ಕನ್ನಡಪ್ರಭ ವಾರ್ತೆ ಹುಣಸಗಿ
ಪಟ್ಟಣದ 16 ವಾರ್ಡ್ ಗಳಲ್ಲಿ ಸೊಳ್ಳೆ ನಿಯಂತ್ರಣ ಹಾಗೂ ಮಲೇರಿಯಾ ರೋಗದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಮಾತನಾಡಿದ ಅವರು, ಸಾರ್ವಜನಿಕರು ತಾವು ವಾಸವಿರುವ ಪ್ರದೇಶದಲ್ಲಿ ನೀರು, ಕಸ, ತಾಜ್ಯ, ಸಂಗ್ರಹವಾಗದಂತೆ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ತಿಳಿಸಿದರು.
ಉತ್ತಮ ಮಳೆ ಆಗುತ್ತಿದ್ದು, ಈ ಸಂದರ್ಭದಲ್ಲಿ ತೊಟ್ಟಿ, ಚರಂಡಿ ಹಾಗೂ ಇನ್ನಿತರ ಘನ ತ್ಯಾಜ್ಯಗಳಲ್ಲಿ ನೀರು ಶೇಖರಣೆಯಾಗಿ ಸೊಳ್ಳೆಗಳು ಉತ್ಪತ್ತಿಗೊಂಡು ಡೆಂಘೀ, ಮಲೇರಿಯಾ ನಂತಹ ರೋಗಗಳು ಕಂಡು ಬರುವ ಸಂಭವ ಹೆಚ್ಚಿದ್ದು, ಡೆಂಘೀ ಮಲೇರಿಯಾ ರೋಗವನ್ನು ನಿಯಂತ್ರಿಸಲು ಮುಂಜಾಗ್ರತೆ ವಹಿಸಲು ತಿಳಿಸಿದರು.ಕೆಬಿಜೆಎನ್ಎಲ್ ಆರೋಗ್ಯ ನಿರೀಕ್ಷಣಾಧಿಕಾರಿ ಅಜಯಕುಮಾರ ಎಂ.ಬಿ. ಮಾತನಾಡಿ, ಆರೋಗ್ಯ ಅಧಿಕಾರಿಗಳ ಸಲಹೆಯಂತೆ ಪ್ರತಿ ಮನೆ ಮನೆಗೆ ಮತ್ತು ಪ್ರತಿ ಕಾಲೊನಿಗಳಿಗೂ ಭೇಟಿ ನೀಡಿ ಸೊಳ್ಳೆಗಳ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗೋಣ ಎಂದರು.ಮನೆಯ ಸುತ್ತಮುತ್ತಲಿನ ಗುಂಡಿಗಳು, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಆದ್ದರಿಂದ ಮನೆಯ ಒಳಾಂಗಣದ ನೀರಿನ ತಾಣಗಳಾದ ಡ್ರಮ್, ನೀರಿನ ತೊಟ್ಟಿಗಳು, ಬ್ಯಾರಲ್ಗಳನ್ನು ವಾರಕ್ಕೆ ಮೂರು ಬಾರಿ ಸ್ವಚ್ಛವಾಗಿ ತೊಳೆದು ಒಣಗಿಸಿ ನೀರು ಶೇಖರಿಸಿಕೊಳ್ಳಬೇಕು. ಹೊರಾಂಗಣ ನೀರಿನ ತಾಣಗಳಾದ ಹೂಕುಂಡಗಳು, ಒಡೆದ ಬಾಟಲ್ ಗಳು, ಎಳೆ ನೀರಿನ ಬುರುಡೆಗಳು, ಎಸೆದ ಪಾಸ್ಟಿಕ್ಗಳು, ಟೈರಗಳು, ಮಡಿಕೆಗಳು ಮುಂತಾದವುಗಳಲ್ಲಿ ನೀರು ನಿಲ್ಲದಂತೆ ಸೂಕ್ತ ರೀತಿಯಲ್ಲಿ ಕಾಲ ಕಾಲಕ್ಕೆ ವಿಲೇವಾರಿ ಮಾಡಬೇಕು. ಇದರಿಂದ ಸೊಳ್ಳೆಗಳ ಉತ್ಪಾದನೆ ತಡೆಯಬಹುದು ಎಂದರು.
- ವೆಂಕಟೇಶ ತೆಲಂಗ, ಪಟ್ಟಣ ಪಂಚಾಯ್ತಿ ಅಧಿಕಾರಿ, ಹುಣಸಗಿ.