ಕನ್ನಡಪ್ರಭ ವಾರ್ತೆ ಸಾಗರ
ಡೆಂಘೀ ಹಿನ್ನೆಲೆಯಲ್ಲಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಆರೋಗ್ಯಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಕ್ತ ತಪಾಸಣೆ ವರದಿಯನ್ನು ಅತಿ ಶೀಘ್ರವಾಗಿ ಕೊಡಿ. ರೋಗಿಗಳಿಗೆ ಆಸ್ಪತ್ರೆಯಲ್ಲಿಯೇ ಔಷಧಿಗಳು ಸಿಗುವಂತೆ ನೋಡಿಕೊಳ್ಳಿ ಎಂದು ತಾಕೀತು ಮಾಡಿದರು.
ನಗರಸಭೆಯಿಂದ ಪಟ್ಟಣ ವ್ಯಾಪ್ತಿಯಲ್ಲಿ, ಗ್ರಾಮ ಪಂಚಾಯ್ತಿ ಮೂಲಕ ಗ್ರಾಮೀಣ ಭಾಗದಲ್ಲಿ ಔಷಧಿ ಸಿಂಪಡಣೆಗೆ ಸೂಚನೆ ನೀಡಲಾಗಿದೆ. ತಾಲ್ಲೂಕಿನಲ್ಲಿ ಈ ತನಕ ೧೪೧ ಡೆಂಘೀ ಪ್ರಕರಣ ದಾಖಲಾಗಿದ್ದು, ಅರ್ಧದಷ್ಟು ನಮ್ಮ ತಾಲ್ಲೂಕಿನದ್ದಾಗಿದ್ದರೆ, ಉಳಿದರ್ಧ ಭಾಗ ಅಕ್ಕಪಕ್ಕದ ತಾಲ್ಲೂಕಿನಿಂದ ಬಂದ ರೋಗಿಗಳಾಗಿದ್ದಾರೆ. ವೈದ್ಯ ಸಿಬ್ಬಂದಿ ರಜೆ ಹಾಕದೆ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ಸೂಚನೆ ನೀಡಿದರು.ಅಧಿಕಾರಿಗಳೊಂದಿಗೆ ಸಭೆ:
ವಿದ್ಯಾರ್ಥಿ ನಿಲಯಗಳಲ್ಲಿ ಏನಾದರೂ ಸಮಸ್ಯೆ ಇದ್ದರೆ ನನ್ನ ಗಮನಕ್ಕೆ ತನ್ನಿ. ಕಟ್ಟಡಗಳು ಶಿಥಿಲಾಸ್ಥೆಯಲ್ಲಿದ್ದರೆ ವಿದ್ಯಾರ್ಥಿ ನಿಲಯಗಳನ್ನು ಬೇರೆ ಕಡೆ ಸ್ಥಳಾಂತರಿ ಸಲು ಸೂಚನೆ ನೀಡಿದ ಶಾಸಕರು ಹಾಸ್ಟೆಲ್ ದೂರವಿದ್ದರೆ ಹಾಸ್ಟೆಲ್ನಿಂದ ಶಾಲಾ ಕಾಲೇಜಿಗೆ ಹೋಗಲು ಬಸ್ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ನಟರಾಜ್, ಸಿವಿಲ್ ಸರ್ಜನ್ ಡಾ.ಪರಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಭರತ್, ಪ್ರಮುಖರಾದ ಮಧುಮಾಲತಿ, ಗಣಪತಿ ಮಂಡಗಳಲೆ, ನಾರಾಯಣ ಅರಮನೆಕೇರಿ, ಜಯರಾಮ್, ದಿನಕರ್, ಅನಿಸ್, ಟಿ.ಪಿ.ರಮೇಶ್ ಇನ್ನಿತರರು ಹಾಜರಿದ್ದರು.