ಕನ್ನಡಪ್ರ ವಾರ್ತೆ ಕಲಬುರಗಿ
ಸಾಕ್ಷರತೆ ಕೊರತೆಯೆ ಮಹಿಳೆಯರ ಹಿಂದುಳಿವಿಕೆಗೆ ಪ್ರಮುಖ ಕಾರಣವಾಗಿದೆ. ಮೊದಲು ಸಾಕ್ಷರರಾಗಬೇಕಿದೆ. ಸಾಕ್ಷರತೆಯಿಂದ ಮಾತ್ರ ಪ್ರಗತಿ ಸಾಧ್ಯ ಎಂದ ಅವರು, ತಾನು ಬೆಂಗಳೂರಿನ ಮಗಳಾದರು ಕಲಬುರಗಿ ಸೊಸೆಯಾಗಿರುವೆ. ಕಳೆದ 12 ವರ್ಷ ಇಲ್ಲಿನ ಎಚ್.ಕೆ.ಇ ಸಂಸ್ಥೆಯ ಡೆಂಟಲ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿರುವೆ ಎಂದು ತಮ್ಮ ಕಲಬುರಗಿ ನಂಟು ಬಿಚ್ಚಿಟ್ಟರು.
ಇತ್ತೀಚೆಗೆ ಮಹಿಳೆಯರಲ್ಲಿ ಸ್ತನ, ಗರ್ಭ ಕ್ಯಾನ್ಸರ್ ಹೆಚ್ಚುತ್ತಿದ್ದು, ಇಂತಹ ಆರೋಗ್ಯ ಶಿಬಿರಗಳ ಮೂಲಕ ಉಚಿತ ಚಿಕಿತ್ಸೆ ಪಡೆಯಬೇಕು. ಮಹಿಳಾ ಸಬಲೀಕರಣ ಮತ್ತು ಕಲ್ಯಾಣಕ್ಕೆ ಸರ್ಕಾರ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರ ಲಾಭ ಪಡೆದು ಜೀವನದಲ್ಲಿ ಮುಂದೆ ಬರಬೇಕೆಂದು ಆತ್ಮವಿಶ್ವಾಸದ ಮಾತುಗಳನ್ನಾಡಿದ ಅಧ್ಯಕ್ಷರು ಶಿಬಿರದಲ್ಲಿ ಭಾಗವಹಿಸಿದ ಮಹಿಳೆಯರೊಂದಿಗೆ ಆತ್ಮೀಯವಾಗಿ ಸಂವಾದ ಕೈಗೊಂಡರು.ಇದಕ್ಕು ಮುನ್ನ ಆರೋಗ್ಯ ಕೇಂದ್ರದ ಹೆರಿಗೆ ಕೋಣೆ, ಲೇಬರ್ ರೂಂ, ಓ.ಪಿ.ಡಿ ಹೀಗೆ ವಿವಿಧ ಕೋಣೆ ಭೇಟಿ ನೀಡಿದ ಅಧ್ಯಕ್ಷರು ರೋಗಿಗಳ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನವೀನ್ ಯು., ಡಿ.ಸಿ.ಪಿ.ಓ ಮಂಗಳಾ ಪಾಟೀಲ, ಪ್ರಭಾರಿ ಡಿ.ಎಚ್.ಓ ಡಾ.ಸುರೇಶ ಮೇಕಿನ್, ಜಿಲ್ಲಾ ಆರ್.ಸಿ.ಎಚ್.ಓ ಡಾ.ಶರಣಬಸಪ್ಪ ಖ್ಯಾತನಾಳ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ರತಿಕಾಂತಿ, ತಾಪಂ ಇ.ಓ ವೀರಣ್ಣ ಕೌಲಗಿ, ಟಿ.ಎಚ್.ಓ ಡಾ.ರವಿ ಬಿರಾದಾರ, ಸ್ಥಳೀಯ ವೈದ್ಯಾಧಿಕಾರಿ ಡಾ.ಅಪರ್ಣಾ ಸೇರಿದಂತೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿಗಳು ಇದ್ದರು. ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಆರೋಗ್ಯ ತಪಾಸಣೆಗೆ ಒಳಗಾದರು.
ಕೇಂದ್ರ ಕಾರಾಗೃಹಕ್ಕೆ ಭೇಟಿ: ನಂತರ ಮಹಿಳಾ ಆಯೋಗದ ಅಧ್ಯಕ್ಷರು ಕಲಬುರಗಿಯ ನಂದಿಕೂರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಅಲ್ಲಿ ಬಂಧಿಯಾದ ಮಹಿಳಾ ಕೈದಿಗಳನ್ನು ಭೇಟಿಯಾಗಿ ಮಾತನಾಡಿಸಿದರು. ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ.ಪಿ.ರಂಗನಾಥ, ಸಹಾಯಕ ಅಧೀಕ್ಷಕ ಬಿ.ಸುರೇಶ ಇದ್ದರು.