ಜಿಲ್ಲಾ ಮಟ್ಟದ ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಉಪ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆಕನ್ನಡಪ್ರಭ ವಾರ್ತೆ ಕೊಪ್ಪಳ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕೃಷಿ ಇಲಾಖೆಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕೃಷಿ ಹಾಗೂ ಕೃಷಿ ಸಂಬoಧಿತ ಇಲಾಖೆಗಳ ಉಪ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಿತ್ತನೆಗಾಗಿ ರೈತರಿಗೆ ಗುಣಮಟ್ಟದ ಬೀಜ ಹಾಗೂ ರಸಗೊಬ್ಬರ ಒದಗಿಸಬೇಕು. ಕಳಪೆ ಹಾಗೂ ಕಲಬೆರಕೆ ಬೀಜ, ಗೊಬ್ಬರ ಮಾರಾಟಗಾರರ ಬಗ್ಗೆ ಇಲಾಖೆಯ ಕೃಷಿ ವಿಚಕ್ಷಣ ದಳದ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಅಗತ್ಯ ದಾಸ್ತಾನು ಮಾಡಿಕೊಂಡು, ಯಾವುದೇ ಕೊರತೆ ಆಗದಂತೆ ರೈತರಿಗೆ ಅನುಕೂಲ ಕಲ್ಪಿಸಬೇಕು. ರೈತರಿಂದ ಬರುವ ದೂರುಗಳಿಗೆ ತುರ್ತಾಗಿ ಸ್ಪಂದಿಸಿ, ಸಮಸ್ಯೆ ಬಗೆಹರಿಸಬೇಕು ಎಂದು ಜಿಲ್ಲಾಧಿಕಾರಿ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.2023-24ನೇ ಸಾಲಿನ ಬರಗಾಲದಿಂದ ಉಂಟಾದ ಬೆಳೆ ಹಾನಿಗೆ ಸರ್ಕಾರದಿಂದ ನೇರವಾಗಿ ರೈತರ ಖಾತೆಗೆ ಬೆಳೆ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಲಾಗುತ್ತಿದೆ. ಬೆಳೆ ಪರಿಹಾರ ಜಮೆ ಆಗದ ರೈತರ ಬ್ಯಾಂಕ್ ಖಾತೆ ಅಥವಾ ತಾಂತ್ರಿಕ ಸಮಸ್ಯೆಯನ್ನು ಪರಿಹರಿಸಲು ಸಹಾಯವಾಣಿ ಕೂಡ ತೆರೆಯಲಾಗಿದೆ. ಜಿಲ್ಲೆಯ ರೈತರಲ್ಲಿ ಶೇ.85ರಷ್ಟು ರೈತರ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಲಾಗಿದೆ. ಬಾಕಿ ಉಳಿದ ರೈತರ ಬ್ಯಾಂಕ್ ಖಾತೆ, ಫ್ರೂಟ್ಸ್ ಐಡಿ, ಮುಂತಾದ ಸಮಸ್ಯೆಗಳಿಗೆ ಸಂಬoಧಿಸಿದ ಇಲಾಖೆ ಅಧಿಕಾರಿಗಳು ಸ್ಪಂದಿಸಿ ದೋಷ ಸರಿಪಡಿಸಬೇಕು. ಬ್ಯಾಂಕ್ಗಳು ರೈತರ ಬೆಳೆ ಹಾನಿ ಮೊತ್ತವನ್ನು ಅವರ ಸಾಲದ ಖಾತೆಗೆ ಜಮೆ ಮಾಡಬಾರದು ಎಂದು ಆದೇಶಿಸಲಾಗಿದೆ. ಆದೇಶವನ್ನು ಮೀರಿದ ಬ್ಯಾಂಕ್ ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಬ್ಯಾಂಕ್ನಲ್ಲಿ ಉಂಟಾಗುವ ಯಾವುದೇ ತೊಂದರೆಗಳಿಂದ ರೈತರಿಗೆ ಸಮಸ್ಯೆ ಉಂಟಾಗಬಾರದು. ಅಂತಹ ತಾಂತ್ರಿಕ ಸಮಸ್ಯೆಗಳನ್ನು ತುರ್ತಾಗಿ ಸರಿಪಡಿಸಿಕೊಂಡು ರೈತರಿಗೆ ಶೀಘ್ರ ಪರಿಹಾರ ದೊರಕಿಸಿಕೊಡುವುದು ಬ್ಯಾಂಕ್ಗಳ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ, ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ವೀರೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.ಬಾಕ್ಸ್
ಜಿಲ್ಲೆಯಲ್ಲಿ ಕೃಷಿ ಮೇಳ ಆಯೋಜಿಸಿಕೃಷಿ ಸಂಬoಧಿತ ಇಲಾಖೆಗಳಾದ ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಪಶು ಸಂಗೋಪನಾ ಇಲಾಖೆಗಳ ಸಹಯೋಗದಲ್ಲಿ ಜಿಲ್ಲೆಯಲ್ಲಿ ಕೃಷಿ ಮೇಳ ಆಯೋಜಿಸಬೇಕು. ಮೇಳದಲ್ಲಿ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ, ಆಧುನಿಕ ಕೃಷಿ ತಂತ್ರಜ್ಞಾನ, ಸರ್ಕಾರದ ಯೋಜನೆಗಳು, ಸಾಲ ಸೌಲಭ್ಯಗಳು, ಮಿಶ್ರ ಹಾಗೂ ಸಾವಯವ ಬೇಸಾಯ, ಋತುಮಾನಾಧಾರಿತ ತೋಟಗಾರಿಕೆ ಬೆಳೆಗಳು, ಮಾರುಕಟ್ಟೆ ಸೌಲಭ್ಯ, ಬೆಳೆಗಳ ಮೌಲ್ಯವರ್ಧನೆ ಮುಂತಾದವುಗಳ ಕುರಿತು ಪ್ರಾತ್ಯಕ್ಷಿಕೆ ಸಹಿತ ಮಾಹಿತಿ ನೀಡಲು ಮಳಿಗೆ ಸ್ಥಾಪಿಸಬೇಕು. ಸಮಗ್ರ ಬೇಸಾಯದ ಬಗ್ಗೆ ತಜ್ಞರ ಮೂಲಕ, ಯಶಸ್ವಿ ರೈತರ ಮೂಲಕ ಮಾಹಿತಿ ಕೊಡಿಸಬೇಕು. ಈ ಬಗ್ಗೆ ಕೃಷಿ ಇಲಾಖೆ ಹಾಗೂ ಕೃಷಿ ಸಂಬoಧಿತ ಇಲಾಖೆಗಳು ಒಟ್ಟಾಗಿ ಪರಸ್ಪರ ಚರ್ಚಿಸಿ ಸೂಕ್ತ ಯೋಜನೆ ರೂಪಿಸಬೇಕು ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ತಿಳಿಸಿದರು.21ಕೆಪಿಎಲ್25 ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕೃಷಿ ಹಾಗೂ ಕೃಷಿ ಸಂಬoಧಿತ ಇಲಾಖೆಗಳ ಉಪ ಸಮಿತಿ ಸಭೆ ನಡೆಯಿತು.