟಣಕ್ಕೆ ಖಾಸಗಿ ಮೆಡಿಕಲ್ ಕಾಲೇಜು, ರಾಮನಗರದಲ್ಲಿ ವೈದ್ಯಕೀಯ ವಿಶ್ವವಿದ್ಯಾಲಯ, ಹಾರೋಹಳ್ಳಿಯಲ್ಲಿ ಖಾಸಗಿ ಮೆಡಿಕಲ್ ಕಾಲೇಜು ನಿರ್ಮಾಣವಾಗುತ್ತಿದ್ದು, ತುಂಗಣಿಯ ರಾಯಸಂದ್ರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಶಂಕುಸ್ಥಾಪನೆ ಮಾಡಲಾಗುವುದು,

ಕನ್ನಡಪ್ರಭ ವಾರ್ತೆ ಕನಕಪುರ

ಬೇಸಿಗೆ ವೇಳೆ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕೆಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚಿಸಿದರು.

ನಗರದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕನಕಪುರ ತಾಲೂಕು ಮಟ್ಟದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಪಂಚ ಗ್ಯಾರಂಟಿ ಸೇರಿದಂತೆ ಹಲವು ಸವಲತ್ತುಗಳನ್ನು ಫಲಾನುಭವಿಗಳಿಗೆ ನೀಡಲಾಗಿದೆ, ತಾಲೂಕಿಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸರ್ಕಾರದ ಸವಲತ್ತುಗಳನ್ನು ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪಿಸಬೇಕು ಜೊತೆಗೆ ಆ ಸವಲತ್ತುಗಳು ಫಲಾನುಭವಿಗಳಿಗೆ ತಲುಪಿದ್ದಾವೆಯೇ ಎಂಬುದರ ಕುರಿತು ಖುದ್ದು ಭೇಟಿ ಮಾಡಿ ಫಲಾನುಭವಿಗಳ ಅಭಿಪ್ರಾಯ ಪಡೆದು ವೀಡಿಯೋ ಚಿತ್ರೀಕರಣ ಮಾಡಿಕೊಳ್ಳಬೇಕು, ಫಲಾನುಭವಿಗಳು ಸವಲತ್ತುಗಳನ್ನು ಪಡೆದುಕೊಳ್ಳುವ ಸಂದರ್ಭದಲ್ಲಿ ಮಧ್ಯವರ್ತಿಗಳು ಹಾಗೂ ಅಧಿಕಾರಿಗಳು ಹಣ ಪಡೆದುಕೊಂಡಿದ್ದರೆ ಆ ಬಗ್ಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯ ಸರ್ಕಾರದ ಸವಲತ್ತುಗಳನ್ನು ಫಲಾನುಭವಿಗಳಿಗೆ ತಲುಪಿಸುವ ಸಂದರ್ಭದಲ್ಲಿ ಹಣ ಪಡೆದಿದ್ದರೆ ಅಂತಹ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಕೆಲಸದ ಒತ್ತಡ ಹೆಚ್ಚಿದ್ದು, ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಬೆಂಗಳೂರು ದಕ್ಷಿಣ ಜಿಲ್ಲೆ ವಿಶೇಷವಾದ ಜಿಲ್ಲೆಯಾಗಿದೆ. ಇದು ಬಹಳ ಬಲಿಷ್ಠವಾದ ನಾಯಕರುಗಳನ್ನು ನೀಡಿರುವ ಜಿಲ್ಲೆ. ಚನ್ನಪಟ್ಟಣಕ್ಕೆ ಖಾಸಗಿ ಮೆಡಿಕಲ್ ಕಾಲೇಜು, ರಾಮನಗರದಲ್ಲಿ ವೈದ್ಯಕೀಯ ವಿಶ್ವವಿದ್ಯಾಲಯ, ಹಾರೋಹಳ್ಳಿಯಲ್ಲಿ ಖಾಸಗಿ ಮೆಡಿಕಲ್ ಕಾಲೇಜು ನಿರ್ಮಾಣವಾಗುತ್ತಿದ್ದು, ತುಂಗಣಿಯ ರಾಯಸಂದ್ರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಶಂಕುಸ್ಥಾಪನೆ ಮಾಡಲಾಗುವುದು, ಜನರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ನಾಲ್ಕು ಮೆಡಿಕಲ್ ಕಾಲೇಜುಗಳನ್ನು ಸ್ಥಾಪಿಸ ಲಾಗುತ್ತಿದೆ. ಕನಕಪುರದಲ್ಲಿ ರಸ್ತೆ ಅಗಲೀಕರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ರಾಮನಗರದ ರಸ್ತೆಗಳನ್ನು ಅಗಲೀಕರಣ ಮಾಡಲು ಸರ್ಕಾರದಿಂದ ಹಣ ಮಂಜೂರು ಮಾಡಲು ಕ್ರಮ ವಹಿಸಲಾಗುವುದು. ಕನಕಪುರ ಟೌನಿಗೆ ರಿಂಗ್ ರೋಡ್ ಮಾಡಲು ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಸ್. ರವಿ, ಸುಧಾಮ್ ದಾಸ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕೆ. ರಾಜು, ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್, ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಪಂ ಸಿಇಒ ಅನ್ಮೋಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ವೇದಿಕೆಯಲ್ಲಿದ್ದರು. ತಹಸೀಲ್ದಾರ್ ಸಂಜಯ್, ತಾಲೂಕು ಪಂಚಾಯಿತಿ ಇಒ ಅಭಿಲಾಷ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಇಲಾಖಾ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಭಿವೃದ್ಧಿ ಆಗಿಲ್ಲವೆಂದು ದಿನೇಶ ಶೆಟ್ಟಿ ಕೆಪಿಸಿಸಿಗೆ ಮನದಟ್ಟು
ಕಾಂಗ್ರೆಸ್‌ನಲ್ಲಿ ನಿಲ್ಲದ ರಾಜಕೀಯ ಸಮರ