ಕುಡಿವ ನೀರಿಗೆ ತೊಂದರೆಯಾಗದಂತೆ ಕ್ರಮವಹಿಸಿ

KannadaprabhaNewsNetwork |  
Published : Apr 29, 2026, 01:30 AM IST
28 ಟಿವಿಕೆ 1 – ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳ ಸಭೆ ನಡೆಸಿದರು. | Kannada Prabha

ಸಾರಾಂಶ

ತಾಲೂಕಿನ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಅಭಾವ ತಲೆದೋರಿದೆ. ಆ ಗ್ರಾಮಗಳ ಪಟ್ಟಿ ತಯಾರಿಸಿ ಜನರು, ಜಾನುವಾರುಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಶಾಸಕ ಎಂ.ಟಿ.ಕೃಷ್ಣಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭವಾರ್ತೆ ತುರುವೇಕೆರೆ

ತಾಲೂಕಿನ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಅಭಾವ ತಲೆದೋರಿದೆ. ಆ ಗ್ರಾಮಗಳ ಪಟ್ಟಿ ತಯಾರಿಸಿ ಜನರು, ಜಾನುವಾರುಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಶಾಸಕ ಎಂ.ಟಿ.ಕೃಷ್ಣಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕುಡಿಯುವ ನೀರಿನ ಕುರಿತ ಸಭೆಯಲ್ಲಿ ತಾಲೂಕಿನ ಎಲ್ಲಾ ಪಿಡಿಒಗಳೊಂದಿಗೆ ಮಾತನಾಡಿದ ಅವರು ಬೇರೆ ತಾಲೂಕುಗಳಿಗೆ ಹೋಲಿಸಿದರೆ ನಮ್ಮ ತಾಲೂಕು ಸುಭಿಕ್ಷವಾಗಿದೆ. ಬೆರಳೆಣಿಕೆಯಷ್ಟು ಗ್ರಾಮಗಳಲ್ಲಿ ಮಾತ್ರ ನೀರಿಗೆ ತೊಂದರೆಯಾಗಿದೆ. ಕೂಡಲೇ ಹೊಸದಾಗಿ ಬೋರ್ ವೆಲ್ ಗಳನ್ನು ಕೊರೆಸುವ ಮೂಲಕ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕೆಂದು ಶಾಸಕರು ಸೂಚಿಸಿದರು.

ಪಟ್ಟಣದಲ್ಲಿ ಐದು ದಿನಗಳಿಗೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ. ಇದಕ್ಕೆ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯವೇ ಕಾರಣ. ಮಲ್ಲಾಘಟ್ಟ ಕೆರೆಯಲ್ಲಿ ಸಾಕಷ್ಟು ನೀರಿದ್ದರೂ ಸಹ ಪಟ್ಟಣಕ್ಕೆ ಸರಿಯಾಗಿ ನೀರು ಸರಬರಾಗುತ್ತಿಲ್ಲ ಎಂಬ ದೂರಿದೆ. ಪಟ್ಟಣದಿಂದ ಮಲ್ಲಾಘಟ್ಟದ ನೀರಿನ ಘಟಕಕ್ಕೆ ನಿರಂತರ ವಿದ್ಯುತ್ ಸರಬರಾಜು ಮಾಡಬೇಕೆಂಬ ಸೂಚನೆ ಇದ್ದರೂ ಸಹ ಪದೇ ಪದೇ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಮಾಡಲಾಗುತ್ತಿದೆ. ಕೂಡಲೇ ವಿದ್ಯುತ್ ಸಂಪರ್ಕಕ್ಕೆ ಅಡೆತಡೆಯಿರುವ ಸಮಸ್ಯೆಯನ್ನು ಬಗೆಹರಿಸಬೇಕೆಂದು ಬೆಸ್ಕಾಂ ಎಇಇ ಗೆ ಶಾಸಕ ಎಂ.ಟಿ.ಕೃಷ್ಣಪ್ಪನವರು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ತಹಸೀಲ್ದಾರ್ ಕುಂಇ ಅಹಮದ್, ಇಓ ಅನಂತರಾಜು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ರಾಮೀಣ ಸಮಸ್ಯೆ ಅರಿತು ಪರಿಹರಿಸಲು ಪ್ರಯತ್ನಿಸಿ: ದರ್ಶನ್ ಪುಟ್ಟಣ್ಣಯ್ಯ
ಸಾರಿಗೆ ಬಸ್‌ಗಳ ಕೆಲ ನಿರ್ವಾಹಕರಿಂದ ಶಕ್ತಿ ಯೋಜನೆ ದುರ್ಬಳಕೆ: ಮೂಡ್ಲೀಗೌಡ