ಕೊಂಡವಾಡಿಯಲ್ಲಿ ಬಿಡಾಡಿ ದನ ಸಾಕಲು ಕ್ರಮ ವಹಿಸಿ

KannadaprabhaNewsNetwork |  
Published : May 30, 2025, 12:25 AM IST
ಪೊಟೋ೨೯ಎಸ್.ಆರ್.ಎಸ್೨ (ನಗರದಲ್ಲಿರುವ ಬಿಡಾಡಿ ಜಾನುವಾರುಗಳನ್ನು ಅಲ್ಲಿ ಸಾಕಲು ಕ್ರಮ ವಹಿಸಬೇಕೆಂದು ವಿವಿಧ ಹಿಂದೂಪರ ಸಂಘಟನೆಗಳು ನಗರಸಭೆ ಅಧ್ಯಕ್ಷರು ಹಾಗೂ ಪೌರಾಯುಕ್ತರನ್ನು ಭೇಟಿಯಾಗಿ ಆಗ್ರಹಿಸಿದರು.) | Kannada Prabha

ಸಾರಾಂಶ

ಲಕ್ಷಾಂತರ ರುಪಾಯಿ ವ್ಯಯಿಸಿ ಕೊಂಡವಾಡಿ ನಿರ್ಮಿಸಲಾಗಿದೆ. ಅದು ನಿರ್ವಹಣೆಯಿಲ್ಲದೇ ಹಾಳುಬಿದ್ದಿದೆ.

ಶಿರಸಿ: ಲಕ್ಷಾಂತರ ರುಪಾಯಿ ವ್ಯಯಿಸಿ ಕೊಂಡವಾಡಿ ನಿರ್ಮಿಸಲಾಗಿದೆ. ಅದು ನಿರ್ವಹಣೆಯಿಲ್ಲದೇ ಹಾಳುಬಿದ್ದಿದೆ. ಅದಕ್ಕೆ ಅಗತ್ಯ ಹಣ ನೀಡಿ, ಸರಿಪಡಿಸಬೇಕು. ನಗರದಲ್ಲಿರುವ ಬಿಡಾಡಿ ಜಾನುವಾರುಗಳನ್ನು ಅಲ್ಲಿ ಸಾಕಲು ಕ್ರಮ ವಹಿಸಬೇಕೆಂದು ವಿವಿಧ ಹಿಂದೂಪರ ಸಂಘಟನೆಗಳು ನಗರಸಭೆ ಅಧ್ಯಕ್ಷ, ಪೌರಾಯುಕ್ತಗೆ ಆಗ್ರಹಿಸಿದರು.ನಗರ ವ್ಯಾಪ್ತಿಯಲ್ಲಿರುವ ಬೀದಿನಾಯಿಗಳ ನಿಯಂತ್ರಣಕ್ಕೆ ಲಕ್ಷಾಂತರ ರುಪಾಯಿ ಖರ್ಚು ಮಾಡಲಾಗುತ್ತದೆ. ಗೋ ಮಾತೆ ಸಾಕಲು ನಗರಸಭೆಯಿಂದ ಸಾಧ್ಯವಿಲ್ಲವೇ? ಬಿಡಾಡಿ ದನಗಳನ್ನು ಸಾಕಲು ಲಕ್ಷಾಂತರ ರುಪಾಯಿ ವೆಚ್ಚದಲ್ಲಿ ಕೊಂಡವಾಡಿ ಮಾಡಲಾಗಿದೆ. ಆದರೆ ಅಲ್ಲಿ ದನಗಳಿಲ್ಲ. ಎಲ್ಲ ಜಾನುವಾರು ರಸ್ತೆಯಲ್ಲಿ ಇವೆ. ವಾಹನ ಅಪಘಾತದಲ್ಲಿ ಗಾಯಗೊಂಡ ಜಾನುವಾರುಗಳಿಗೆ ಕೊಂಡವಾಡಿಯಲ್ಲಿ ಆಶ್ರಯ ಸಿಗುತ್ತಿಲ್ಲ. ಕೊಂಡವಾಡಿಯಲ್ಲಿ ಜಾನುವಾರುಗಳಿಗೆ ಅಗತ್ಯವಿರುವ ಮೇವು ದಾಸ್ತಾನಿಲ್ಲ. ನಗರಸಭೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಹಿಂದೂ ಜಾಗರಣ ವೇದಿಕೆಯ ಹರೀಶ ಕರ್ಕಿ ಮಾತನಾಡಿ, ಗೋವು ಕಳ್ಳತನ ನಡೆಯುತ್ತಿದೆ. ಅದನ್ನು ತಡೆಯಲು ಪೊಲೀಸ್ ಇಲಾಖೆ ವಿಫಲವಾಗಿದೆ. ಮಂಗಳವಾರದೊಳಗೆ ಶಿರಸಿ ನಗರ ವ್ಯಾಪ್ತಿ ಬಿಡಾಡಿ ದನ ಹಿಡಿದು ಕೊಂಡವಾಡಿಯಲ್ಲಿ ಆಶ್ರಯ ನೀಡಬೇಕು. ಇಲ್ಲವಾದಲ್ಲಿ ಬುಧವಾರ ಎಲ್ಲ ಜಾನುವಾರುಗಳನ್ನು ನಗರಸಭೆ ಆವಾರಕ್ಕೆ ತಂದು ಕಟ್ಟಿಹಾಕಿ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ನಗರಸಭೆ ಪ್ರಭಾರ ಪೌರಾಯುಕ್ತ ಶಿವರಾಜ ಪ್ರತಿಕ್ರಿಯಿಸಿ, ಕೊಂಡವಾಡಿಯನ್ನು ನಗರಸಭೆಯಿಂದ ನಿರ್ವಹಣೆ ಕಷ್ಟಸಾಧ್ಯ. ಸ್ವಯಂ ಸೇವಾ ಸಂಸ್ಥೆಗಳು ನಿರ್ವಹಣೆ ಜವಾಬ್ದಾರಿ ವಹಿಸಿಕೊಂಡರೆ ಒಂದು ಜಾನುವಾರಿಗೆ ಇಂತಿಷ್ಟು ಹಣ ಎಂದು ನಗರಸಭೆಯಿಂದ ಅವರಿಗೆ ನೀಡಲಾಗುತ್ತದೆ. ಅಧ್ಯಕ್ಷ, ಸದಸ್ಯರ ಜತೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದರು.

ಈ ವೇಳೆ ನಗರಸಭೆ ಸದಸ್ಯ ಪ್ರದೀಪ ಶೆಟ್ಟಿ, ಕೃಷ್ಣಮೂರ್ತಿ ಭಟ್ಟ, ಹರ್ಷ ನಾಯ್ಕ, ಆದರ್ಶ, ರವಿ ಗೌಳಿ, ಅಮಿತ ಶೇಟ್, ಸತೀಶ ನಾಯ್ಕ, ಅಕ್ಷಯ ಮೊಗೇರ, ರಾಘವೇಂದ್ರ ಆಚಾರಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ