ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ಪಿ.ಸಿ. ಗದ್ದಿಗೌಡರ

KannadaprabhaNewsNetwork |  
Published : May 29, 2025, 01:46 AM ISTUpdated : May 29, 2025, 01:47 AM IST
 ಫೋಟೋ: 28 ಜಿಎಲ್‌ ಡಿ2- ಗುಳೇದಗುಡ್ಡದಲ್ಲಿ  ಜನೌಷಧಿ ಕೇಂದ್ರ ಹಾಗೂ ನೇಕಾರರಿಗೆ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಸಂಸದ ಪಿ.ಸಿ.ಗದ್ದಿಗೌಡರ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.  | Kannada Prabha

ಸಾರಾಂಶ

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಹಕಾರಿ ಸಂಘದ ಮುಖಾಂತರ ಸಾರ್ವಜನಿಕ ಕಾರ್ಯಕ್ರಮಗಳಿಗೆ ಸಾಕಷ್ಟು ಪ್ರೊತ್ಸಾಹ ನೀಡುತ್ತಿದೆ. ಕೇಂದ್ರ ಸಚಿವ ಅಮಿತ್‌ ಶಾ ಅವರ ಅಶಯವೂ ಅದೇ ಆಗಿದೆ ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.

ಕನ್ನಡಪ್ರಭ ವಾರ್ತೆ ಗುಳೇದಗುಡ್ಡ

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಹಕಾರಿ ಸಂಘದ ಮುಖಾಂತರ ಸಾರ್ವಜನಿಕ ಕಾರ್ಯಕ್ರಮಗಳಿಗೆ ಸಾಕಷ್ಟು ಪ್ರೊತ್ಸಾಹ ನೀಡುತ್ತಿದೆ. ಕೇಂದ್ರ ಸಚಿವ ಅಮಿತ್‌ ಶಾ ಅವರ ಅಶಯವೂ ಅದೇ ಆಗಿದೆ ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.

ಕೋಟೆಕಲ್ ದ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಪಟ್ಟಣದ ಚೌ ಬಜಾರದಲ್ಲಿ ಮಂಗಳವಾರ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರ ಉದ್ಘಾಟನೆ ಹಾಗೂ ಕಮತಗಿಯ ಮುಖ್ಯ ರಸ್ತೆಯಲ್ಲಿ ನಬಾರ್ಡ್‌ ಯೋಜನೆಯಡಿ ನಿರ್ಮಾಣಗೊಂಡಿರುವ ಕೈಮಗ್ಗ ನೇಕಾರರ ಉತ್ಪನ್ನಗಳ ಉತ್ಪಾದನಾ ಕೇಂದ್ರದಲ್ಲಿ ನೇಕಾರರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡುವ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಕೋಟೆಕಲ್ ಪಿಕೆಪಿಎಸ್ ದಿಂದ ಹಮ್ಮಿಕೊಂಡಿರುವ ಎಲ್ಲ ಯೋಜನೆಗಳಿಗೆ ನನ್ನ ಬೆಂಬಲವಿದೆ. ಕೇಂದ್ರದ ವಿವಿಧ ಯೋಜನೆಗಳನ್ನು ಈ ಸಂಘಕ್ಕೆ ನೀಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಹನುಮಂತ ಮಾವಿನಮರದ ಅವರಿಗೆ ಜನಪರ ಕಾಳಜಿ ಇದೆ. ಇಲ್ಲಿನ ನೇಕಾರರ ಸಮಸ್ಯೆಗಳು ಸಾಕಷ್ಟಿದ್ದು, ಅವುಗಳ ನಿವಾರಣೆಗೆ ನಮ್ಮ ಸರ್ಕಾರ ವಿವಿಧ ಯೋಜನೆ ರೂಪಿಸಿದೆ. ಸಹಕಾರ ಸಂಘಗಳು ಅವುಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಕುಮಾರಗೌಡ ಜನಾಲಿ ಮಾತನಾಡಿ, ಕೋಟೆಕಲ್ ಸಂಘದ ಉತ್ತರೋತ್ತರ ಅಭಿವೃದ್ಧಿಗೆ ಬಿಡಿಸಿಸಿ ಬ್ಯಾಂಕ್ ನಿರಂತರ ಸಹಕಾರ ನೀಡಲಿದೆ ಎಂದರು.

ಸಂಘದ ಅಧ್ಯಕ್ಷ ಹನುಮಂತ ಮಾವಿನಮರದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುರುಘಾಮಠದ ಕಾಶಿನಾಥ ಸ್ವಾಮಿಗಳು, ಜಗದ್ಗುರು ಗುರುಸಿದ್ದೇಶ್ವರ ಬೃಹನ್ಮಠದ ಶ್ರೀ ಜಗದ್ಗುರು ಗುರುಸಿದ್ಧ ಪಟ್ಟದಾರ್ಯ ಶ್ರೀಗಳು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಹಕಾರ ಸಂಘಗಳ ಅಪರ ನಿಬಂಧಕ ಎಸ್.ಎನ್. ನೀಲಪ್ಪನವರ, ಡಿಡಿಎಂ ನಬಾರ್ಡ ನ ಮಂಜುನಾಥ ರೆಡ್ಡಿ ಯೋಜನೆಗಳ ಕುರಿತು ಮತ್ತು ಕೌಶಲ್ಯ ಅಭಿವೃದ್ಧಿ ತರಬೇತಿಯ ಮಹತ್ವ ಕುರಿತು ಮಾಹಿತಿ ನೀಡಿದರು.

ಸಹಕಾರ ಸಂಘಗಳ ಉಪನಿಬಂಧಕ ದಾನಯ್ಯ ಹಿರೇಮಠ, ಕೋಟೆಕಲ್ ಪಿಕೆಪಿಎಸ್ ಉಪಾಧ್ಯಕ್ಷ ಲಕ್ಷ್ಮಣ ಹಾಲನ್ನವರ, ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಮೋಹನ ಕಲ್ಯಾಣಿ , ಗುಳೇದಗುಡ್ಡ ಕೈಮಗ್ಗ ಉತ್ಪನ್ನಗಳ ಸಂಘದ ಮುಖ್ಯಸ್ಥ ರಮೇಶ ಅಯೋಧ್ಯ ವೇದಿಕೆ ಮೇಲಿದ್ದರು.

ಸಂಘದ ನಿರ್ದೇಶಕ ಮಂಡಳಿಯ ಪದಾಧಿಕಾರಿಗಳಾದ ಸಂಗಪ್ಪ ಹಡಪದ, ಮಾಗುಂಡಪ್ಪ ಸುಂಕದ, ನಾಗಪ್ಪ ಮುರಗೋಡ, ಸಂತೋಷ ತಿಪ್ಪಾ, ದ್ಯಾಮಣ್ಣ ಗದ್ದನಕೇರಿ, ಯಮನಪ್ಪ ರಾಠೋಡ ಹಾಗೂ ಶೇಖರ ರಾಠೋಡ, ಸಂಗಮೇಶ ಚಿಕ್ಕಾಡಿ, ಸಚಿನ್ ರಾಂಪೂರ, ಸಂತೋಷ ನಾಯನೇಗಲಿ ಹಾಗೂ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ