ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ನಗರಾಭಿವೃದ್ಧಿ ಪ್ರಾಧಿಕಾರ, ಯೋಜನಾ ಪ್ರಾಧಿಕಾರ, ಪುರಸಭಾ ಯೋಜನಾ ಪ್ರಾಧಿಕಾರಗಳ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆಯಡಿ ಕೆರೆಗಳ ಪುನರುಜ್ಜೀವನ ಶುಲ್ಕ ವಿನಿಯೋಗ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆರೆಗಳ ಪುನರುಜ್ಜೀವನ ಕಾಮಗಾರಿಗಳನ್ನು ತ್ವರಿತವಾಗಿ ಹಾಗೂ ಸುಗಮವಾಗಿ ಕೈಗೆತ್ತಿಕೊಳ್ಳಲು ಜಿಲ್ಲಾ ಮಟ್ಟದಲ್ಲಿ ಏಕ ಗವಾಕ್ಷಿ ಸಮಿತಿ ರಚಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಒಟ್ಟು 268 ಕೆರೆಗಳು ಇದ್ದು, ಅದರಲ್ಲಿ 148 ಕೆರೆಗಳು ಗ್ರಾಮೀಣ ವ್ಯಾಪ್ತಿಯಲ್ಲಿ 68 ಕೆರೆಗಳು ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿ ಹಾಗೂ 9 ಕೆರೆಗಳು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುತ್ತವೆ. ಮುಖ್ಯವಾಗಿ ಮುಚಖಂಡಿ ಹಾಗೂ ಮಲ್ಲಾಪುರ ಅಭಿವೃದ್ಧಿ ಪಡಿಸಿದಲ್ಲಿ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಬರುವ ಜುಲೈ 27 ರಂದು ಸ್ವತಃ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು.ತಡ ಬೇಲಿ ನಿರ್ಮಾಣ, ಕೆರೆ ಹೂಳು ತೆಗೆಯುವುದು ಮತ್ತು ಕೆರೆಯ ನೀರಿನ ಸಂಗ್ರಹಣೆ ಹೆಚ್ಚಿಸುವ ನಿಟ್ಟಿನಲ್ಲಿ ಅಂತರ್ಜಲ ಮರು ಪೂರ್ಣಗೊಳಿಸುವುದು, ಕೆರೆ ಒತ್ತುವರಿ ತಡೆಯಲು ಅಗತ್ಯ ಗಿಡ ಮರಗಳನ್ನು ಕೆರೆಯ ದಂಡಿಗಳಲ್ಲಿ ಬೆಳೆಸುವುದು, ಕೆರೆ ನೀರಿನ ಶುದ್ಧೀಕರಣ, ನೀರಿನ ಗುಣಮಟ್ಟ ಸುಧಾರಿಸುವ, ಕೊಳಚೆ ನೀರು ಕೆರೆಗೆ ಸೇರದಂತೆ ತಡೆಯುವ ಕಾಮಗಾರಿ, ವಾಯು ವಿಹಾರಕ್ಕೆ ಅಗತ್ಯವಿರುವ ಪದಚಾರಿ ಮಾರ್ಗ, ಪ್ರವಾಸೋದ್ಯಮ ಉತ್ತೇಜಿಸುವ ಕಾಮಗಾರಿಗಳು ಸೇರಿದಂತೆ ಇತರೆ ಕಾಮಗಾರಿ ಕೈಗೊಳ್ಳಲು ವಿವಿಧ ಸ್ಥಳೀಯ ಸಂಸ್ಥೆ, ಪ್ರಾಧಿಕಾರಗಳಿಗೆ ತಿಳಿಸಿದರು.
ಕೆರೆ ಸಂರಕ್ಷಣೆ ಹಾಗೂ ಪುನರುಜ್ಜೀವನ ಕಾಮಗಾರಿಗಳನ್ನು ಕೆಟಿಪಿಪಿ ಕಾಯ್ದೆ ಹಾಗೂ ಇತರೆ ನಿಯಮಗಳ ಅನುಸಾರ ಎಲ್ಲ ಪ್ರಕ್ರಿಯೆ ಕಡ್ಡಾಯವಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು. ಕೆರೆಯ ಪುನರುಜ್ಜೀವನ ಶುಲ್ಕದ ಹಣ ಸದುಪಯೋಗವಾಗಬೇಕು. ಯಾವುದೇ ಕಾರಣಕ್ಕೂ ದುರ್ಬಳಕೆಯಾಗದಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
-ಸಂಗಪ್ಪ ಜಿಲ್ಲಾಧಿಕಾರಿ ಬಾಗಲಕೋಟೆ