ಜನ ಸುರಕ್ಷಾ ಯೋಜನೆ ಪ್ರಯೋಜನ ಪಡೆದುಕೊಳ್ಳಿ: ಅನಿಕೇತ್‌

KannadaprabhaNewsNetwork |  
Published : Sep 05, 2025, 01:01 AM IST
ಪ್ರಯೋಜನ | Kannada Prabha

ಸಾರಾಂಶ

ಜನಸಾಮಾನ್ಯರು ಕೇಂದ್ರ ಸರ್ಕಾರದ ಜನ ಸುರಕ್ಷಾ ಯೋಜನೆಗಳ ಗರಿಷ್ಠ ಪ್ರಯೋಜನ ಪಡೆದುಕೊಳ್ಳುವಂತೆ ಅನಿಕೇತ್‌ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಜನಸಾಮಾನ್ಯರು ಕೇಂದ್ರ ಸರ್ಕಾರದ ಜನ ಸುರಕ್ಷಾ ಯೋಜನೆಗಳ ಗರಿಷ್ಠ ಪ್ರಯೋಜನಗಳನ್ನು ಪಡೆದುಕೊಳ್ಳುವಂತೆ ಸುಂಟಿಕೊಪ್ಪ ಕೆನಾರ ಬ್ಯಾಂಕಿನ ವ್ಯವಸ್ಥಾಪಕರಾದ ಅನಿಕೇತ್ ಕರೆ ನೀಡಿದರು. ಸೋಮವಾರ ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಸಹಯೋಗದೊಂದಿಗೆ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಗ್ರಾಮದಲ್ಲಿ, ಕೇಂದ್ರ ಸರ್ಕಾರದ ಆದೇಶದಂತೆ ಆಯಾ ಗ್ರಾಮದ ಬ್ಯಾಂಕ್ ಶಾಖೆ ಮುಖಾಂತರ ಪ್ರತಿ ವರ್ಷವೂ ನಡೆಸುವ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮವನ್ನು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಉದ್ಘಾಟಿಸಿ ಮಾತನಾಡಿದರು. ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು. ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭೀಮಾ ಯೋಜನೆಯು ಒಂದು ಅಪಘಾತ ವಿಮೆಯಾಗಿದ್ದು ವಾರ್ಷಿಕ 20 ರು. ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 2 ಲಕ್ಷ ರು. ಗಳ ವರೆಗಿನ ವಿಮಾಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ಹಾಗೂ ವಾರ್ಷಿಕವಾಗಿ 436 ರು. ಗಳನ್ನು ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇ ರೀತಿಯಲ್ಲಿ ಮರಣಹೊಂದಿದರೆ ಅಂತವರ ನಾಮಿನಿಗೂ ಕೂಡ 2 ಲಕ್ಷ ರು. ಗಳ ವಿಮಾಮೊತ್ತ ಸಿಗುವುದಾಗಿ ತಿಳಿಸಿದರು. ಎರಡನ್ನೂ ಮಾಡಿಸಿಕೊಂಡಲ್ಲಿ 4 ಲಕ್ಷ ರು. ಗಳ ವರೆಗಿನ ವಿಮಾಮೊತ್ತ ಸಿಗುವುದಾಗಿ ಮಾಹಿತಿ ನೀಡಿದರು. ಅಲ್ಲದೆ 60 ವಯಸ್ಸು ಆದನಂತರದಲ್ಲಿ ಪಿಂಚಣಿರೂಪದಲ್ಲಿ 1000 ರು. ಗಳಿಂದ 5000 ರು. ಗಳ ವರೆಗಿನ ಪಿಂಚಣಿ ಹಣಸಿಗಬೇಕಾದರೆ ಈಗಾಲೇ ಅಟಲ್ ಪಿಂಚಣಿ ಯೋಜನೆಯನ್ನು ಮಾಡಿಸುವಂತೆ ತಿಳಿಸಿದರು.ಆರ್ಥಿಕ ಸಮಾಲೋಚಕರಾದ ನಬಿ ಅವರು ಮಾತನಾಡಿ, ಪ್ರತಿಯೊಬ್ಬರು ರೀ ಕೆವೈಸಿ ಕಡ್ಡಾಯವಾಗಿ ಮಾಡಿಸುವಂತೆ ತಿಳಿಸಿದರು. ಎಲ್ಲರೂ ನಿಮ್ಮ ಖಾತೆ ಇರುವ ಬ್ಯಾಂಕ್ ಗಳಿಗೆ ತೆರಳಿ ತಮ್ಮ ಗುರುತಿನ ಚೀಟಿ ಆಧಾರ್ ಕಾರ್ಡನ್ನು ನೀಡಿ ಮರುಕೆವೈಸಿ ಮಾಡಿಸುವಂತೆ ಗ್ರಾಹಕರಿಗೆ ಸಲಹೆ ನೀಡಿದರು. ಯೂನಿಯನ್ ಬ್ಯಾಂಕ್ ಆಫ್‌ಇಂಡಿಯಾ ಇವರ ಸಹಯೋಗದಲ್ಲಿ ನಬಾರ್ಡ್ನ ಆರ್ಥಿಕ ನೆರವಿನೊಂದಿಗೆ ಕೊಡಗು ಜಿಲ್ಲೆಯಲ್ಲಿ ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಪ್ರತೀ ತಾಲೂಕುಗಳಲ್ಲಿ ಮಾಡುತ್ತಿದ್ದು ಇದರ ಮುಖ್ಯ ಉದ್ದೇಶವೂ ಕೂಡ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದು ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡುವುದು ಮತ್ತು ಡಿಜಿಟಲ್ ಪೇಮೆಂಟ್‌ಗಳ ಬಗ್ಗೆ ಮಾಹಿತಿ ನೀಡುವುದೇ ಆಗಿದೆ ಎಂದು ಆರ್ಥಿಕ ಸಮಾಲೋಚಕರಾದ ಸಿ.ಜಿ.ಹರೀಶ್ ತಿಳಿಸಿದರು. ಕೊನೆಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ. ಜಿ. ಲೋಕೇಶ್ ಮಾತನಾಡಿ, ಈ ಒಂದು ಕಾರ್ಯಕ್ರಮವು ಅತ್ಯಂತ ಉಪಯುಕ್ತವಾದ ಕಾರ್ಯಕ್ರಮವಾಗಿದ್ದು, ಜನತೆಯು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ವೇದಿಕೆಯಲ್ಲಿ ಬ್ಯಾಂಕ್ ಸಿಬ್ಬಂದಿ ಹಾಗೂ ಗ್ರಾಹಕರು ಉಪಸ್ಥಿತರಿದ್ದರು. ಹರೀಶ್ ಅವರು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಣಸೆ, ಹಲಸು, ನೇರಳೆಗೆ ಮಂಡಳಿ ರಚಿಸಿ: ದೇವೇಗೌಡ
ಗುಮ್ಮ ಬಂದ ಗುಮ್ಮ, ಮಕ್ಕಳಿಗೆ ಹೊಡೆಯೋ ಗುಮ್ಮ!