ಅಗ್ನಿ ದುರಂತ ತಡೆಯಲು ಮುನ್ನೆಚ್ಚರಿಕೆ ವಹಿಸಿ

KannadaprabhaNewsNetwork |  
Published : Sep 30, 2024, 01:27 AM IST
ವಿಸ್ಡಮ್ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ತಾಲೂಕಿನ ಅಗ್ನಿಶಾಮಕ ದಳದದಿಂದ ಅಗ್ನಿ ದುರಂತ ತಡೆಯುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಹಮ್ಮಿಕೊಂಡಿದ್ದ ಅಣಕು ಪ್ರದರ್ಶನ | Kannada Prabha

ಸಾರಾಂಶ

ಅಗ್ನಿ ಅವಘಡಗಳಿಂದ ರಾಷ್ಟ್ರದ ಸಂಪತ್ತು ನಷ್ಠ ಆಗುತ್ತಿದ್ದು, ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಅಗ್ನಿಶಾಮಕ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರು ಪಾಲಿಸಬೇಕು. ಮುನ್ನೆಚ್ಚರಿಕೆ ಕ್ರಮ ಪಾಲಿಸುವುದರಿಂದ ಅಗ್ನಿ ಅನಾಹುತಗಳನ್ನು ತಪ್ಪಿಸಬಹುದು. ಇದರಿಂದ ಆಗುವ ಪ್ರಾಣ, ಆಸ್ತಿ ರಕ್ಷಿಸಬಹುದು

ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ

ಆಗ್ನಿ ಅವಘಡಗಳು ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಈ ಬಗ್ಗೆ ವಿದ್ಯಾರ್ಥಿಗಳು ಪೋಷಕರಲ್ಲಿ ಅರಿವು ಮೂಡಿಸಬೇಕೆಂದು ತಾಲೂಕು ಅಗ್ನಿಶಾಮಕ ಠಾಣಾಧಿಕಾರಿ ಸಿ.ಕದಿರಪ್ಪ ತಿಳಿಸಿದರು.

ನಗರದ ವಿಸ್ಡಮ್ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ತಾಲೂಕಿನ ಅಗ್ನಿಶಾಮಕ ದಳದದಿಂದ ಅಗ್ನಿ ದುರಂತ ತಡೆಯುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಹಮ್ಮಿಕೊಂಡಿದ್ದ ಅಣಕು ಪ್ರದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾರ್ಗಸೂಚಿ ಪಾಲನೆ ಮಾಡಿ

ಅಗ್ನಿ ಅವಘಡಗಳಿಂದ ರಾಷ್ಟ್ರದ ಸಂಪತ್ತು ನಷ್ಠ ಆಗುತ್ತಿದ್ದು, ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಅಗ್ನಿಶಾಮಕ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರು ಪಾಲಿಸಬೇಕು. ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವುದರಿಂದ ಅಗ್ನಿ ಅನಾಹುತಗಳನ್ನು ತಪ್ಪಿಸಬಹುದು. ಇದರಿಂದ ಆಗುವ ಪ್ರಾಣ ಹಾನಿ ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ರಕ್ಷಿಸಬಹುದು ಎಂದರು.

ಎಲ್ಲಿಯೇ ಆಗಲಿ ಅಗ್ನಿ ದುರಂತಗಳು ಸಂಭವಿಸಿದಾಗ ಅಥವಾ ಯಾವುದೇ ತುರ್ತು ಸಂದರ್ಭದಲ್ಲಿ ನಾಗರೀಕರು ಸಂಕಷ್ಟದಲ್ಲಿ ಇದ್ದಾಗ ತಕ್ಷಣ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ಅಗ್ನಿಶಾಮಕ ಠಾಣೆಗೆ ಮಾಹಿತಿ ಕೊಡಬಹುದೆಂದರು.

ಬೆಂಕಿ ನಂದಿಸುವ ವಿಧಾನ ಮಾಹಿತಿ

ಈ ಸಂದರ್ಭದಲ್ಲಿ ಅಗ್ನಿ ಶಾಮಕ ಠಾಣೆ ಸಿಬ್ಬಂದಿಯಿಂದ ಬೆಂಕಿ ನಂದಿಸುವ ವಿಧಾನಗಳ ಬಗ್ಗೆ ಮಾಹಿತಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳಾದ ಮುನಿ ಕೃಷ್ಣ ಎಂ, ರಕ್ಷಿತ್, ಹರೀಶ್ ಕೆವಿ, ಸಿದ್ದಪ್ಪ ಜರಳಿ, ಅಶೋಕ್ ಜಿ , ಹಾಗೂ ಶಾಲೆಯ ಮಕ್ಕಳು ಮತ್ತು ಶಿಕ್ಷಕರು ಹಾಗೂ ಪೋಷಕರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ