ಸಹಕಾರ ಸಂಘದ ಲಾಭ ಪಡೆಯಿರಿ: ಸಂತೋಷ ನಾಯಕ

KannadaprabhaNewsNetwork |  
Published : Aug 14, 2024, 12:52 AM IST
ಸುರಪುರ ತಾಲೂಕಿನ ವಾಗಣಗೇರಾದಲ್ಲಿ ನೂತನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಉದ್ಘಾಟನೆ ಕಾರ್ಯಕ್ರಮ ಜರುಗಿತು. | Kannada Prabha

ಸಾರಾಂಶ

Take advantage of co-operative society: Santosh Nayaka

-ವಾಗಣಗೇರಾ: ನೂತನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಚಾಲನೆ

------

ಕನ್ನಡಪ್ರಭ ವಾರ್ತೆ ಸುರಪುರ

ತಾಲೂಕಿನ ವಾಗಣಗೇರಾದಲ್ಲಿ ನಡೆದ ನೂತನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಘಾಟನೆ ಕಾರ್ಯಕ್ರಮವನ್ನು ಶಾಸಕರ ಸಹೋದರ, ಕಾಂಗ್ರೆಸ್ ಯುವ ಮುಖಂಡ ರಾಜಾ ಸಂತೋಷ ನಾಯಕ ಅವರು ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ಸಹಕಾರ ಸಂಘಗಳು ಗ್ರಾಮೀಣ ಭಾಗದ ಉಸಿರಾಗಿದ್ದು, ಅವುಗಳನ್ನು ಉಳಿಸಿ, ಬೆಳೆಸಲು ನಾವೆಲ್ಲರೂ ಜವಾಬ್ದಾರಿಯಿಂದ ಪ್ರಯತ್ನಿಸಬೇಕು ಎಂದರು.

ಸರ್ಕಾರಕ್ಕೆ ಸರಿಸಮನಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಡಿಸಿಸಿ ಬ್ಯಾಂಕ್, ಪಿಎಲ್‌ಡಿ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ಹಾಲು ಉತ್ಪಾದಕರ ಸಹಕಾರ ಸಂಘ, ವ್ಯವಸಾಯ ಸೇವಾ ಸಹಕಾರ ಸಂಘಗಳು ರೈತರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿವೆ. ಸಹಕಾರ ಸಂಘಗಳಲ್ಲಿ ಸಾಲ ಪಡೆದವರು ನಿಗದಿತ ಅವಧಿಯಲ್ಲಿ ಮರು ಪಾವತಿಸಬೇಕು ಎಂದರು.

ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಹುಣಸಗಿಯ ಬಾಪುಗೌಡ ಮಾತನಾಡಿ, ನೂತನ ಸಂಘಕ್ಕೆ ಬೇಕಾದ ಸೌಲಭ್ಯಗಳನ್ನು ಜಿಲ್ಲಾ ಡಿಸಿಸಿ ಬ್ಯಾಂಕಿನಿಂದ ಒದಗಿಸಲಾಗುವುದು. ಸಾಲ ಪಡೆದ ರೈತರು ಸಮಯಕ್ಕೆ ಸರಿಯಾಗಿ ಸಾಲ ಮರು ಪಾವತಿಸಬೇಕು. ಇದರಿಂದ ಬೇರೆಯವರಿಗೆ ಹಣಕಾಸಿನ ನೆರವು ದೊರೆತು ಸಹಕಾರ ತತ್ವ ಸಾರ್ಥಕವಾಗುತ್ತದೆ ಎಂದರು.

ವಾಗಣಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 7ಸಾವಿರಕ್ಕೂ ಅಧಿಕ ಜನರಿದ್ದಾರೆ. 300 ಸದಸ್ಯರಿಂದ ಸಾವಿರಾರು ವರೆಗೆ ತಲುಪಬೇಕು. ಸಹಕಾರ ಸಂಘದ ಲಾಭವನ್ನು ಪ್ರತಿಯೊಬ್ಬರೂ ಪಡೆಯಬೇಕು ಎಂದು ಮನವಿ ಮಾಡಿದರು.

ಪಿಕೆಪಿಎಸ್ ನೂತನ ಅಧ್ಯಕ್ಷ ವಕೀಲಪ್ಪಗೌಡ, ಉಪಾಧ್ಯಕ್ಷ ದೌಲ್ ಸಾಬ್ ಬೊಮ್ಮನಹಳ್ಳಿ, ಕಾರ್ಯದರ್ಶಿ ಬಸನಗೌಡ ಬಿ. ಪಾಟೀಲ್, ಸದಸ್ಯರಾದ ಬೈಲಪ್ಪಗೌಡ, ಆಂಜನೇಯ ಪಾಟೀಲ್, ಶರಬಯ್ಯ ಸ್ವಾಮಿ, ಮಲ್ಕಪ್ಪ ಪೂಜಾರಿ, ಶ್ರೀನಿವಾಸ್ ಪಾಟೀಲ್, ನಿಂಗಪ್ಪ, ಸಿದ್ದಣ್ಣ ಸಾಹುಕಾರ, ಹಣಮಂತ, ನ್ಯಾನೇಗೌಡ, ಭೀಮಣ್ಣ ಸಿಂಧೆ, ಮೌನೇಶ್ ಇದ್ದರು.

ಫೋಟೊ: 13ವೈಡಿಆರ್11: ಸುರಪುರ ತಾಲೂಕಿನ ವಾಗಣಗೇರಾದಲ್ಲಿ ನೂತನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಉದ್ಘಾಟನೆ ಕಾರ್ಯಕ್ರಮ ಜರುಗಿತು.

---000---

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5000 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ : ಲಕ್ಷ್ಮೀ
ನಾಯಿಗಳ ಮೇಲೂ ತೆರಿಗೆ ಹೇರಿಕೆಗೆ ಮುಂದಾದ ಸರ್ಕಾರ!