ಕನ್ನಡಪ್ರಭ ವಾರ್ತೆ ಕಾರವಾರ
ಮಂಗಳವಾರ ಜಿಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಅರಿವು ಸಪ್ತಾಹ ಮತ್ತು ರಾಷ್ಟ್ರವ್ಯಾಪಿ ಡಿಜಿಟಲ್ ಲೈಪ್ ಸರ್ಟಿಫಿಕೇಟ್ ಅಭಿಯಾನ 4.0 ಕಾರ್ಯಕ್ರಮದಲ್ಲಿ ಮಾತನಾಡಿದರು.
ಪಿಂಚಣಿದಾರರು ತಮ್ಮ ಸಮಸ್ಯೆಗಳ ಬಗ್ಗೆ ಅದಲಾತ್ ನಲ್ಲಿ ಮಾತ್ರವಲ್ಲದೇ ಕಚೇರಿಗೆ ಬಂದು ಮಾಹಿತಿ ನೀಡಿದರೆ ಅಕೌಂಟ್ ಜನರಲ್ ಅಧಿಕಾರಿಗಳೊಂದಿಗೆ ಚರ್ಚಿಸಿ ಅವರ ಸಮಸ್ಯೆ ಬಗೆಹರಿಸಲು ಪ್ರಾಮಾಣಿ ಪ್ರಯತ್ನ ಮಾಡಲಾಗುವುದು ಎಂದರು.ಅಕೌಂಟ್ ಜನರಲ್ ಕಚೇರಿಯ ಹಿರಿಯ ಉಪ ಅಕೌಂಟ್ ಜನರಲ್ ವಿಘ್ನೇಶರನ್ ಜೆ., ಪಿಂಚಣಿದಾರರು ತಮ್ಮ ಪಿಂಚಣಿ ಸೌಲಭ್ಯ ಪಡೆಯಲು ಸಲ್ಲಿಸುವ ದಾಖಲಾತಿಗಳು, ಅಗತ್ಯ ಮಾಹಿತಿಯೊಂದಿಗೆ ಭರ್ತಿ ಮಾಡಲಾಗಿರುವ ಬಗ್ಗೆ ಹಾಗೂ ಸೇವಾ ಪುಸ್ತಕದಲ್ಲಿನ ಮಾಹಿತಿಗಳು ಸರಿಯಾಗಿ ಬರೆಯಲಾಗಿದೆ ಎಂಬುದನ್ನು ಖಾತರಿಪಡಿಕೊಳ್ಳಬೇಕು. ಸಂಬಂಧಿಸಿದ ಕಚೇರಿಯ ಮುಖ್ಯಸ್ಥರು ಸಿಬ್ಬಂದಿಯ ಸೇವಾ ಪುಸ್ತಕದಲ್ಲಿ ಸರಿಯಾದ ಮಾಹಿತಿ ಒದಗಿಸಿರುವ ಬಗ್ಗೆ ಆಗಾಗ ಪರಿಶೀಲನೆ ಮಾಡಬೇಕು, ಇದರಿಂದ ಪಿಂಚಣಿ ಸೌಲಭ್ಯ ಪಡೆಯಲು ಆಗುವ ಸಮಸ್ಯೆಗಳನ್ನು ಕಡಿಮೆ ಮಾಡಲು ಸಾಧ್ಯ ಎಂದರು.
ಸಹಾಯಕ ಅಕೌಂಟ್ ಅಧಿಕಾರಿ ಸುನೀಲ ಕುಮಾರ್, ಪಿಂಚಣಿದಾರರು ಮನೆಯಲ್ಲಿಯೇ ತಮ್ಮ ಮೊಬೈಲ್ ಮೂಲಕ ಡಿಜಿಟಲ್ ಲೈಪ್ ಸರ್ಟಿಫಿಕೇಟ್ ಪಡೆಯಬಹುದಾಗಿದೆ ಎಂದರು.
ಜಿಪಂ ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ್, ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತಾ, ಅಕೌಂಟ್ ಜನರಲ್ ಕಚೇರಿಯ ಅಧಿಕಾರಿ ಸಚೀನ ಮಲ್ನಾಡ, ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ವಿ.ಎಂ. ಹೆಗಡೆ ಇದ್ದರು.