ಕುಡಿವ ನೀರಿಗೆ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಿ

KannadaprabhaNewsNetwork |  
Published : Apr 06, 2026, 01:30 AM IST
ಮಧುಗಿರಿಯ ತಾಪಂ ಸಭಾಂಗಣದಲ್ಲಿ  ಅಧಿಕಾರಿಗಳೊಂದಿಗೆ ಶಾಸಕ ಕೆ.ಎನ್.ರಾಜಣ್ಣ ಸಭೆ ನಡೆಸಿದರು.  | Kannada Prabha

ಸಾರಾಂಶ

ನಗರ ಮತ್ತು ಗ್ರಾಮೀಣರಿಗೆ ಕುಡಿವ ನೀರು, ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಗಳಿಗೆ ಸಂಬಂಧಪಟ್ಟ ಯೋಜನೆಗಳನ್ನು ಕೈಗೆತ್ತಿಕೊಂಡು ಜನರ ಅಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದು ಶಾಸಕ ಕೆ.ಎನ್‌.ರಾಜಣ್ಣ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಕನ್ನಡಪ್ರಭ ವಾರ್ತೆ ಮಧುಗಿರಿ

ನಗರ ಮತ್ತು ಗ್ರಾಮೀಣರಿಗೆ ಕುಡಿವ ನೀರು, ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಗಳಿಗೆ ಸಂಬಂಧಪಟ್ಟ ಯೋಜನೆಗಳನ್ನು ಕೈಗೆತ್ತಿಕೊಂಡು ಜನರ ಅಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದು ಶಾಸಕ ಕೆ.ಎನ್‌.ರಾಜಣ್ಣ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಬೇಸಿಗೆ ಪ್ರಾರಂಭವಾಗಿದ್ದು, ನಗರ, ಗ್ರಾಮೀಣ ಜನ-ಜಾನುವಾರುಗಳಿಗೆ ಕುಡಿವ ನೀರಿಗೆ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಿ ಎಂದರು.

ಕೆರೆಗಳಲ್ಲಿ ಅನಧಿಕೃತವಾಗಿ ಮಣ್ಣನ್ನು ಸಾಗಿಸದೇ, ರೈತರು ತಮ್ಮ ಜಮೀನುಗಳಿಗೆ ಸಾಗಿಸಲು ಅರ್ಜಿ ಪಡೆದು ಅನುಮತಿ ನೀಡಬೇಕು. ಆದರೆ ವಾಣಿಜ್ಯ ಉಪಯೋಗಕ್ಕೆ ಸಾಗಿಸಲು ಬೆಲೆ ನಿಗದಿಪಡಿಸಿ ಅನುಮತಿ ನೀಡಬೇಕು. ಗ್ರಾಪಂಗಳ ವ್ಯಾಪ್ತಿಯಲ್ಲಿ ಅಂಗನವಾಡಿ ಮಕ್ಕಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಶೂ,ಯೂನಿಫಾರಂ, ವಿತರಿಸಲು ಕ್ರಮ ಕೈಗೊಳ್ಳಿ, ಅಲ್ಲದೆ ಸರ್ಕಾರಿ ಶಾಲಾ ಮಕ್ಕಳಿಗೆ ಗುಣ ಮಟ್ಟದ ಪಠ್ಯಪುಸ್ತಕ ನೀಡಲು ಅಗತ್ಯ ಕ್ರಮ ಕೈಗೊಳ್ಳ ಬೇಕೆಂದು ಪಿಡಿಓಗಳಿಗೆ ಸೂಚಿಸಿದರು.

ಸಾರ್ವಜನಿಕರಿಂದ ಬಂದ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಂಡು ಕೆಲಸ ಮಾಡಿ ಗ್ರಾಮಗಳ ಮತ್ತು ಜನರ ಆರ್ಥಿಕ ಮಟ್ಟ ಸುಧಾರಣೆಗೆ ಗ್ರಾಪಂನಿಂದ ದೊರೆಯುವ ಎಲ್ಲ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಲು ಪಿಡಿಒಗಳು ಮುಂದಾಗಬೇಕು.ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ದದೆ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.

ಏಪ್ರಿಲ್ 1 ರಿಂದ ಪ್ರಾರಂಭವಾಗಿರುವ ಸ್ವಯಂ ಗಣತಿಯಲ್ಲಿ ಗ್ರಾಪಂ ಅಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು ಎಲ್ಲರೂ ಸಹ ಸ್ವಯಂ ಗಣತಿ ಮಾಡಿಕೊಳ್ಳಲು ಏ.15ರವರೆಗೆ ಅವಕಾಶವಿದ್ದು,ಎಲ್ಲರೂ ಸಹ ಸ್ವಯಂ ಪ್ರೇರಿತರಾಗಿ ಗಣತಿ ಮಾಡಿಕೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಎಸಿ ಗೋಟೂರು ಶಿವಪ್ಪ, ತಹಸೀಲ್ದಾರ್ ಶ್ರೀನಿವಾಸ್,ಇಒ ಲಕ್ಷ್ಮಣ್,ಡಿವೈಎಸ್‌ಪಿ ಮಂಜುನಾಥ್,ಎಡಿ ಧನಂಜಯ್,ಪುರಸಭೆ ಮುಖ್ಯಾಧಿಕಾರಿ ಸುರೇಶ್,ಪಂಚಾಯಿತಿ ಆಡಳಿತಾಧಿಕಾರಿಗಳು ಹಾಗೂ ತಾಲೂಕು ಮಟ್ಟದ ಇತರೆ ಇಲಾಖಾಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂದೆ-ತಾಯಿಯನ್ನು ಮಕ್ಕಳು ಕಡೆಗಣಿಸುವುದು ಸಲ್ಲ: ನ್ಯಾ. ಇ.ಎಸ್.ಇಂದ್ರೇಶ್
ಒಳ ಮೀಸಲಾತಿಯಿಂದ ಭೋವಿ ಸಮುದಾಯಕ್ಕೆ ಅನ್ಯಾಯ