ಚಿಕಿತ್ಸೆಗಿಂತ ರೋಗ ತಡೆಗಟ್ಟವುದು ಜಾಣರ ಲಕ್ಷಣ । 40 ಜನರಿಗೆ ರಕ್ತ ಪರೀಕ್ಷೆ
ಬಿಪಿ, ಶುಗರ್ ವರ್ಷಕ್ಕೆ ಒಂದು ಬಾರಿ ಪರೀಕ್ಷೆ ಮಾಡಿಸುವುದು ಕೇವಲ ವೈದ್ಯರ ಸಲಹೆ ಅಷ್ಟೇ ಅಲ್ಲ. ನಿಮ್ಮ ಆರೋಗ್ಯ ಮತ್ತು ಜೀವವನ್ನು ಕಾಪಾಡುವ ಮೊದಲ ಹೆಜ್ಜೆ. ದೊಡ್ಡ ದೊಡ್ಡ ಕಾಯಿಲೆಗಳನ್ನು ಪ್ರಾರಂಭದಲ್ಲಿ ಪತ್ತೆ ಮಾಡಲು ಮತ್ತು ನಂತರದ ಚಿಕಿತ್ಸೆಗೆ ಈ ಪರೀಕ್ಷೆಗಳು ಅತ್ಯಗತ್ಯ ಎಂದು ಕರುಣಾ ಜೀವ ಕಲ್ಯಾಣ ಟ್ರಸ್ಟ್ನ ಶಿವನಕೆರೆ ಬಸವಲಿಂಗಪ್ಪ ಹೇಳದರು.
ನಗರದ ಅರಿವು ಬಳಗದಿಂದ ಗುರುವಾರ ಮುಂಜಾನೆ ಇಲ್ಲಿನ ಕೊಂಡಜ್ಜಿ ರಸ್ತೆಯ ಕೆಲವು ಭಾಗಗಳಲ್ಲಿ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉಚಿತ ರಕ್ತ ಪರೀಕ್ಷಾ ಕಾರ್ಯಕ್ರಮದಲ್ಲಿ ಮಾತನಾಡಿದರು.ಇಂದಿನ ದಿನಮಾನಗಳಲ್ಲಿ ಬಿಪಿ, ಶುಗರ್, ಹೃದಯ, ಕಡ್ನಿ, ಲಿವರ್ ಸಂಬಂಧಿ ಕಾಯಿಲೆಗಳು ಸರ್ವೇಸಾಮಾನ್ಯವಾಗಿವೆ. ಇದಕ್ಕೆಲ್ಲಾ ಮೂಲ ಕಾರಣ ನಮ್ಮ ಆಹಾರ ಪದ್ಧತಿ ಮತ್ತು ಅಸಮರ್ಪಕ ಜೀವನ ಶೈಲಿ. ಇತ್ತೀಚೆಗೆ ಚಿಕ್ಕ ಚಿಕ್ಕ ಮಕ್ಕಳಲ್ಲಿ ಇಂತಹ ಕಾಯಿಲೆಗಳನ್ನು ನೋಡುತ್ತಿದ್ದೇವೆ. ಆದ್ದರಿಂದ 25 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಈ ಪರೀಕ್ಷೆ ಮಾಡಿಸಿಕೊಳ್ಳಲೇಬೇಕು ಎಂದು ಹೇಳಿದರು.
ಈ ಶಿಬಿರದಲ್ಲಿ ಅರಿವು ಬಳಗದ ಬಿ.ಓ.ಮಲ್ಲಿಕಾರ್ಜುನ್, ಸುನೀಲ್, ಪ್ರಕಾಶ್ ಎಂ.ಸಿದ್ದಪ್ಪ, ಪ್ರಭುಸ್ವಾಮಿ, ಜಯರಾಜ್, ಎನ್.ಪಿ. ಜಯಣ್ಣ ಇತರರು ಇದ್ದರು. ಈ ಭಾಗದ ಸುಮಾರು 40 ಜನರು ರಕ್ತ ಪರೀಕ್ಷೆ ಮಾಡಿಸಿಕೊಂಡರು.