ಇ-ಖಾತಾ ಅಭಿಯಾನ ಬಳಸಿಕೊಳ್ಳಿ

KannadaprabhaNewsNetwork |  
Published : Mar 12, 2025, 12:48 AM IST
11ಜಿಯುಡಿ1 | Kannada Prabha

ಸಾರಾಂಶ

ಹಲವರಲ್ಲಿ ಈ ಬಿ-ಖಾತೆ ಮಾಡಿಸಿಕೊಂಡರೆ ಅದಕ್ಕೆ ಬೆಲೆಯಿಲ್ಲ ಎಂಬ ಅನುಮಾನ ಇದೆ. ಆದರೆ ಬಿ-ಖಾತಾಗೂ ಬೆಲೆಯಿದೆ ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದರು. ಆದಷ್ಟು ಶೀಘ್ರವಾಗಿ ಜನರು ತಮ್ಮ ಸ್ವತ್ತುಗಳಿಗೆ ಸಂಬಂಧಿಸಿದಂತೆ ಬಿ-ಖಾತಾ ಮತ್ತು ಇ ಖಾತಾ ಮಾಡಿಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಗುಡಿಬಂಡೆ

ಸರ್ಕಾರ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಾಗೂ ಸಮರ್ಪಕ ದಾಖಲೆ ಇಲ್ಲದ ಆಸ್ತಿಗಳ ಮಾಲೀಕರು ನೇರವಾಗಿ ಇ-ಖಾತಾ ಮಾಡಿಸಿಕೊಳ್ಳುವ ಹಾಗೂ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಜನತೆಗೆ ಅನುಕೂಲ ಮಾಡುವ ಉದ್ದೇಶದಿಂದ ಇ-ಖಾತಾ ಆಂದೋಲನ ಹಮ್ಮಿಕೊಂಡಿದ್ದು, ಇದನ್ನು ಜನತೆ ಸದ್ಬಳಕೆ ಮಾಡಿಕೊಳ್ಳುವಂತೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಬಾ ಶಿರೀನ್ ಮನವಿ ಮಾಡಿದರು.

ಸ್ಥಳೀಯ ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಇ-ಖಾತಾ ಅಭಿಯಾನದ ಕುರಿತು ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಇ-ಖಾತಾ ಅಭಿಯಾನವನ್ನು ಜಾರಿ ಮಾಡಿದೆ ಎಂದರು.

ಬಿ-ಖಾತಾಗೂ ಮಾನ್ಯತೆ ಇದೆ

ಹಲವರಲ್ಲಿ ಈ ಬಿ-ಖಾತೆ ಮಾಡಿಸಿಕೊಂಡರೆ ಅದಕ್ಕೆ ಬೆಲೆಯಿಲ್ಲ ಎಂಬ ಅನುಮಾನ ಇದೆ. ಆದರೆ ಬಿ-ಖಾತಾಗೂ ಬೆಲೆಯಿದೆ ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಯಾವುದೇ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದರು. ಆದಷ್ಟು ಶೀಘ್ರವಾಗಿ ಜನರು ತಮ್ಮ ಸ್ವತ್ತುಗಳಿಗೆ ಸಂಬಂಧಿಸಿದಂತೆ ಬಿ-ಖಾತಾ ಮಾಡಿಸಿಕೊಳ್ಳಬೇಕು ಎಂದರು.

ಬಳಿಕ ಪ.ಪಂ ಅಧ್ಯಕ್ಷ ವಿಕಾಸ್ ಮಾತನಾಡಿ, ಜನರು ತಮ್ಮ ಸ್ವತ್ತುಗಳಿಗೆ ಖಾತಾ ಮಾಡಿಸಿಕೊಳ್ಳಲು ಯಾವುದೇ ಮಧ್ಯವರ್ತಿಗಳ ಬಳಿ ಹೋಗದೆ ಈ ಅಭಿಯಾನದ ಮೂಲಕ ನೇರವಾಗಿ ಸ್ಥಳೀಯ ಸಂಸ್ಥೆಗಳ ಕಚೇರಿಗೆ ಹೋಗಿ ದಾಖಲೆಗಳನ್ನು ಸಲ್ಲಿಸಿ ಇ-ಖಾತೆ ಪಡೆಯಬಹುದಾಗಿದೆ. ಜನರು ನೇರವಾಗಿ ಪುರಸಭೆ ಕಚೇರಿಗೆ ಬಂದು ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಿದರೆ, ಅರ್ಜಿ ಸಲ್ಲಿಸಿದ 15 ದಿನಗಳಲ್ಲಿ ನಿಮ್ಮ ಆಸ್ತಿಯ ಇ-ಖಾತೆ ಮಾಡಿಕೊಡಲಾಗುವುದು ಎಂದರು.

ಇದೇ ಸಮಯದಲ್ಲಿ ಪಪಂ ಸದಸ್ಯ ಇಸ್ಮಾಯಿಲ್ ಅಜಾದ್ ಬಾಬು, ನಾಮಿನಿ ಸದಸ್ಯ ಅಂಬರೀಶ್ ಇ-ಖಾತಾ ಅಭಿಯಾನದ ಕುರಿತು ಜನರಿಗೆ ಅರಿವು ಮೂಡಿಸಿದರು. ಈ ಸಮಯದಲ್ಲಿ ಪಪಂ ಉಪಾಧ್ಯಕ್ಷ ಗಂಗರಾಜು, ಸದಸ್ಯರಾದ ಬಷೀರ್, ಪಪಂ ಸಿಬ್ಬಂದಿಯಾದ ಬಾಲಪ್ಪ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ