- ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಟಾಸ್ಕ್ ಫೋರ್ಸ್ ಸಭೆ
- - -ಕನ್ನಡಪ್ರಭ ವಾರ್ತೆ ದಾವಣಗೆರೆ ಕೆಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಧಾನ್ಯ ಆಧಾರಿತ ಎಥೆನಾಲ್ ಉತ್ಪಾದಿಸುವ ಡಿಸ್ಟಿಲರಿಗಳ ಮೂಲಕ ಮೆಕ್ಕೆಜೋಳ ಖರೀದಿಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಟಾಸ್ಕ್ ಫೋರ್ಸ್ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸಕ್ತ ಸಾಲಿಗೆ ಮುಂಗಾರು ಹಂಗಾಮಿನ ಅವಧಿಯಲ್ಲಿ ಜಿಲ್ಲಾದ್ಯಂತ ಅತಿ ಹೆಚ್ಚು ಮೆಕ್ಕೆಜೋಳ ಬೆಳೆಯಲಾಗಿದೆ. ಅದರಂತೆ ಕೇಂದ್ರ ಸರ್ಕಾರವು ಪ್ರತಿ ಕ್ವಿಂ.ಗೆ ₹2400 ಬೆಂಬಲ ಬೆಲೆ ಘೋಷಿಸಿದ್ದು, ಪ್ರತಿ ರೈತರಿಂದ ₹20 ಕ್ವಿಂಟಾಲ್ ಮೆಕ್ಕೆಜೋಳ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಎಪಿಎಂಸಿಗೆ ಪ್ರತಿದಿನ 3 ಸಾವಿರ ಕ್ವಿಂಟಲ್ ಆವಕವಾಗುತ್ತಿವೆ ಎಂದರು.ಬೆಂಬಲ ಬೆಲೆ ಘೋಷಣೆಯಾದ ನಂತರ ಜಿಲ್ಲೆಯ ಕೃಷಿ ಮಾರುಕಟ್ಟೆಗಳಲ್ಲಿ ಪ್ರಸ್ತುತ ಪ್ರತಿ ಕ್ವಿಂಟಲ್ಗೆ ₹1600 ರಿಂದ ₹1900 ರವರೆಗೆ ಮಾರಾಟವಾಗುತ್ತಿದೆ. ಧಾನ್ಯ ಆಧಾರಿತ ಎಥೆನಾಲ್ ಉತ್ಪಾದಿಸುವ ಡಿಸ್ಟಲರಿಗಳನ್ನು ಸಂಪರ್ಕಿಸಿ ಹತ್ತಿರದ ಪಿಸಿಎಸ್ಗಳ ಮೂಲಕ ಎಥೆನಾಲ್ಗೆ ಅಗತ್ಯಕ್ಕೆ ತಕ್ಕಂತೆ ಖರೀದಿಗೆ ತ್ವರಿತವಾಗಿ ಕ್ರಮವಹಿಸುವುದರ ಜತೆಗೆ ರೈತರಿಂದ ಖರೀದಿಸಿದ ಧಾನ್ಯಗಳ ಗುಣಮಟ್ಟ ಕಾಯ್ದುಕೊಳ್ಳಬೇಕು. ಅಬಕಾರಿ ಇಲಾಖೆ, ಸಹಕಾರ ಮಂಡಳವು ಜಿಲ್ಲೆಯಲ್ಲಿನ ಎಥೆನಾಲ್ ಉತ್ಪಾದಿಸುವ ಡಿಸ್ಟಿಲರಿಗಳನ್ನು ಸಂಪರ್ಕಿಸಿ ಖರೀದಿಗೆ ಬೇಕಾಗುವ ಅಂಕಿ-ಅಂಶಗಳನ್ನು ಸಂಗ್ರಹಿಸಲು ಸೂಚನೆ ನೀಡಿದರು.
ಸಭೆಯಲ್ಲಿ ಆಹಾರ ಮತು ನಾಗರೀಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಕೆ.ಪಿ.ಮಧುಸೂದನ್, ಅಬಕಾರಿ ಉಪ ಆಯುಕ್ತ ಜುನೈದ್, ಸಹಕಾರ ಇಲಾಖೆ ಉಪನಿಬಂಧಕ ಮಧು ಶ್ರೀನಿವಾಸ್, ಎಪಿಎಂಸಿ ಇಲಾಖೆ ಗಿರೀಶ್ ನಾಯ್ಕ್ ಸೇರಿದಂತೆ ಮತ್ತಿತರರು ಇದ್ದರು.- - -
-6ಕೆಡಿವಿಜಿ36: ಜಿ.ಎಂ.ಗಂಗಾಧರ ಸ್ವಾಮಿ