ವಿದ್ಯುತ್ ಸಮಸ್ಯೆ ತಲೆದೋರದಂತೆ ನೋಡಿಕೊಳ್ಳಿ-ಬಸವರಾಜ ಛತ್ರದ

KannadaprabhaNewsNetwork |  
Published : Nov 07, 2025, 02:45 AM IST
ಮ | Kannada Prabha

ಸಾರಾಂಶ

ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ವಿದ್ಯುತ್ ಸಮಸ್ಯೆ ತಲೆದೋರದಂತೆ ನೋಡಿಕೊಳ್ಳುವ ಜತೆಗೆ ಹಗಲು ಹೊತ್ತಿನಲ್ಲಿ ಬೀದಿದೀಪಗಳು ಉರಿಯುತ್ತಿರುವುದು ಕಂಡುಬಂದಿದೆ. ಇಂತಹ ಬೇಜವಾಬ್ದಾರಿ ವರ್ತನೆಗೆ ಕಡಿವಾಣ ಹಾಕಬೇಕು ಎಂದು ಸದಸ್ಯ ಬಸವರಾಜ ಛತ್ರದ ಒತ್ತಾಯಿಸಿದರು.

ಬ್ಯಾಡಗಿ: ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ವಿದ್ಯುತ್ ಸಮಸ್ಯೆ ತಲೆದೋರದಂತೆ ನೋಡಿಕೊಳ್ಳುವ ಜತೆಗೆ ಹಗಲು ಹೊತ್ತಿನಲ್ಲಿ ಬೀದಿದೀಪಗಳು ಉರಿಯುತ್ತಿರುವುದು ಕಂಡುಬಂದಿದೆ. ಇಂತಹ ಬೇಜವಾಬ್ದಾರಿ ವರ್ತನೆಗೆ ಕಡಿವಾಣ ಹಾಕಬೇಕು ಎಂದು ಸದಸ್ಯ ಬಸವರಾಜ ಛತ್ರದ ಒತ್ತಾಯಿಸಿದರು.

ಬುಧವಾರ ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ಅವರು ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದರು. ಪುರಸಭೆ ಸಾಮಾನ್ಯ ಸಭೆ ಮಂಗಳವಾರ ನಿಗದಿಯಾಗಿತ್ತು. ಆದರೆ ನಿವೇಶನ ಹಂಚಿಕೆ ವಿಚಾರವಾಗಿ ಮಹಿಳೆಯರು ಪ್ರತಿಭಟನೆ ನಡೆಸಿದ್ದರಿಂದ ಸಭೆ ಮುಂದೂಡಲಾಗಿತ್ತು.

ಕಸ ವಿಲೇವಾರಿ ತಲೆನೋವು:

ಸದಸ್ಯ ಈರಣ್ಣ ಬಣಕಾರ ಮಾತನಾಡಿ, ಪಟ್ಟಣದ ಜನರಿಗೆ ಎಷ್ಟೇ ಅರಿವು ಮೂಡಿಸಿದರೂ ಕಸ ವಿಲೇವಾರಿ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಮನೆ ಮನೆ ಕಸ ಸಂಗ್ರಹಣೆ ಮಾಡಲು ವಾಹನ ಕಳುಹಿಸಿದರೂ ಹಸಿಕಸ-ಒಣಕಸ ಪ್ರತ್ಯೇಕಿಸಲು ಹಿಂದೇಟು ಹಾಕುತ್ತಿದ್ದಾರೆ. ಸಂತೆ ಮೈದಾನದಲ್ಲಿ ಕೊಯಿಮತ್ತೂರ ಹಾಗೂ ಹೈದರಾಬಾದ್‌ ಮಾದರಿಯಲ್ಲಿ ತರಕಾರಿ ಕಸ ಸಂಸ್ಕರಣಾ ಘಟಕ ಸ್ಥಾಪಿಸಿದಲ್ಲಿ ಉತ್ತಮ ಎಂಬ ಸಲಹೆ ನೀಡಿದರು.

ಅಂಗನವಾಡಿಗೆ ಶುದ್ಧ ಕುಡಿಯುವ ನೀರು: ಪುರಸಭೆ ಉಪಾಧ್ಯಕ್ಷ ಸುಭಾಸ ಮಾಳಗಿ ಮಾತನಾಡಿ, ಪಟ್ಟಣದಲ್ಲಿ 20ಕ್ಕೂ ಹೆಚ್ಚು ಅಂಗನವಾಡಿಗಳಿದ್ದು, ಪುಟ್ಟಪುಟ್ಟ ಮಕ್ಕಳ ಆರೋಗ್ಯ ದೃಷ್ಟಿಯಿಂದ ಪುರಸಭೆ ವತಿಯಿಂದ ಶುದ್ಧ ಕುಡಿಯುವ ನೀರಿನ ಫಿಲ್ಟರ್ (ವಾಟರ್ ಪ್ಯೂರಿಫೈಯರ್‌) ನೀಡುವುದು ಸೂಕ್ತ ಎಂದಾಗ ಎಲ್ಲ ಸದಸ್ಯರು ಒಮ್ಮತದಿಂದ ಒಪ್ಪಿಗೆ ಸೂಚಿಸಿದರು.

ಈ ವೇಳೆ ಪುರಸಭೆ ಮುಖ್ಯಾಧಿಕಾರಿ ವಿನಯಕುಮಾರ ಹೊಳಿಯಪ್ಪಗೋಳ, ಸ್ಥಾಯಿ ಸಮಿತಿ ಅಧ್ಯಕ್ಷ ಚಂದ್ರಣ್ಣ ಶೆಟ್ಟರ, ಸದಸ್ಯರಾದ ಶಿವರಾಜ ಅಂಗಡಿ, ವಿನಯ ಹಿರೇಮಠ, ಸರೋಜಾ ಉಳ್ಳಾಗಡ್ಡಿ, ಕಲಾವತಿ ಬಡಿಗೇರ, ಗಾಯತ್ರಿ ರಾಯ್ಕರ, ಮಲ್ಲಮ್ಮ ಪಾಟೀಲ, ಕವಿತಾ ಸೊಪ್ಪಿನಮಠ, ಶಂಕರ ಕುಸಗೂರ, ಹನುಮಂತ ಮ್ಯಾಗೇರಿ, ಮಹ್ಮದ ರಫೀಕ್ ಮುದುಗಲ್, ಮಹಬೂಬಸಾಬ್ ಅಗಸನಹಳ್ಳಿ, ಫಕ್ಕೀರಮ್ಮ ಛಲವಾದಿ ಉಪಸ್ಥಿತರಿದ್ದರು.

ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆಯಲ್ಲಿ ಮೋಸವಾಗಿದ್ದು, ಎಲ್ಲ ಸದಸ್ಯರು ತಮ್ಮ ವಾರ್ಡ್‌ನಲ್ಲಿ ಹಕ್ಕುಪತ್ರ ಪಡೆದ ಅನರ್ಹರನ್ನು ಪತ್ತೆ ಮಾಡಿ ಅವರೆಲ್ಲ ದಾಖಲೆ ಕ್ರೋಡೀಕರಣ ಪುರಸಭೆಗೆ ನೀಡಿ ಅರ್ಹರಿಗೆ ನಿವೇಶನ ಸಿಗುವಂತೆ ಮಾಡಬೇಕಿದೆ ಎಂದು ಪುರಸಭೆ ಸದಸ್ಯ ಬಸವರಾಜ ಛತ್ರದ ಪುರಸಭೆ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಲಿತ ಸಂಘಟನೆಗಳಿಂದ ಮನುಸ್ಮೃತಿ ಪ್ರತಿ ಹರಿದು ಪ್ರತಿಭಟನೆ
ಶಿಕ್ಷಣದ ಆರಂಭಿಕ ಮೆಟ್ಟಿಲು ಕನ್ನಡ ಸ್ಪಷ್ಟ ಓದು, ಬರಹವಾಗಿದೆ: ಕೃಷ್ಣೇಗೌಡ