ಕನ್ನಡಪ್ರಭ ವಾರ್ತೆ ಮಾಲೂರು
ಪಟ್ಟಣದ ೨೧ನೇ ವಾರ್ಡಿನ ಎಡಿ ಕಾಲೋನಿಯಲ್ಲಿ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪುರಸಭೆ ವತಿಯಿಂದ ಡೆಂಘೀ ಜ್ವರ, ಚಿಕುನ್ ಗುನ್ಯಾ ರೋಗಗಳನ್ನು ತಡೆಗಟ್ಟಲು ನಾಗರಿಕರಿಗೆ ಜಾಗೃತಿ ಮೂಡಿಸುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
]ನಾಗರಿಕರು ಪಾಲ್ಗೊಳ್ಳಬೇಕು೨೦೨೪ನೇ ಸಾಲಿನ ಮೇ ೧೬ ಹಾಗೂ ಜುಲೈ ತಿಂಗಳಲ್ಲಿ ಆಚರಿಸಲ್ಪಡುವ ಡೆಂಘೀ ವಿರೋಧ ಮಾಸಾಚರಣೆ ಧ್ಯೇಯ ವಾಕ್ಯ ‘ಸಮುದಾಯದೊಂದಿಗೆ ಸೇರಿ ಡೆಂಘೀ ಜ್ವರವನ್ನು ನಿಯಂತ್ರಿಸೋಣ’ ಎಂಬುದಾಗಿದ್ದು, ಈ ಹಿನ್ನೆಲೆಯಲ್ಲಿ ಡೆಂಘೀ ಜ್ವರ ನಿಯಂತ್ರಣ ಕ್ರಮಗಳ ಅನುಷ್ಠಾನದಲ್ಲಿ ನಾಗರಿಕರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.
ನಾಗರಿಕರು ತಮ್ಮ ತಮ್ಮ ಮನೆಗಳಲ್ಲಿ ಡ್ರಮ್, ತೆಂಗಿನ ಚಿಪ್ಪು, ಸಿಮೆಂಟ್ ತೊಟ್ಟಿ ಇನ್ನಿತರೆ ಕಡೆ ನೀರು ಸಂಗ್ರಹವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ತಾಲೂಕಿನಲ್ಲಿ ಇದುವರೆಗೂ ೫ ಡೆಂಘೀ ಪ್ರಕರಣಗಳು, ೫ ಚಿಕೂನ್ ಗುನ್ಯಾ ಪ್ರಕರಣಗಳು ಕಂಡು ಬಂದಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಿ ಮೂರು ದಿನಗಳಿಗೊಮ್ಮೆ ನೀರಿನ ಪರಿಕರಗಳನ್ನು ಶುದ್ಧಗೊಳಿಸಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು.ಪುರಸಭಾ ಸದಸ್ಯ ಎ ರಾಜಪ್ಪ, ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ಶಿಕ್ಷಣಾಧಿಕಾರಿ ಸರಸ್ವತಮ್ಮ, ತಾ.ಹಿರಿಯ ಆರೋಗ್ಯ ನಿರೀಕ್ಷಕ ಬಾನು ಸಾಗರ ವರ್ಮ, ಪಿಎಚ್ಸಿಒ ವನಜಾಕ್ಷಿ, ಆಶಾ ಕಾರ್ಯಕರ್ತೆಯರಾದ ಸುಮಿತ್ರ, ಸುಮಾ, ವರಲಕ್ಷ್ಮೀ, ಜ್ಯೋತಿ, ಹಾಜರಿದ್ದರು.
ಶ