ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸಿ: ಬಿ.ಮಂಗಳ ಸಲಹೆ

KannadaprabhaNewsNetwork |  
Published : Feb 06, 2026, 02:00 AM IST
5ಕೆಎಂಎನ್ ಡಿ29 | Kannada Prabha

ಸಾರಾಂಶ

ಮಂಡ್ಯ ತಾಲೂಕಿನ ಆಯ್ದ ಹಳ್ಳಿಗಳಲ್ಲಿ ಆರೋಗ್ಯದ ಬಗ್ಗೆ ಜನರಲ್ಲಿ ತಿಳಿವಳಿಕೆ ಮೂಡಿಸಲು ಬೀದಿನಾಟಕ ಕಾರ್ಯಕ್ರಮ ಆಯೋಜಿಸಲಾಗಿದೆ. ಭಾಷಣ ಮಾಡುವುದಕ್ಕಿಂತ ನಾಟಕ ರೂಪದಲ್ಲಿ ತಿಳಿವಳಿಕೆ ಹೇಳಿದರೆ ಪರಿಣಾಮಕಾರಿಯಾಗಿ ಅರ್ಥವಾಗುತ್ತದೆ.

ಮಂಡ್ಯ:

ಕಾಯಿಲೆ ಬಂದ ನಂತರ ಆತಂಕ ಪಡುವ ಬದಲು ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸುವುದು ಎಂದು ಮುಖ್ಯ ತಾಲೂಕು ಆರೋಗ್ಯ ಶಿಕ್ಷಣಾಕಾರಿ ಬಿ.ಮಂಗಳ ಸಲಹೆ ನೀಡಿದರು.

ನಗರದ ಮಿಮ್ಸ್ ಆವರಣದಲ್ಲಿ ಸೌಹಾರ್ಧ ಸಾಂಸ್ಕೃತಿಕ ಕಲಾ ತಂಡದಿಂದ ರಾಷ್ಟ್ರೀಯ ಆರೋಗ್ಯ ಅಭಯಾನದಡಿ ನಡೆದ ಆರೋಗ್ಯ ಅರಿವು ಬೀದಿ ನಾಟಕ ಪ್ರದರ್ಶನ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು.

ಪ್ರಾಥಮಿಕ ಆರೋಗ್ಯ ಶಿಕ್ಷಣಾಕಾರಿ ಎಂ.ಶೋಭಾ ಮಾತನಾಡಿ, ತಾಲೂಕಿನ ಆಯ್ದ ಹಳ್ಳಿಗಳಲ್ಲಿ ಆರೋಗ್ಯದ ಬಗ್ಗೆ ಜನರಲ್ಲಿ ತಿಳಿವಳಿಕೆ ಮೂಡಿಸಲು ಬೀದಿನಾಟಕ ಕಾರ್ಯಕ್ರಮ ಆಯೋಜಿಸಲಾಗಿದೆ. ಭಾಷಣ ಮಾಡುವುದಕ್ಕಿಂತ ನಾಟಕ ರೂಪದಲ್ಲಿ ತಿಳಿವಳಿಕೆ ಹೇಳಿದರೆ ಪರಿಣಾಮಕಾರಿಯಾಗಿ ಅರ್ಥವಾಗುತ್ತದೆ ಎಂದರು.

ಕಲಾ ತಂಡದ ಕಲಾವಿದರು ಕ್ಷಯ, ಕುಷ್ಠರೋಗ, ತಾಯಿ ಮಗುವಿನ ಆರೋಗ್ಯ, ಆಯುಸ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಮಹತ್ವ ಕುರಿತು ಬೀದಿ ನಾಟಕ ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಇಂಟರ್ ನ್ಯಾಷನಲ್ ಅಲಯನ್ಸ್ ಒಂದನೇ ರಾಜ್ಯಪಾಲ ಕೆ.ಎಸ್.ಚಂದ್ರಶೇಖರ್, ಪರಿಸರ ಅಲಯನ್ಸ್ ಅಧ್ಯಕ್ಷ ಸಂತೆಕಸಲಗೆರೆ ಬಸವರಾಜು, ಆರೋಗ್ಯ ಇಲಾಖೆ ಶಿವಲಿಂಗು, ರಾಮಚಂದ್ರು, ಕಲಾತಂಡದ ಮುಖ್ಯಸ್ಥ ಹನಿಯಂಬಾಡಿ ಶೇಖರ್, ಕಲಾವಿದರಾದ ವೈರಮುಡಿ, ದೇವರಾಜ್ ಕೊಪ್ಪ, ಯರಹಳ್ಳಿ ಹೊನ್ನೇಶ್, ರಾಮಕೃಷ್ಣ, ಅನುಸೂಯ ಭಾಗವಹಿಸಿದ್ದರು.

ಇಂದು ಹಿರಿಯ ವಕೀಲ ಬಸವಯ್ಯರಿಗೆ ಗುರುವಂದನೆ

ಮಂಡ್ಯ: ನಗರದ ಪಿಇಎಸ್ ಎಂಜಿನಿಯರಿಂಗ್ ಕಾಲೇಜಿನ ಪ್ಲೇಸ್‌ಮೆಂಟ್ ಸಭಾಂಗಣದಲ್ಲಿ ಫೆ.6ರಂದು ವಕೀಲರ ಸಂಘ, ಪಿಇಎಸ್ ಕಾನೂನು ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದಿಂದ ವಕೀಲ ವೃತ್ತಿಯಲ್ಲಿ 50 ವಸಂತಗಳನ್ನು ಪೂರೈಸಿರುವ ಹಿರಿಯ ವಕೀಲ ಬಸವಯ್ಯ ಅವರಿಗೆ ಗುರುವಂದನೆ ಹಾಗೂ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಸ್.ಪಿ.ಸಂದೇಶ್ ಸಮಾರಂಭ ಉದ್ಘಾಟಿಸಲಿದ್ದು, ನಿವೃತ್ತ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಅವರು ವಕೀಲ ಬಸವಯ್ಯ ಅವರನ್ನು ಸನ್ಮಾನಿಸುವರು.

ನಿವೃತ್ತ ನ್ಯಾಯಮೂರ್ತಿ ಹಾಗೂ ರಾಜ್ಯ ಗ್ರಾಹಕರ ವ್ಯಾಜ್ಯ ನಿವಾರಣಾ ಆಯೋಗದ ಅಧ್ಯಕ್ಷ ಟಿ.ಜಿ.ಶಿವಶಂಕರೇಗೌಡ, ಅಪರ ಜಿಲ್ಲಾ ನ್ಯಾಯಾಧೀಶ ಕೆ.ಬಿ.ಶಿವಪ್ರಸಾದ್, ಜಿಲ್ಲಾಧಿಕಾರಿ ಡಾ.ಕುಮಾರ, ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯ್ ಆನಂದ್ ಅತಿಥಿಗಳಾಗಿ ಭಾಗವಹಿಸುವರು. ವಕೀಲರ ಸಂಘದ ಅಧ್ಯಕ್ಷ ಟಿ.ಎಸ್.ಸತ್ಯಾನಂದ ಅಧ್ಯಕ್ಷತೆ ವಹಿಸುವರು ಎಂದು ವಕೀಲರ ಸಂಘದ ಕಾರ್ಯದರ್ಶಿ ಬಿ. ಸತೀಶ್ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ-30,000 ಕೋಟಿ ರು. ವಿತರಣೆಯ ಗುರಿ
ಏಪ್ರಿಲ್‌ನಿಂದ ಆಲ್ಕೋಹಾಲ್‌ ಪ್ರಮಾಣಕ್ಕೆ ತಕ್ಕಂತೆ ಮದ್ಯ ಸುಂಕ