ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಗಾಂಧಿ ಭವನದಲ್ಲಿ ಶುಕ್ರವಾರ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಿ ಅವರು ಮಾತನಾಡಿದರು. ಸ್ಪರ್ಧಾತ್ಮಕ ಯುಗದಲ್ಲಿ ಕಲಿಕೆಯ ಕಡೆ ವಿದ್ಯಾರ್ಥಿಗಳು ಹೆಚ್ಚು ಗಮನಹರಿಸಬೇಕು. ಶಿಕ್ಷಣದಿಂದ ಭವಿಷ್ಯವನ್ನು ಉಜ್ವಲಗೊಳಿಸಿಕೊಂಡಾಗ ಬದುಕು ಸಾರ್ಥಕತೆ ಪಡೆದುಕೊಳ್ಳುತ್ತದೆ. ವಿದ್ಯಾವಂತರಾಗಿ ಉತ್ತಮ ಹುದ್ದೆಗೇರಿ ನಾಡಿಗೆ ಮತ್ತು ದೇಶಕ್ಕೆ ಕೊಡುಗೆ ನೀಡುವಂತೆ ತಿಳಿಸಿದರು.
ಪರಿಶಿಷ್ಟ ಜಾತಿ, ಪಂಗಡದವರನ್ನೂ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಹಾಗೂ ಶಿಕ್ಷಣ ಅವರಿಗೂ ದೊರಕಬೇಕೆಂಬ ಮಹತ್ವಾಕಾಂಕ್ಷೆಯಿಂದ ಸರ್ಕಾರ ವಿದ್ಯಾರ್ಥಿವೇತನವನ್ನು ನೀಡುತ್ತಿದೆ. ಅವರೂ ಚೆನ್ನಾಗಿ ಓದಿ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು. ಶಿಕ್ಷಣದಿಂದ ಮಾತ್ರ ನೀವು ಸುಂದರ ಮತ್ತು ಸುಭದ್ರ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ ಎಂದು ನುಡಿದರು.ವಿದ್ಯೆ ಯಾರೊಬ್ಬರೂ ಕದಿಯಲಾಗದ ಆಸ್ತಿ. ಪೋಷಕರು ಮಕ್ಕಳಿಗಾಗಿ ಆಸ್ತಿಯನ್ನು ಮಾಡದೆ ಶಿಕ್ಷಣವನ್ನು ದೊರಕಿಸಿಕೊಟ್ಟು ಮಕ್ಕಳನ್ನು ಈ ದೇಶದ ಆಸ್ತಿಯನ್ನಾಗಿ ಮಾಡಬೇಕು. ಪ್ರಸ್ತುತ ಯುಗದಲ್ಲಿ ಶಿಕ್ಷಣದಲ್ಲಿ ಅವಕಾಶಗಳ ಬಾಗಿಲು ಮುಕ್ತವಾಗಿ ತೆರೆದುಕೊಂಡಿವೆ. ವಿದ್ಯಾರ್ಥಿಗಳು ಸರಿಯಾದದ್ದನ್ನು ಆಯ್ಕೆ ಮಾಡಿಕೊಂಡು ಬದುಕನ್ನು ಕಟ್ಟಿಕೊಳ್ಳುವಂತೆ ತಿಳಿಸಿದರು.
ನಗರಸಭೆ ಆಯುಕ್ತ ಆರ್. ಮಂಜುನಾಥ್ ಮಾತನಾಡಿ, ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ಹಾಗೂ ಎಂಎ ಸೇರಿ ೨೦೫ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಪರಿಶಿಷ್ಟ ಜಾತಿಗೆ ಸೇರಿದ ೧೦೩ ವಿದ್ಯಾರ್ಥಿಗಳಿಗೆ ೫,೮೦,೦೦೦ ರು. ಹಾಗೂ ೧೦೨ ಇತರೆ ಕಡು ಬಡ ವಿದ್ಯಾರ್ಥಿಗಳಿಗೆ ೫,೪೦,೦೦೦ ರು. ವಿದ್ಯಾರ್ಥಿವೇತನ ನೀಡಲಾಗುತ್ತಿದೆ ಎಂದರು.