ನಿಮ್ಮ ತಟ್ಟೆಯಲ್ಲಿ ಕತ್ತೆ ಬಿದ್ದಿದೆ ಅದನ್ನ ನೋಡಿಕೊಳ್ಳಿ: ಶಾಸಕ ರಾಜು ಕಾಗೆ

KannadaprabhaNewsNetwork |  
Published : Aug 13, 2024, 12:58 AM IST
ಮದಬಾವಿ ಗ್ರಾಮದಲ್ಲಿ‌ ಅಂಗನವಾಡಿ ಕಟ್ಟಡವನ್ನು ಶಾಸಕ ರಾಜು ಕಾಗೆ ಉದ್ಘಾಟಿಸಿದರು. ವಿನಾಯಕ ಬಾಗಡಿ, ಸಿಡಿಪಿಒ ಸಂಜಯಕುಮಾರ ಸದಲಗಿ ಮತ್ತಿತರರು ಇದ್ದರು. | Kannada Prabha

ಸಾರಾಂಶ

ಕಾಗವಾಡತಮ್ಮ ತಟ್ಟೆಯಲ್ಲಿ ಕತ್ತೆ ಬಿದ್ದಿದೆ. ಬೇರೆಯವರ ತಟ್ಟೆಯಲ್ಲಿನ ನೋಣದ ಬಗ್ಗೆ ಮಾತನಾಡುವುದು ಎಷ್ಟು ಸರಿ ಎಂದು ಬಿಜೆಪಿ ನಾಯಕರಿಗೆ ಕಾಗವಾಡ ಶಾಸಕ ರಾಜು ಕಾಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಕಾಗವಾಡ

ತಮ್ಮ ತಟ್ಟೆಯಲ್ಲಿ ಕತ್ತೆ ಬಿದ್ದಿದೆ. ಬೇರೆಯವರ ತಟ್ಟೆಯಲ್ಲಿನ ನೋಣದ ಬಗ್ಗೆ ಮಾತನಾಡುವುದು ಎಷ್ಟು ಸರಿ ಎಂದು ಬಿಜೆಪಿ ನಾಯಕರಿಗೆ ಕಾಗವಾಡ ಶಾಸಕ ರಾಜು ಕಾಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಸೋಮವಾರ ಮದಬಾವಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಅಂಗನವಾಡಿ ಕಟ್ಟಡ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂಡಾ ಹಗರಣ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ಪಾದಯಾತ್ರೆ ಹಮ್ಮಿಕೊಂಡ ಬಿಜೆಪಿ ನಾಯಕರ ವರ್ತನೆ ಸರಿಯಲ್ಲ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರ ಕೊರಳಿಗೆ ಆರೋಪಗಳ ಸರಮಾಲೆಯೇ ಇದೆ. ರಾಜ್ಯದಲ್ಲಿ ನೂರಾರು ಸಮಸ್ಯೆಗಳಿವೆ, ನೆರೆ, ಬರ ಸಮಸ್ಯೆ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ನೆರೆ ಹಾವಳಿಯಲ್ಲಿ ಸಾವಿರಾರು ಎಕರೆ ಭೂ ಪ್ರದೇಶದ ಬೆಳೆಗಳು ನಾಶವಾಗಿವೆ. ಇತ್ತ ಬಸವೇಶ್ವರ ಏತ ನೀರಾವರಿ ಕುರಿತು ಯಾರೂ ಧ್ವನಿ ಎತ್ತುತ್ತಿಲ್ಲ, ಹೋದ ವರ್ಷವೇ ಯೋಜನೆ ಆರಂಭವಾಗಬೇಕಿತ್ತು. ಆದರೆ, ಈವರೆಗೂ ಆರಂಭವಾಗಿಲ್ಲ. ಕಳೆದ ವರ್ಷ ಬರ ಅವರಿಸಿದ್ದರೆ, ಈ ಬಾರಿ ಅತಿವೃಷ್ಟಿಯಿಂದ ಬೆಳೆಗಳು ಹಾಳಾಗಿವೆ. ರೈತರ ಸಮಸ್ಯೆ ಕುರಿತು ಯಾರೂ ಹೋರಾಟ ಮಾಡಲಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ನವರಿಗೆ ಮಾಡಲು ಬೇರೆ ಕೆಲಸವಿಲ್ಲ. ಅದಕ್ಕಾಗಿ ಮೂಡಾ ಹಗರಣ ಎಂದು ಹೋರಾಟ ಮಾಡುತ್ತಿದ್ದಾರೆ. ಇವರ ಹೋರಾಟಕ್ಕೆ ಯಾವುದೇ ಅರ್ಥವಿಲ್ಲ ಎಂದರು.

ಬಿಜೆಪಿ ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ. ತಮ್ಮ ಶಾಸಕರ ಮಧ್ಯೆಯೇ ಹಲವು ಭಿನ್ನಾಭಿಪ್ರಾಯಗಳಿವೆ. ಬಿಜೆಪಿ ನೈತಿಕತೆ ಮರೆತಿದೆ ಎಂದು ಟೀಕಿಸಿದರು. ಜಿಪಂ ಮಾಜಿ ಸದಸ್ಯ ವಿನಾಯಕ ಬಾಗಡಿ ಪಿಕೆಪಿಎಸ್ ಅಧ್ಯಕ್ಷ ನಿಜಗುಣಿ ಮಗದುಮ್ಮ, ಅಶೋಕ ಪುಜಾರಿ, ಶಿವಾನಂದ ಮಗದುಮ್ಮ, ಕೆ.ಆರ್. ಪಾಟೀಲ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿವಿಧ ಬೇಡಿಕೆ ಈಡೇರಿಸಲು ವೈದ್ಯರ ಆಗ್ರಹ: ಶಶಿಕುಮಾರ್
ಬೇಸಿಗೆಯಲ್ಲಿ ಕುಡಿವ ನೀರಿನ ಬಗ್ಗೆ ಎಚ್ಚರವಿರಲಿ