ಕುಡಿವ ನೀರು ಕಲುಷಿತವಾಗದಂತೆ ಮುಂಜಾಗ್ರತೆ ವಹಿಸಿ: ಡಿಸಿ

KannadaprabhaNewsNetwork |  
Published : Jun 22, 2024, 12:51 AM IST
ಚಿತ್ರ 3 | Kannada Prabha

ಸಾರಾಂಶ

ಹಿರಿಯೂರು ಪಟ್ಟಣದಲ್ಲಿ ಕುಡಿಯುವ ನೀರು ಕಲುಷಿತವಾಗದಂತೆ ಮುಂಜಾಗರೂಕತೆ ವಹಿಸಬೇಕು, ಪ್ರತಿನಿತ್ಯ ನೀರಿನ ಪರೀಕ್ಷೆ ನಡೆಸಬೇಕು ಎಂದು ಸಿಬ್ಬಂದಿಗೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಕಟ್ಟುನಿಟ್ಟಿನ ಮೌಖಿಕ ಆದೇಶ ನೀಡಿದ್ದಾರೆ.

ಹಿರಿಯೂರು ನಗರಸಭೆಗೆ ಭೇಟಿ ನೀಡಿದ್ದ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ

ಕನ್ನಡಪ್ರಭ ವಾರ್ತೆ ಹಿರಿಯೂರು

ಹಿರಿಯೂರು ಪಟ್ಟಣದಲ್ಲಿ ಕುಡಿಯುವ ನೀರು ಕಲುಷಿತವಾಗದಂತೆ ಮುಂಜಾಗರೂಕತೆ ವಹಿಸಬೇಕು, ಪ್ರತಿನಿತ್ಯ ನೀರಿನ ಪರೀಕ್ಷೆ ನಡೆಸಬೇಕು ಎಂದು ಸಿಬ್ಬಂದಿಗೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಕಟ್ಟುನಿಟ್ಟಿನ ಮೌಖಿಕ ಆದೇಶ ನೀಡಿದ್ದಾರೆ.

ನಗರಸಭೆಗೆ ಶುಕ್ರವಾರ ಭೇಟಿ ನೀಡಿ ಅಧಿಕಾರಿಗಳು ಹಾಗೂ ಕಚೇರಿ ಸಿಬ್ಬಂದಿಯೊಂದಿಗೆ ವಿವಿಧ ಕಾಮಗಾರಿ ಹಾಗೂ ಮೂಲ ಸೌಕರ್ಯ ಬಗ್ಗೆ ವಿವರವಾಗಿ ಚರ್ಚಿಸಿದ ಅವರು, ನಗರದಲ್ಲಿ ಸ್ವಚ್ಛತೆ ಕಾಪಾಡುವುದು, ನೀರಿನ ವ್ಯವಸ್ಥೆ, ಬೀದಿ ದೀಪಗಳ ನಿರ್ವಹಣೆ, ಕಸ ವಿಲೇವಾರಿ ಮಾಡುವುದು ಸೇರಿ ಮೂಲಭೂತ ಸೌಕರ್ಯ ಬಗ್ಗೆ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ಸಾರ್ವಜನಿಕರಿಂದ ಯಾವುದೇ ದೂರು ಬರದಂತೆ ಕೆಲಸ ಮಾಡಬೇಕು ಎಂದು ತಿಳಿಸಿದರು.

ರಸ್ತೆಯಲ್ಲಿ ಯಾರಾದರೂ ಕಸ ಎಸೆಯುವುದು ಕಂಡುಬಂದಲ್ಲಿ ಅಂತಹ ಅಂಗಡಿ ಮಾಲೀಕರು, ವರ್ತಕರಿಗೆ ದಂಡ ವಿಧಿಸಬೇಕು. ಪ್ಲಾಸ್ಟಿಕ್ ಮಾರಾಟ ಮಾಡುವುದು ಕಂಡುಬoದಲ್ಲಿ ದಾಳಿ ನಡೆಸಿ ದಂಡ ವಿಧಿಸಬೇಕು. ಕಂದಾಯ ವಸೂಲಾತಿ ಹೆಚ್ಚಾಗಬೇಕು ಎಂದು ಅವರು ಸೂಚಿಸಿದರು.

ಪೌರಾಯುಕ್ತ ಎಚ್ ಮಹoತೇಶ್, ಎಇಇ ರಾಜು, ಗೋವಿಂದರಾಜು, ಜಬೀವುಲ್ಲಾ, ಭೀಮರಾಜ್, ಆರೋಗ್ಯ ನೀರಿಕ್ಷಕರಾದ ಮೀನಾಕ್ಷಿ, ಮಹಲಿಂಗಪ್ಪ, ಅಶೋಕ ಮುಂತಾದವರು ಹಾಜರಿದ್ದರು.-------------

ಹಿರಿಯೂರು ನಗರಸಭೆಗೆ ಶುಕ್ರವಾರ ಜಿಲ್ಲಾಧಿಕಾರಿ ವೆಂಕಟೇಶ್ ಅವರು ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!