ಕನ್ನಡಪ್ರಭ ವಾರ್ತೆ ಮಂಡ್ಯ
ಪ್ರಸ್ತುತ ಜಿಲ್ಲೆಯಲ್ಲಿ 710 ರೋಗಿಗಳು ಕ್ಷಯ ರೋಗ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಕ್ಷಯ ರೋಗಗಳ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. 2015ರ ಕ್ಷಯ ರೋಗದ ಪ್ರಮಾಣವನ್ನು 2022ಕ್ಕೆ ಹೋಲಿಸಿದರೆ ಜಿಲ್ಲೆಯಲ್ಲಿ ಶೇ.20ರಷ್ಟು ಕಡಿಮೆಯಾಗಿದೆ ಎಂದರು.
2022ರಲ್ಲಿ ಕೇಂದ್ರ ಕ್ಷಯರೋಗ ವಿಭಾಗ ಜಿಲ್ಲೆಗೆ ಕಂಚಿನ ಪದಕ ನೀಡಿ ಗೌರವಿಸಿದೆ. ಜಿಲ್ಲೆಯಲ್ಲಿ 4 CBNAAT (ಕಾರ್ಟ್ರಿಡ್ಜ್-ಆಧಾರಿತ ನ್ಯೂಕ್ಲಿಯಿಕ್ ಆಮ್ಲ ವರ್ಧನೆ ಪರೀಕ್ಷೆ) ಮೆಷೀನ್ ಗಳು ಇದೆ. ಕ್ಷಯ ರೋಗ ಲಕ್ಷಣ ಇರುವ ವ್ಯಕ್ತಿಯ ಎಂಜಲಿನಿಂದ ಕೇವಲ 2 ಗಂಟೆಗಳಲ್ಲಿ ಕ್ಷಯ ರೋಗವನ್ನು ಪತ್ತೆ ಹಚ್ಚಬಲ್ಲದು ಎಂದರು.ಕ್ಷಯ ರೋಗ ದೃಡಪಟ್ಟ ರೋಗಿಗಳಿಗೆ 6 ತಿಂಗಳ ಕಾಲ ಆಶಾ ಕಾರ್ಯಕರ್ತೆಯರಿಂದ ಉಚಿತ ಔಷಧಿ ಒದಗಿಸಲಾಗುವುದು ಹಾಗೂ ಮಾತ್ರೆಯನ್ನು ಸೇವನೆ ಮಾಡಿಸಲಾಗುವುದು. ಔಷಧಿಗಳು ಕನಿಷ್ಠ 10 ದಿನಗಳ ಸೇವನೆಯಿಂದ ಕ್ಷಯ ರೋಗ ಇತರರಿಗೆ ಹರಡದಂತೆ ತಡೆಯಬಹುದು. ಕ್ಷಯ ರೋಗಿಗಳು ವೆಂಟಿಲೇಷನ್ ನಲ್ಲಿ ಇರಬೇಕು ಹಾಗೂ ಮಾಸ್ಕ್ ಧರಿಸಬೇಕು. ಪೌಷ್ಟಿಕತೆಗಾಗಿ ಕೇಂದ್ರ ಸರ್ಕಾರದ ನಿಕ್ಷಯ್ ಪೋಷಣಾ ಯೋಜನೆಯಡಿ ಕ್ಷಯ ರೋಗಿಗಳಿಗೆ ಪ್ರತಿ ಮಾಹೆ 1000 ನೀಡಲಾಗುವುದು ಎಂದರು.
ಈಗಾಗಲೇ ಚಿಕಿತ್ಸೆ ಪಡೆದು ಕ್ಷಯ ರೋಗದಿಂದ ಮುಕ್ತಗೊಂಡಿರುವ ವ್ಯಕ್ತಿಗಳ ಮೂಲಕ ಕ್ಷಯ ರೋಗಿಗಳಿಗೆ ಜಾಗೃತಿ ಮೂಡಿಸಿ ಔಷಧಿಗಳನ್ನು ಎಸೆಯದೆ ಸೇವನೆ ಮಾಡುವಂತೆ ಸೂಚಿಸಿ, ಸಾಮಾಜಿಕ ಜಾಲತಾಣಗಳಲ್ಲೂ ಜಾಗೃತಿ ಮೂಡಿಸಿ ಎಂದು ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಆಶಾಲತ, ಆರ್ ಸಿಎಚ್ ಅಧಿಕಾರಿ ಡಾ.ಅಶ್ವತ್ಥ್ , ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.