ಮಾ.8ರ ಲೋಕ್ ಅದಾಲತ್ ಪ್ರಯೋಜನ ಪಡೆಯಿರಿ

KannadaprabhaNewsNetwork |  
Published : Mar 02, 2025, 01:19 AM IST
ಪೊಟೋ ಪೈಲ್ : 28ಬಿಕೆಲ್2 | Kannada Prabha

ಸಾರಾಂಶ

ರಾಜೀಯಾಗತಕ್ಕ ಸುಮಾರು ೧೫೦೦ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಗುರುತಿಸಲಾಗಿದೆ.

ಭಟ್ಕಳ: ರಾಜ್ಯಾದ್ಯಂತ ಮಾ.೮ರಂದು ನಡೆಯಲಿರುವ ಲೋಕ್ ಅದಾಲತ್ ಕಾರ್ಯಕ್ರಮ ಭಟ್ಕಳದ ಹಿರಿಯ ಶ್ರೇಣಿಯ ನ್ಯಾಯಾಲಯ, ಪ್ರಥಮ ದರ್ಜೆ ನ್ಯಾಯಾಲಯ ಹಾಗೂ ಹೆಚ್ಚುವರಿ ನ್ಯಾಯಾಲಗಳಲ್ಲಿಯೂ ನಡೆಯಲಿದೆ ಎಂದು ಹಿರಿಯ ಶ್ರೇಣಿಯ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಕಾಂತ ಕುರಣಿ ಹೇಳಿದರು.

ಅವರು ಹಿರಿಯ ಶ್ರೇಣಿಯ ನ್ಯಾಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಲೋಕ್ ಅದಾಲತ್ ಬಗ್ಗೆ ಮಾಹಿತಿ ನೀಡಿದರು.

ಭಟ್ಕಳದ ಮೂರು ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್ ಕಾರ್ಯಕ್ರಮ ನಡೆಯುತ್ತಿದ್ದು, ರಾಜೀಯಾಗತಕ್ಕ ಸುಮಾರು ೧೫೦೦ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಗುರುತಿಸಲಾಗಿದೆ. ಇವುಗಳನ್ನು ಇತ್ಯರ್ಥ ಪಡಿಸುವಲ್ಲಿ ಕ್ರಮ ವಹಿಸಲಾಗಿದೆ. ಈಗಾಗಲೇ ವಕೀಲರು, ಕಕ್ಷಿದಾರರು, ಬ್ಯಾಂಕ್ ವ್ಯವಸ್ಥಾಪಕರು, ಪೊಲೀಸ್ ಇಲಾಖೆ ಇವರನ್ನು ಸೇರಿಸಿ ಅಭಿಪ್ರಾಯ ಸಂಗ್ರಹಿಸಿದ್ದು ಎಲ್ಲರಿಂದಲೂ ಉತ್ತಮ ಸಹಕಾರ ಸಿಕ್ಕಿದೆ ಎಂದರು.

ಕಳೆದ ಲೋಕ ಅದಾಲತ್‌ನಲ್ಲಿ ೧೧೪೬ ಪ್ರಕರಣಗಳನ್ನು ಸಾರ್ವಜನಿಕರು ಹಾಗೂ ವಕೀಲರ ಸಹಕಾರದಿಂದ ಇತ್ಯರ್ಥಪಡಿಸಲಾಗಿತ್ತು. ಲೋಕ ಅದಾಲತ್‌ನಲ್ಲಿ ಪ್ರಕರಣ ಇತ್ಯರ್ಥಗೊಂಡರೆ ಅದಕ್ಕೆ ಮೇಲ್ಮನವಿ ಇರಲ್ಲ. ಪರಸ್ಪರ ಒಪ್ಪಿ ಇಲ್ಲಿ ರಾಜೀಯಾಗುವುದರಿಂದ ಸಮಾಜದಲ್ಲಿ ಸ್ವಾಸ್ಥ್ಯ ಕಾಪಾಡಿದಂತಾಗುತ್ತದೆ. ಇಲ್ಲಿ ಎರಡೂ ಪಕ್ಷಗಾರರು ಗೆಲುವು ಸಾಧಿಸಿದಂತಾಗುತ್ತದೆ. ಅನೇಕ ಕೌಟುಂಬಿಕ ಪ್ರಕರಣಗಳಲ್ಲಿ ರಾಜೀಯಾದ ನಂತರ ಎಲ್ಲರೂ ಒಂದಾಗಿ ಬಾಳುತ್ತಾರೆ. ಹಿಸ್ಸೆ ಪ್ರಕರಣದಲ್ಲಿಯೂ ಉತ್ತಮ ಬಾಂಧವ್ಯ ವೃದ್ಧಿಯಾಗಿದ್ದು ಇದೆ ಎಂದರು.

ಸಾರ್ವಜನಿಕರು ಲೋಕ್ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆಯಬೇಕು ಎಂದರು.

ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶೆ ಧನವತಿ ಮಾತನಾಡಿ, ಲೋಕ ಅದಾಲತ್‌ನಲ್ಲಿ ಎರಡೂ ಕಡೆಯ ಕಕ್ಷಿದಾರರು ಗೆದ್ದಂತೆಯೇ ಇರುತ್ತದೆ. ಲೋಕ್ ಅದಾಲತ್ ಮೂಲಕ ಇತ್ಯರ್ಥಪಡಿಸಲಾದ ಸಿವಿಲ್ ಪ್ರಕರಣದಲ್ಲಿ ನ್ಯಾಯಾಲಯದ ಶುಲ್ಕವನ್ನು ಕೂಡಾ ಹಿಂತಿರುಗಿಸುವುದರಿಂದ ಕಕ್ಷಿದಾರರಿಗೆ ಸಮಯ ಹಾಗೂ ಹಣವು ಕೂಡ ಉಳಿತಾಯವಾಗುವಂತಾಗುತ್ತದೆ. ಲೋಕ ಅದಾಲತ್‌ನಲ್ಲಿ ಕ್ರಿಮಿನಲ್ ಪ್ರಕರಣ, ಸಿವಿಲ ಪ್ರಕರಣ, ಐಪಿಸಿ, ಮೋಟಾರು ವಾಹನ ಪ್ರಕರಣ, ಬಿ.ಎನ್.ಎಸ್.ಎಸ್., ಪಾಲುಪಟ್ಟಿ ಪ್ರಕರಣ, ಹಣ ರಿಕವರಿ ಪ್ರಕರಣ, ಚೆಕ್ ಬೌನ್ಸ್ ಕೇಸುಗಳು, ವಿಮಾ ಕಂಪೆನಿಗಳ ಪ್ರಕರಣ, ಜೀವನಾಂಶ, ವಿಚ್ಚೇದನ ಸೇರಿದಂತೆ ರಾಜೀಯಾಗ ತಕ್ಕ ಎಲ್ಲ ಪ್ರಕರಣಗಳನ್ನು ಕೂಡ ತೆಗೆದುಕೊಳ್ಳಲು ಅವಕಾಶ ಇದೆ ಎಂದರು. ಪ್ರಧಾನ ಸಿವಿಲ್ ನ್ಯಾಧೀಶೆ ಹಾಗೂ ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ದೀಪಾ ಅರಳಗುಂಡಿ ಅವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ
ಕಸಕ್ಕೆ ಬೆಂಕಿ: ಹೊಗೆಯಿಂದ ಮನೆಯಲ್ಲಿ ಉಸಿರಾಡಲು ಆಗುತ್ತಿಲ್ಲ:ನಟಿ ಐಂದ್ರಿತಾ