ಕಾವೇರಿ ನದಿಗೆ ತ್ಯಾಜ್ಯ ನೀರು ಸೇರ್ಪಡೆಯಾಗದಂತೆ ಕ್ರಮವಹಿಸಿ: ಡಾ.ಕುಮಾರ

KannadaprabhaNewsNetwork |  
Published : Jun 16, 2026, 01:45 AM IST
15ಕೆಎಂಎನ್ ಡಿ23 | Kannada Prabha

ಸಾರಾಂಶ

ಕುಡಿಯುವ ನೀರು ಕಲುಷಿತವಾಗದಂತೆ ಕ್ರಮವಹಿಸಬೇಕು ಹಾಗೂ ನೀರಿನ ಗುಣಮಟ್ಟವನ್ನು ಪರಿಶೀಲನೆ ಮಾಡಬೇಕು. ಮಳೆಗಾಲದಲ್ಲಿ ಹಳ್ಳಕೊಳ್ಳಗಳ ಮೂಲಕ ತ್ಯಾಜ್ಯ ನೀರು ಕಾವೇರಿ ನದಿಗೆ ವಿಲೀನವಾಗದಂತೆ ಅಗತ್ಯ ಕ್ರಮವಹಿಸಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಮೈಸೂರು ನಗರ ಪಾಲಿಕೆ ವ್ಯಾಪ್ತಿಯ ಕೈಗಾರಿಕೆಗಳು ಹಾಗೂ ಮೂಡ ವ್ಯಾಪ್ತಿಯ ಒಳಚರಂಡಿ ತ್ಯಾಜ್ಯ ನೀರು ಕಾವೇರಿ ನದಿಗೆ ವಿಲೀನವಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಮೈಸೂರು ನಗರ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುತ್ತಿರುವ ತ್ಯಾಜ್ಯ ನೀರು ಕಾವೇರಿ ನದಿ ಮತ್ತು ಕಾಲುವೆಗೆ ನೇರವಾಗಿ ಬಿಡುತ್ತಿರುವುದನ್ನು ಸ್ಥಗಿತಗೊಳಿಸುವ ಸಂಬಂಧ ಶ್ರೀರಂಗಪಟ್ಟಣ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಹಾಗೂ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಮಾತನಾಡಿದರು.

ಮೈಸೂರು ನಗರದ ಕಾರ್ಖಾನೆಗಳಿಂದ ಬರುವ ತ್ಯಾಜ್ಯ ನೀರು ಹಳ್ಳದ ಮೂಲಕ ಕಳಸ್ತವಾಡಿ ಗ್ರಾಮದ ವಿರಿಜಾ ನಾಲೆ ಮತ್ತು ಕೆಸರೆ ಗ್ರಾಮದ ದೇವರಾಯ ನಾಲೆಗೆ ಕಲುಷಿತ ನೀರು ನೇರವಾಗಿ ನಾಲೆಗಳಿಗೆ ಹರಿದು ಬರುತ್ತಿದೆ. ಇದರಿಂದ ಕುಡಿಯುವ ನೀರು ಕಲುಷಿತವಾಗುತ್ತಿದೆ ಎಂದು ಎಂದರು.

ಕಲುಷಿತ ನಾಲೆಗಳ ಮೂಲಕ ಶ್ರೀರಂಗಪಟ್ಟಣ ವ್ಯಾಪ್ತಿಯ ಗಂಜಾಂ ಕುಡಿಯುವ ನೀರು ಸರಬರಾಜು ಮಾಡುವ INTAKE WELL ಬಳಿಯ ಕಾವೇರಿ ನದಿಗೆ ಸೇರಿ ಕಾವೇರಿ ನದಿಯ ಕುಡಿಯುವ ನೀರು ವಿಲೀನವಾಗುತ್ತಿದೆ. ಆದ್ದರಿಂದ ತ್ಯಾಜ್ಯ ನೀರು ಕಾವೇರಿ ನದಿಗೆ ಹಾಗೂ ನಾಲೆಗಳಿಗೆ ಹರಿದು ಕಲುಷಿತವಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.

ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಮಾತನಾಡಿ, ಕುಡಿಯುವ ನೀರು ಕಲುಷಿತವಾಗದಂತೆ ಕ್ರಮವಹಿಸಬೇಕು ಹಾಗೂ ನೀರಿನ ಗುಣಮಟ್ಟವನ್ನು ಪರಿಶೀಲನೆ ಮಾಡಬೇಕು. ಮಳೆಗಾಲದಲ್ಲಿ ಹಳ್ಳಕೊಳ್ಳಗಳ ಮೂಲಕ ತ್ಯಾಜ್ಯ ನೀರು ಕಾವೇರಿ ನದಿಗೆ ವಿಲೀನವಾಗದಂತೆ ಅಗತ್ಯ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಶ್ರೀರಂಗಪಟ್ಟಣ ತಹಸೀಲ್ದಾರ್ಚೇ ತನಾ ಯಾದವ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಟಿ.ಎನ್.ನರಸಿಂಹಮೂರ್ತಿ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ರಾಘವೇಂದ್ರ, ಅಗ್ನಿ ಶಾಮಕದಳದ ಅಧಿಕಾರಿ ರಾಘವೇಂದ್ರ, ಜಲಸಂಪನ್ಮೂಲ ಇಲಾಖೆ ಅಭಿಯಂತರ ಮೇಘನಾ, ಪರಿಸರ ಇಲಾಖೆ ಅಧಿಕಾರಿ ಕೆಂಪೇಗೌಡ ಹಲವರು ಇದ್ದರು.

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆಗೆ ಶೀಘ್ರ ಕ್ರಮವಹಿಸಿ ಡೀಸಿ ಸೂಚನೆ

ಮಂಡ್ಯ: ಸರ್ಕಾರದ ಆದೇಶದಂತೆ ಶಾಲಾ-ಕಾಲೇಜಿನ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ವಾಸಸ್ಥಳದಿಂದ ವಿದ್ಯಾಸಂಸ್ಥೆಗೆ ಉಚಿತವಾಗಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ವಿದ್ಯಾಭ್ಯಾಸ ಮಾಡಲು ಪ್ರಯಾಣಿಸುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಬಸ್ ಪಾಸ್ ನೀಡಲು ಆದೇಶಿಸಲಾಗಿದೆ.

ಇದರಂತೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳು ಸರ್ಕಾರದ ಯೋಜನೆಯ ಸದುಪಯೋಗವನ್ನು ಪಡೆಯಲು ವಿನಂತಿಸಲಾಗಿದೆ. ಶಾಲಾ-ಕಾಲೇಜಿನ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಅನ್ನು ಪಡೆಯಲು ಕರ್ನಾಟಕ ಸರ್ಕಾರದ ಸೇವಾ ಸಿಂಧು ಪೋರ್ಟಲ್ ಆದ URL-sevasindhu.karnataka.gov.in ನಲ್ಲಿ ಅರ್ಜಿ ಸಲ್ಲಿಸುವುದು.

ರಾಜ್ಯದಲ್ಲಿ ವಾಸವಿದ್ದು ನೆರೆ ರಾಜ್ಯ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ನೆರೆರಾಜ್ಯಗಳಲ್ಲಿ (ರಾಜ್ಯದ ಗಡಿಭಾಗದಲ್ಲಿ) ವಾಸವಿದ್ದು, ರಾಜ್ಯದೊಳಗಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ವಿತರಿಸಲಾಗುತ್ತದೆ.

ಈಗಾಗಲೇ ಶುಲ್ಕ ಪಡೆದು ವಿತರಿಸಲಾದ ಪಾಸುಗಳ ಸಂಪೂರ್ಣ ಶುಲ್ಕವನ್ನು 15 ದಿನಗಳೊಳಗಾಗಿ ವಿದ್ಯಾರ್ಥಿಗಳಿಗೆ ಮರು ಪಾವತಿಸಲಾಗುವುದು. ಸರ್ಕಾರದ ಆದೇಶವನ್ನು ತುರ್ತಾಗಿ, ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಜಿಲ್ಲೆಯ ಎಲ್ಲಾ ಸಂಬಂಧಿತ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಕೆ.ಎಸ್.ಆರ್.ಟಿ.ಸಿ ಸಂಸ್ಥೆಯ ಅಧಿಕಾರಿಗಳು, ಉಪ ನಿರ್ದೇಶಕರು(ಪದವಿ ಪೂರ್ವ), , ಉಪ ನಿರ್ದೇಶಕರು(ಆಡಳಿತ) ಹಾಗೂ ಇನ್ನಿತರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಬರಗಾಲ ಎದುರಿಸಲು ಸಜ್ಜಾಗಿ: ಸಿಎಂ
ರೈಲ್ವೆ ಬಡ್ತಿ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್‌