ಜನೌಷಧಿ ಕೇಂದ್ರದ ಸದುಪಯೋಗ ಪಡೆದುಕೊಳ್ಳಿ: ವರಸದ್ಯೋಜಾತ ಶ್ರೀ

KannadaprabhaNewsNetwork |  
Published : Jan 02, 2025, 12:33 AM IST
ಹರಪನಹಳ್ಳಿ: ಜನೌಷಧಿಕೇಂದ್ರವನ್ನು ಉದ್ಘಾಟಿಸಿದ ತೆಗ್ಗಿನಮಠದಶ್ರೀಗಳನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಕೇಂದ್ರ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಯಾದ ಜನೌಷಧಿ ಕೇಂದ್ರದಲ್ಲಿ ಬಡವರಿಗೆ ಕೈಗೆಟುಕುವ ಬೆಲೆಯಲ್ಲಿ ಔಷಧಿಗಳು ದೊರೆಯುತ್ತವೆ.

ಹರಪನಹಳ್ಳಿ: ಪಟ್ಟಣದಜೋಯಿಸಕೇರಿಯ ಹೊಸಪೇಟೆರಸ್ತೆ, ಸುವರ್ಣ ಬ್ಯಾಂಕ್‌ ಕಟ್ಟಡದಲ್ಲಿ ನೂತನವಾಗಿ ಆರಂಭವಾಗಿರುವ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ತೆಗ್ಗಿನಮಠದ ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ ಬುಧವಾರ ಉದ್ಘಾಟಿಸಿದರು.ಈ ವೇಳೆ ಮಾತನಾಡಿದ ಶ್ರೀಗಳು, ಕೇಂದ್ರ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಯಾದ ಜನೌಷಧಿ ಕೇಂದ್ರದಲ್ಲಿ ಬಡವರಿಗೆ ಕೈಗೆಟುಕುವ ಬೆಲೆಯಲ್ಲಿ ಔಷಧಿಗಳು ದೊರೆಯುತ್ತವೆ. ಇವುಗಳನ್ನು ಬಡವರು ವೈದ್ಯರ ಸಲಹೆ ಮೂಲಕ ಕಡಿಮೆ ಖರ್ಚಿನಲ್ಲಿ ಖರೀದಿಸಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ಪಟ್ಟಣದಲ್ಲಿ ಇಂತಹ ಜನೌಷಧಿ ಕೇಂದ್ರಗಳು ಅಗತ್ಯವಾಗಿದ್ದು, ತಾಲೂಕಿನ ಜನತೆ ಇದರ ಸದುಪಯೋಗವನ್ನು ಪಡೆದುಕೊಂಡು ತಮ್ಮ ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳಬೇಕು ಎಂದು ತಿಳಿಸಿದರು.

ಬಳ್ಳಾರಿ ಮಾಜಿ ಸಂಸದ ವೈ.ದೇವೆಂದ್ರಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯ ಶಶಿಲ್ ಜಿ.ನಮೋಶಿ ಆಗಮಿಸಿ ಶುಭ ಹಾರೈಸಿದರು.

ಜನೌಷಧಿ ಕೇಂದ್ರದ ಮುಖ್ಯಸ್ಥರಾದ ಶಿಲ್ಪ ವಾಗೀಶ್ ಎಚ್., ಅಶ್ವಿನಿ ನವೀನ್‌ಕುಮಾರ, ವೈದ್ಯರಾದ ಎನ್.ಶಂಕರ ನಾಯ್ಕ, ಬಿ.ಆರ್.ರಾಜೇಶ್, ಅನಂತ ಶೆಟ್ಟಿ ಪೆಂಡಕೂರ್, ಕೆ.ರಮೇಶಕುಮಾರ, ತಟ್ಟ ಇಂದ್ರೇಶ, ಕೆ.ಎಂ.ಖಾನ್, ನಿವೃತ್ತ ಶಿಕ್ಷಕ ಹಖಂಡಿ ಮರಿಕೊಟ್ರಪ್ಪ, ಕೆ.ಎಂ. ಬಸವರಾಜಯ್ಯ, ಶಶಿಧರ ಬೆನ್ನೂರು ಸೇರಿದಂತೆ ಇತರರು ಇದ್ದರು.

ಹರಪನಹಳ್ಳಿ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ತೆಗ್ಗಿನಮಠದ ಶ್ರೀಗಳನ್ನು ಸನ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ