ಕನ್ನಡಪ್ರಭ ವಾರ್ತೆ ಕಿಕ್ಕೇರಿ
ಹೋಬಳಿಯ ಚೌಡೇನಹಳ್ಳಿ ಗ್ರಾಪಂ ವ್ಯಾಪ್ತಿಯ ಕೃಷ್ಣಾಪುರ, ಬೋರಾಪುರ ಹಾಗೂ ರಾಮನಹಳ್ಳಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಶಾಸಕ ಎಚ್.ಟಿ.ಮಂಜು ಜೊತೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದರು.
ಕುಡಿಯುವ ನೀರು ಸರಬರಾಜಿಗೆ ಸಂಬಂಧಿಸಿದಂತೆ ಎದುರಾಗಿರುವ ತೊಂದರೆ ಕುರಿತು ಪರಿಶೀಲನೆ ನಡೆಸಿ ಸಾರ್ವಜನಿಕರಿಂದ ಮಾಹಿತಿ ಪಡೆದರು. ನೀರಿಗೆ ತತ್ವರ ಉಂಟಾಗಿರುವ ಗ್ರಾಮದಲ್ಲಿ ಕುಡಿವವ ನೀರು ಸರಬರಾಜಿಗೆ ಸಂಬಂಧಿಸಿದಂತೆ ತೆಗೆದುಕೊಂಡ ಕ್ರಮಗಳು ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಕೂಡಲೇ ಕ್ರಮ ವಹಿಸಲು ನಿರ್ದೇಶನ ನೀಡಿದರು.ಗ್ರಾಮಗಳಲ್ಲಿನ ಪ್ರಸ್ತುತ ನೀರಿನ ಲಭ್ಯತೆ, ದಿನ ನಿತ್ಯದ ಬೇಡಿಕೆ ಹಾಗೂ ಸರಬರಾಜು ವ್ಯವಸ್ಥೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು. ಕುಡಿಯುವ ನೀರಿನ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಅಗತ್ಯ ಪರ್ಯಾಯ ವ್ಯವಸ್ಥೆಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಕೊಳವೆ ಬಾವಿಗಳಲ್ಲಿ ನೀರಿನ ಇಳುವರಿ ಕಡಿಮೆಯಾಗಿದೆ. ಗ್ರಾಮಸ್ಥರಿಗೆ ನಿರಂತರವಾಗಿ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯಲಾಗಿದೆ ಎಂದು ಸಿಇಒ ಅವರಿಗೆ ಮಾಹಿತಿ ನೀಡಿದರು.
ಕೆರೆ ಕಟ್ಟೆಗಳಿಗೆ ನೀರು ತುಂಬಿಸುವಂತೆ ರೈತನಿಂದ ಏಕಾಂಗಿ ಪ್ರತಿಭಟನೆಕನ್ನಡಪ್ರಭ ವಾರ್ತೆ ಪಾಂಡವಪುರತಾಲೂಕಿನ ಕೆಂಚನಹಳ್ಳಿ ಹೂವಿನಕಟ್ಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಕೆರೆಕಟ್ಟೆಗಳಿಗೆ ಹೇಮಾವತಿ ನಾಲೆಯಿಂದ ನೀರು ತುಂಬಿಸುವಂತೆ ಒತ್ತಾಯಿಸಿ ಗ್ರಾಮದ ರೈತ ಕೆ.ಎನ್.ನಾಗೇಗೌಡ ಪಟ್ಟಣದ ಹೇಮಾವತಿ ಇಲಾಖೆ ಎದುರು ಏಕಾಂಗಿ ಪ್ರತಿಭಟನೆ ನಡೆಸಿದರು.
ಬಳಿಕ ಸ್ಥಳಕ್ಕೆ ಬಂದ ಇಇ ಶ್ರೀನಾಥ್, ಎಇಇ ರಾಘವೇಂದ್ರ ರೈತನ ಮನವೊಲಿಸಿ ಸಂಜೆ ಅಥವಾ ನಾಳೆಯೊಳಗಾಗಿ ಕೆಂಚನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಭರವಸೆ ನೀಡಿದರು. ಜತೆಗೆ ಅಧಿಕಾರಿಗಳೊಂದಿಗೆ ಕೆರೆಕಟ್ಟೆಗಳ ವೀಕ್ಷಣೆಗೆ ಬರುವುದಾಗಿಯೂ ಭರವಸೆ ನೀಡಿದ ಮೇರೆಗೆ ಪ್ರತಿಭಟನೆ ಹಿಂಪಡೆದರು.